Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:33 - ಪರಿಶುದ್ದ ಬೈಬಲ್‌

33 ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಅವರು ಒಂದು ಮನೆಯೊಳಗಿದ್ದಾಗ ಆತನು ತನ್ನ ಶಿಷ್ಯರಿಗೆ, “ಈ ದಿನ ನೀವು ದಾರಿಯಲ್ಲಿ ವಾದಮಾಡುತ್ತಿದ್ದುದ್ದನ್ನು ಕೇಳಿಸಿಕೊಂಡೆ. ನೀವು ಯಾವುದರ ಬಗ್ಗೆ ವಾದಮಾಡುತ್ತಿದ್ದಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅನಂತರ ಅವರೆಲ್ಲರೂ ಕಫೆರ್ನವುಮಿಗೆ ಬಂದರು. ಮನೆ ಸೇರಿದಾಗ ಯೇಸುಸ್ವಾಮಿ, “ದಾರಿಯಲ್ಲಿ ಬರುತ್ತಾ ನೀವು ನಿಮ್ಮಲ್ಲೇ ಏನು ಚರ್ಚೆಮಾಡುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದರು. ಅವರು ಮೌನತಾಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮತ್ತು ಅವರು ಕಪೆರ್ನೌವಿುಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ - ನೀವು ದಾರಿಯಲ್ಲಿ ಏನು ಮಾತಾಡಿಕೊಳ್ಳುತ್ತಿದ್ದಿರಿ ಎಂದು ಶಿಷ್ಯರನ್ನು ಕೇಳಲು ಅವರು ಸುಮ್ಮನಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ, ಯೇಸು ಅವರಿಗೆ, “ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜೆಜು ಅನಿ ಶಿಸಾ ಕಫರ್‍ನವ್ ಮನ್ತಲ್ಯಾ ಗಾವಾಕ್ ಯೆಲ್ಯಾನಿ. ತೆನಿ ಎಕ್ ಘರಾತ್ ಹೊತ್ತ್ಯಾ ತನ್ನಾ ಜೆಜುನ್ ಅಪ್ಲ್ಯಾ ಶಿಸಾಕ್ನಿ “ಆಜ್ ತುಮಿ ಯೆತಾನಾ ವಾಟೆ ವರ್‍ತಿ ಕಾಯ್ ವಾದ್ ಕರುಕ್ ಲಾಗಲ್ಲ್ಯಾಸಿ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:33
10 ತಿಳಿವುಗಳ ಹೋಲಿಕೆ  

ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.


ಜನರ ಬಗ್ಗೆ ಆತನಿಗೆ ಯಾರೂ ತಿಳಿಸುವ ಅಗತ್ಯವಿರಲಿಲ್ಲ. ಮನುಷ್ಯನ ಮನಸ್ಸಿನಲ್ಲಿ ಏನಿದೆ ಎಂಬುದು ಯೇಸುವಿಗೆ ಗೊತ್ತಿತ್ತು.


ಧರ್ಮೋಪದೇಶಕರ ಆಲೋಚನೆಯನ್ನು ತಕ್ಷಣವೇ ಗ್ರಹಿಸಿಕೊಂಡ ಯೇಸು ಅವರಿಗೆ, “ನೀವು ಹೀಗೇಕೆ ಆಲೋಚಿಸುತ್ತೀರಿ?


ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ದೇವಾಲಯಕ್ಕೆ ಯೆಹೂದ್ಯರಿಂದ ವಾರ್ಷಿಕ ತೆರಿಗೆ ವಸೂಲಿ ಮಾಡುವ ಕೆಲವರು ಪೇತ್ರನ ಬಳಿಗೆ ಬಂದು, “ನಿಮ್ಮ ಬೋಧಕನು ದೇವಾಲಯದ ವಾರ್ಷಿಕ ತೆರಿಗೆಯನ್ನು ಸಲ್ಲಿಸುವುದಿಲ್ಲವೋ?” ಎಂದು ಕೇಳಿದರು.


ಮತ್ತು ಇಸ್ಕರಿಯೋತ ಯೂದ. ಯೇಸುವನ್ನು ಆತನ ವೈರಿಗಳಿಗೆ ಒಪ್ಪಿಸಿದವನೇ ಯೂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು