Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:18 - ಪರಿಶುದ್ದ ಬೈಬಲ್‌

18 ಆ ದೆವ್ವವು ಅವನ ಮೇಲೆ ಆಕ್ರಮಣ ಮಾಡಿದಾಗಲೆಲ್ಲಾ ಅವನನ್ನು ನೆಲಕ್ಕೆ ಕೆಡವುತ್ತದೆ. ನನ್ನ ಮಗನು ಬಾಯಿಂದ ನೊರೆ ಸುರಿಸುತ್ತಾ ಹಲ್ಲುಗಳನ್ನು ಕಟಕಟನೆ ಕಡಿಯುತ್ತಾನೆ ಮತ್ತು ಬಹಳ ಬಿರುಸಾಗುತ್ತಾನೆ. ಅವನನ್ನು ಆ ದೆವ್ವದಿಂದ ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಕೇಳಿಕೊಂಡೆನು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವನಿಗೆ ಒಂದು ಮೂಕದೆವ್ವ ಹಿಡಿದಿದೆ. ಅವನ ಮೇಲೆ ಅದು ಬಂದಾಗಲೆಲ್ಲಾ ಅವನನ್ನು ನೆಲಕ್ಕೆ ಅಪ್ಪಳಿಸುತ್ತದೆ. ಅವನು ನೊರೆಕಾರುತ್ತಾ ಹಲ್ಲು ಕಡಿದುಕೊಳ್ಳುತ್ತಾನೆ. ಆಗ ಅವನ ದೇಹವೆಲ್ಲಾ ಮರಗಟ್ಟಿದಂತಾಗುತ್ತದೆ. ಆ ದೆವ್ವವನ್ನು ಬಿಡಿಸಬೇಕೆಂದು ತಮ್ಮ ಶಿಷ್ಯರನ್ನು ಕೇಳಿಕೊಂಡೆ. ಆದರೆ, ಅದು ಅವರಿಂದಾಗಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನಿಗೊಂದು ಮೂಗದೆವ್ವ ಹಿಡಿದದೆ; ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ಕೆಡವುತ್ತದೆ; ಆಗ ಅವನು ನೊರೆ ಸುರಿಸುತ್ತಾ ಕರಕರನೆ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಹೇಳಿಕೊಂಡೆ; ಅವರ ಕೈಯಿಂದ ಆಗದೆಹೋಯಿತು ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಶುದ್ಧಾತ್ಮವು ಅವನನ್ನು ಹಿಡಿದುಕೊಂಡಾಗಲೆಲ್ಲಾ ಅವನನ್ನು ಒದ್ದಾಡಿಸುತ್ತದೆ. ಅವನು ನೊರೆ ಕಾರುತ್ತಾ ತನ್ನ ಹಲ್ಲು ಕಡಿದು ಸೆಟೆದುಕೊಂಡು ಬೀಳುತ್ತಾನೆ. ಅದನ್ನು ಬಿಡಿಸಬೇಕೆಂದು ನಾನು ನಿನ್ನ ಶಿಷ್ಯರಿಗೆ ಹೇಳಿದೆನು. ಆದರೆ ಅದು ಅವರಿಂದ ಆಗಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೊ ಗಿರೊ ತೆಕಾ ಅಂಗಾತ್ ಚಡಲ್ಲ್ಯಾ ತನ್ನಾ ತೆಕಾ ಜಿಮ್ನಿಕ್ ಪಾಡ್ವುತಾ, ತೊ ತೊಂಡಾತ್ನಾ ಫೆನ್ ಕಾಡ್ತಾ ಅನಿ ಕಟ್ಕಟ್ ದಾತಾ ಚಾವ್ತಾ, ತೆಚೆ ಆಂಗ್ ಶೆಡ್ದುನ್ ಘಟ್ ಹೊತಾ. ತ್ಯಾ ಗಿರ್‍ಯಾಕ್ ಕಾಡಾ ಮನುನ್ ತುಜ್ಯಾ ಶಿಸಾಕ್ನಿ ಮಿಯಾ ಸಾಂಗ್ಲೊ, ಖರೆ ತೆ ತೆಂಚೆನ್ ಹೊವ್ಕ್ ನಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:18
16 ತಿಳಿವುಗಳ ಹೋಲಿಕೆ  

ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದೊಳಗೆ ಬೀಳು’ ಎಂದು ಹೇಳಿ, ಸಂಶಯವನ್ನೇಪಡದೆ, ನೀವು ಹೇಳಿದ್ದು ಖಂಡಿತವಾಗಿ ನೆರವೇರುತ್ತದೆ ಎಂದು ನಂಬಿದರೆ, ದೇವರು ಅದನ್ನು ನಿಮಗಾಗಿ ಮಾಡುತ್ತಾನೆ.


ಆ ದೆವ್ವವು ಅರಚಿತು. ಅದು ಆ ಹುಡುಗನನ್ನು ಮತ್ತೆ ನೆಲದ ಮೇಲೆ ಬೀಳಿಸಿ, ಒದ್ದಾಡಿಸಿ ಹೊರಬಂದಿತು. ಆ ಹುಡುಗನು ಸತ್ತವನಂತೆ ಬಿದ್ದಿದ್ದನು. ಅನೇಕ ಜನರು, “ಅವನು ಸತ್ತುಹೋದನು” ಎಂದರು.


ಆಗ ಶಿಷ್ಯರು ಆ ಹುಡುಗನನ್ನು ಯೇಸುವಿನ ಬಳಿಗೆ ತಂದರು. ಆ ದೆವ್ವವು ಯೇಸುವನ್ನು ನೋಡಿದ ಕೂಡಲೇ ಆ ಹುಡುಗನ ಮೇಲೆ ಆಕ್ರಮಣ ಮಾಡಿತು. ಆ ಹುಡುಗನು ಕೆಳಗೆ ಬಿದ್ದು, ಬಾಯಿಂದ ನೊರೆಯನ್ನು ಸುರಿಸುತ್ತಾ ಒದ್ದಾಡತೊಡಗಿದನು.


ನಾನು ನನ್ನ ಮಗನನ್ನು ನಿನ್ನ ಶಿಷ್ಯರ ಬಳಿಗೆ ತಂದೆನು. ಆದರೆ ಅವನನ್ನು ಗುಣಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ” ಎಂದನು.


ಸ್ತೆಫನನ ಈ ಮಾತುಗಳನ್ನು ಕೇಳಿದ ಆ ಯೆಹೂದ್ಯನಾಯಕರು ಬಹಳ ಕೋಪಗೊಂಡರು. ಅವರು ರೋಷದಿಂದ ಸ್ತೆಫನನ ಮೇಲೆ ಹಲ್ಲು ಕಡಿದರು.


ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. ಅವರ ದುರಾಶೆಯು ಈಡೇರದು.


ಇವರು ಸಮುದ್ರದಲ್ಲಿನ ಭೀಕರವಾದ ಅಲೆಗಳಂತಿದ್ದಾರೆ. ಈ ಅಲೆಗಳು ನೊರೆಯನ್ನು ಕಾರುವಂತೆ ಇವರು ನಾಚಿಕೆಯಿಲ್ಲದ ಕೆಲಸಗಳನ್ನು ಮಾಡುತ್ತಾರೆ. ಈ ಜನರು ಆಕಾಶದಲ್ಲಿ ಅಲೆಯುವ ನಕ್ಷತ್ರಗಳಂತಿದ್ದಾರೆ. ಇವರಿಗಾಗಿ ಶಾಶ್ವತವಾದ ಕಾರ್ಗತ್ತಲಿನ ಸ್ಥಳವನ್ನು ಕಾದಿರಿಸಲಾಗಿದೆ.


ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.


ಪರಲೋಕರಾಜ್ಯವನ್ನು ಹೊಂದತಕ್ಕವರು ಹೊರಗೆ ಕತ್ತಲೆಗೆ ಎಸೆಯಲ್ಪಡುವರು. ಅಲ್ಲಿ ಅವರು ಗೋಳಾಡುವರು ಮತ್ತು ನೋವಿನಿಂದ ಹಲ್ಲುಗಳನ್ನು ಕಡಿಯುವರು” ಎಂದನು.


“ದೇವರು ಕೋಪದಿಂದ ನನ್ನ ದೇಹವನ್ನು ಸೀಳಿಹಾಕುತ್ತಿದ್ದಾನೆ. ಆತನು ನನ್ನ ಮೇಲೆ ಹಲ್ಲು ಕಡಿಯುತ್ತಿದ್ದಾನೆ; ನನ್ನ ಶತ್ರುವು ದ್ವೇಷದಿಂದ ನನ್ನನ್ನು ನೋಡುತ್ತಿದ್ದಾನೆ.


ಒಬ್ಬನು, “ಗುರುವೇ, ನನ್ನ ಮಗನಿಗೆ ದೆವ್ವ ಹಿಡಿದಿದ್ದ ಕಾರಣ ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ತಂದೆನು. ಅವನು ಮಾತಾಡಲಾರ.


ಯೇಸು, “ವಿಶ್ವಾಸವಿಲ್ಲದ ಸಂತಾನವೇ, ನಾನು ನಿಮ್ಮೊಡನೆ ಇನ್ನೆಷ್ಟು ಕಾಲ ಇರಲಿ? ಇನ್ನೆಷ್ಟು ಕಾಲ ಸಹಿಸಿಕೊಳ್ಳಲಿ? ಆ ಹುಡುಗನನ್ನು ನನ್ನ ಬಳಿಗೆ ತನ್ನಿರಿ!” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು