Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:31 - ಪರಿಶುದ್ದ ಬೈಬಲ್‌

31 ನಂತರ ಯೇಸು ತನ್ನ ಶಿಷ್ಯರಿಗೆ ಉಪದೇಶಿಸುತ್ತಾ “ಮನುಷ್ಯಕುಮಾರನು ಅನೇಕ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಿರಿಯ ಯೆಹೂದ್ಯನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಆತನನ್ನು ತಿರಸ್ಕರಿಸಿ ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬರುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಈ ಘಟನೆಯ ಬಳಿಕ ಯೇಸುಸ್ವಾಮಿ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಪ್ರಧಾನ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು; ಆದರೆ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದು ತಮ್ಮ ಶಿಷ್ಯರಿಗೆ ಮುಚ್ಚುಮರೆಯಿಲ್ಲದೆ ಬೋಧಿಸಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇದಲ್ಲದೆ ಆತನು - ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತವಾಗಿ ಕೊಲ್ಲಲ್ಪಟ್ಟು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವದಕ್ಕೆ ಪ್ರಾರಂಭಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಮನುಷ್ಯಪುತ್ರನಾದ ನಾನು ಅನೇಕ ಬಾಧೆಗಳನ್ನು ಅನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ ಕೊಲೆಗೆ ಗುರಿಯಾಗಿ ಮೂರು ದಿವಸಗಳಾದ ಮೇಲೆ ಜೀವಂತವಾಗಿ ಎದ್ದು ಬರುವುದು ಅವಶ್ಯ ಎಂದು ಅವರಿಗೆ ಬೋಧಿಸಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಜೆಜುನ್ ಅಪ್ಲ್ಯಾ ಶಿಸಾಕ್ನಿ "ಮಾನ್ಸಾಚ್ಯಾ ಲೆಕಾಕ್ ಕಸ್ಟ್ ಸೊಸುಕುಚ್ ಪಾಜೆ, ಜಾನ್ತ್ಯಾ ಲೊಕಾನಿ, ಮೊಟ್ಯಾ ಯಾಜಕಾನಿ ಅನಿ ಶಾಸ್ತರಾ ಶಿಕ್ವುತಲ್ಯಾನಿ ತೆಕಾ ತಿರಸ್ಕಾರ್ ಕರುಕುಚ್ ಪಾಜೆ. ಅನಿ ತೊ ಮರುಕ್ ಪಾಜೆ, ಖರೆ, ತೊ ತಿನ್ವ್ಯಾ ದಿಸಿ ಮರಲ್ಲ್ಯಾತ್ನಾ ಝಿತ್ತೊ ಹೊವ್ನ್ ಉಟುನ್ ಯೆತಾ."ಮನುನ್ ಸಾಂಗುಕ್ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:31
27 ತಿಳಿವುಗಳ ಹೋಲಿಕೆ  

“ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.


ಯೇಸು, “ಈ ದೇವಾಲಯವನ್ನು ಕೆಡವಿರಿ, ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟುತ್ತೇನೆ” ಎಂದು ಉತ್ತರಕೊಟ್ಟನು.


ಕ್ರಿಸ್ತನು ತನ್ನ ಮಹಿಮೆಯನ್ನು ಪ್ರವೇಶಿಸುವ ಮೊದಲು ಇಂಥ ಶ್ರಮೆಗಳನ್ನು ಅನುಭವಿಸಬೇಕು ಎಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.


ಆದರೆ ಅದಕ್ಕಿಂತಲೂ ಮೊದಲು, ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಿ ಈ ಕಾಲದ ಜನರಿಂದ ತಿರಸ್ಕರಿಸಲ್ಪಡುವನು.


ಪವಿತ್ರಗ್ರಂಥದಲ್ಲಿ ಬರೆದಿರುವಂತೆ, ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’


ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.


ಎರಡು ದಿವಸಗಳ ತರುವಾಯ ನಮ್ಮನ್ನು ತಿರುಗಿ ಜೀವಂತ ಮಾಡುವನು. ಮೂರನೇ ದಿವಸದಲ್ಲಿ ನಮ್ಮನ್ನು ಎಬ್ಬಿಸುವನು. ಆಗ ನಾವು ಆತನ ಸಮೀಪದಲ್ಲಿ ವಾಸಿಸಬಹುದು.


ಹೂಳಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬಂದನು.


ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.


ಯೋನನು ಸಮುದ್ರದೊಳಗೆ ಬಿದ್ದಾಗ, ಅವನನ್ನು ನುಂಗಿಬಿಡಲು ಯೆಹೋವನು ಒಂದು ದೊಡ್ಡ ಮೀನಿಗೆ ಆಜ್ಞಾಪಿಸಿದನು. ಯೋನನು ಆ ಮೀನಿನ ಹೊಟ್ಟೆಯೊಳಗೆ ಮೂರು ಹಗಲು ಮೂರು ರಾತ್ರಿ ಇದ್ದನು.


ಜನರು ಆತನನ್ನು ಪರಿಹಾಸ್ಯ ಮಾಡಿದರು. ಆತನ ಸ್ನೇಹಿತರು ಆತನನ್ನು ತೊರೆದರು. ಆತನು ನೋವಿನಿಂದ ಬಳಲಿದನು. ಆತನು ಕಾಯಿಲೆಯಿಂದ ಬಾಧಿತನಾಗಿದ್ದನು. ಜನರು ಆತನ ಕಡೆಗೆ ನೋಡಲೂ ಇಲ್ಲ. ನಾವು ಆತನನ್ನು ಗಮನಕ್ಕೆ ತರಲೇ ಇಲ್ಲ.


ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.


ಆದರೆ ಇಂದು ನೀವು ನಿಮ್ಮ ದೇವರನ್ನು ತಿರಸ್ಕರಿಸಿರುವಿರಿ. ನಿಮ್ಮ ದೇವರು ನಿಮ್ಮನ್ನು ಕಷ್ಟಗಳಿಂದ ಮತ್ತು ಸಮಸ್ಯೆಗಳಿಂದ ರಕ್ಷಿಸುತ್ತಾನೆ. ಆದರೆ ನೀವು, ‘ಇಲ್ಲ, ನಮ್ಮನ್ನಾಳಲು ನಮಗೊಬ್ಬ ರಾಜನು ಬೇಕು’ ಎಂದು ಕೇಳಿದಿರಿ. ಈಗ ಬನ್ನಿ, ನೀವು, ನಿಮ್ಮ ಕುಲಗಳ ಮತ್ತು ಗೋತ್ರಗಳ ಸಮೇತವಾಗಿ ಯೆಹೋವನ ಸಮ್ಮುಖದಲ್ಲಿ ನಿಲ್ಲಿರಿ” ಎಂದು ಹೇಳಿದನು.


ಯೆಹೋವನು ಅವನಿಗೆ, “ಜನರು ನಿನಗೆ ಹೇಳಿದಂತೆ ಮಾಡು ಅವರು ನಿನ್ನನ್ನು ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ತಿರಸ್ಕರಿಸಿದ್ದಾರೆ! ಅವರಿಗೆ ನಾನು ರಾಜನಾಗಿರುವುದು ಬೇಕಿಲ್ಲ!


ನನ್ನಲ್ಲಿ ನಂಬಿಕೆ ಇಡದಿರುವವನಿಗೆ ಮತ್ತು ನಾನು ಹೇಳುವುದನ್ನು ತಿರಸ್ಕರಿಸುವವನಿಗೆ ತೀರ್ಪುಮಾಡುವಂಥದ್ದು ನಾನು ಆಡಿದ ಮಾತುಗಳೇ. ಅಂತಿಮ ದಿನದಂದು ಅವೇ ಅವನಿಗೆ ತೀರ್ಪುಮಾಡುತ್ತವೆ.


“ಸ್ವಾಮೀ, ಆ ಸುಳ್ಳುಗಾರನು ಬದುಕಿದ್ದಾಗ, ‘ಮೂರು ದಿನಗಳ ಬಳಿಕ ನಾನು ಪುನರುತ್ಥಾನ ಹೊಂದುತ್ತೇನೆ’ ಎಂದು ಹೇಳಿದ್ದು ನಮಗಿನ್ನೂ ನೆನಪಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು