Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:17 - ಪರಿಶುದ್ದ ಬೈಬಲ್‌

17 ಒಬ್ಬನು, “ಗುರುವೇ, ನನ್ನ ಮಗನಿಗೆ ದೆವ್ವ ಹಿಡಿದಿದ್ದ ಕಾರಣ ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ತಂದೆನು. ಅವನು ಮಾತಾಡಲಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕರೇ, ನನ್ನ ಮಗನನ್ನು ತಮ್ಮ ಬಳಿಗೆಂದು ಕರೆತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಗುಂಪಿನಲ್ಲಿ ಒಬ್ಬನು - ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರಕೊಂಡು ಬಂದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸಮೂಹದಲ್ಲಿದ್ದ ಒಬ್ಬನು, “ಬೋಧಕರೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತೆಗೆದುಕೊಂಡು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ತ್ಯಾ ಲೊಕಾನಿತ್ಲ್ಯಾ ಎಕ್ ಮಾನ್ಸಾನ್ “ಗುರುಜಿ,ಮಾಜ್ಯಾ ಲೆಕಾಕ್ ಮಿಯಾ ತುಜೆಕ್ಡೆ ಘೆವ್ನ್ ಯೆಲಾ, ತೆಕಾ ಗಿರೊಲಾಗ್ಲಾ ತೆಕಾ ಬೊಲುಕ್ ಹೊಯ್ನಾ.” ಮನುನ್ ಜೆಜುಕ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:17
12 ತಿಳಿವುಗಳ ಹೋಲಿಕೆ  

ಒಮ್ಮೆ ಯೇಸು ಮೂಕದೆವ್ವದಿಂದ ಪೀಡಿತನಾಗಿದ್ದ ಒಬ್ಬನನ್ನು ಬಿಡಿಸುತ್ತಿದ್ದನು. ಆ ದೆವ್ವವು ಅವನನ್ನು ಬಿಟ್ಟು ಹೊರಗೆ ಬಂದಾಗ ಅವನು ಮಾತಾಡಿದನು. ಇದನ್ನು ಕಂಡ ಜನರು ಬೆರಗಾದರು.


ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿಬರುತ್ತಿರುವುದನ್ನು ಕಂಡ ಯೇಸು, ಆ ದೆವ್ವಕ್ಕೆ, “ಎಲೈ ಕಿವುಡು ಮೂಕ ದೆವ್ವವೇ, ಈ ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು.


ಯೇಸು ಜುದೇಯದಿಂದ ಬಂದು ಈಗ ಗಲಿಲಾಯದಲ್ಲಿ ಇದ್ದಾನೆ ಎಂಬ ಸುದ್ದಿಯನ್ನು ಅವನು ಕೇಳಿದನು. ಆದ್ದರಿಂದ ಅವನು ಆತನ ಬಳಿಗೆ ಹೋಗಿ ತನ್ನ ಮಗನನ್ನು ಗುಣಪಡಿಸುವುದಕ್ಕಾಗಿ ಕಪೆರ್ನೌಮ್‌ಗೆ ಬರಬೇಕೆಂದು ಆತನನ್ನು ಬೇಡಿಕೊಂಡನು. ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು.


ಗುಂಪಿನಲ್ಲಿದ್ದ ಒಬ್ಬ ಮನುಷ್ಯನು, “ಉಪದೇಶಕನೇ, ದಯಮಾಡಿ ಬಂದು ನನ್ನ ಮಗನನ್ನು ನೋಡು. ನನಗೆ ಅವನೊಬ್ಬನೇ ಮಗನು.


ಜನರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಆಶೀರ್ವದಿಸಲೆಂದು ಅವರನ್ನು ಯೇಸುವಿನ ಬಳಿಗೆ ತಂದರು. ಆದರೆ ಮಕ್ಕಳನ್ನು ಯೇಸುವಿನ ಬಳಿಗೆ ತರಕೂಡದೆಂದು ಶಿಷ್ಯರು ಜನರನ್ನು ಗದರಿಸಿದರು.


ಅವಳು ಸಿರಿಯ ಪ್ರದೇಶದ ಪೊಯಿನಿಕ್ಯದಲ್ಲಿ ಹುಟ್ಟಿದ್ದಳು ಮತ್ತು ಗ್ರೀಕಳಾಗಿದ್ದಳು. ಆ ಸ್ತ್ರೀಯು ತನ್ನ ಮಗಳಲ್ಲಿರುವ ದೆವ್ವವನ್ನು ಹೊರಗಟ್ಟಬೇಕೆಂದು ಯೇಸುವಿನಲ್ಲಿ ಬೇಡಿಕೊಂಡಳು.


“ನನ್ನ ಚಿಕ್ಕಮಗಳು ಸಾಯುತ್ತಿದ್ದಾಳೆ. ದಯವಿಟ್ಟು ನೀನು ಬಂದು, ನಿನ್ನ ಕೈಗಳಿಂದ ಅವಳನ್ನು ಸ್ಪರ್ಶಿಸು. ಆಗ ಅವಳು ಗುಣವಾಗಿ ಬದುಕಿಕೊಳ್ಳುತ್ತಾಳೆ” ಎಂದು ಬಹಳವಾಗಿ ಬೇಡಿಕೊಂಡನು.


“ಪ್ರಭುವೇ, ನನ್ನ ಮಗನಿಗೆ ದಯೆತೋರು. ಅವನು ಮೂರ್ಛಾರೋಗದಿಂದ ಬಹಳ ಬಾಧೆಪಡುತ್ತಿದ್ದಾನೆ. ಅವನು ಆಗಾಗ್ಗೆ ಬೆಂಕಿಯಲ್ಲಿ ಇಲ್ಲವೇ ನೀರಿನಲ್ಲಿ ಬೀಳುತ್ತಾನೆ.


ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು.


ಅವರಿಬ್ಬರು ಹೋಗುತ್ತಿರುವಾಗ ಕೆಲವರು ಬೇರೊಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಮೂಕನಾಗಿದ್ದನು.


ಯೇಸು, “ನೀವು ಯಾವುದರ ಬಗ್ಗೆ ವಾದಿಸುತ್ತಿದ್ದೀರಿ?” ಎಂದು ಕೇಳಿದನು.


ಆ ದೆವ್ವವು ಅವನ ಮೇಲೆ ಆಕ್ರಮಣ ಮಾಡಿದಾಗಲೆಲ್ಲಾ ಅವನನ್ನು ನೆಲಕ್ಕೆ ಕೆಡವುತ್ತದೆ. ನನ್ನ ಮಗನು ಬಾಯಿಂದ ನೊರೆ ಸುರಿಸುತ್ತಾ ಹಲ್ಲುಗಳನ್ನು ಕಟಕಟನೆ ಕಡಿಯುತ್ತಾನೆ ಮತ್ತು ಬಹಳ ಬಿರುಸಾಗುತ್ತಾನೆ. ಅವನನ್ನು ಆ ದೆವ್ವದಿಂದ ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಕೇಳಿಕೊಂಡೆನು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು