Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:41 - ಪರಿಶುದ್ದ ಬೈಬಲ್‌

41 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ನೀವು ಕ್ರಿಸ್ತಭಕ್ತರು ಎಂದು ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನೀವು ಕ್ರಿಸ್ತನವರೆಂದು ನಿಮಗೆ ಯಾವನಾದರೂ ಒಂದು ತಂಬಿಗೆ ನೀರನ್ನು ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಇದಲ್ಲದೆ ನೀವು ಕ್ರಿಸ್ತನಲ್ಲಿ ಸೇರಿದವರಾದ್ದರಿಂದ ಯಾರಾದರೂ ನನ್ನ ಹೆಸರಿನಲ್ಲೆ ನಿಮಗೆ ಒಂದು ಲೋಟ ನೀರನ್ನು ಕೊಟ್ಟರೂ ಅವರು ತಮ್ಮ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಖರೆಚ್ ಮಿಯಾ ತುಮ್ಕಾ ಸಾಂಗ್ತಾ, ತುಮಿ ಮಾಜ್ಯೆ ಮನುನ್ ಕಳುನ್, ಕೊನ್ ತರ್ ತುಮ್ಕಾ ಎಕ್ ತಾಂಬ್ಯಾ ಪಾನಿ ದಿಲ್ಯಾರ್ಬಿ, ತೆಂಕಾ ತೆಚೊ ಪ್ರತಿಫಳ್ ಖರೆಚ್ ವಾವುನುಚ್ ಗಾವ್ತಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:41
11 ತಿಳಿವುಗಳ ಹೋಲಿಕೆ  

ದೀನರಾದ ಇವರಿಗೆ ನನ್ನ ಹಿಂಬಾಲಕರೆಂಬ ನಿಮಿತ್ತ ಸಹಾಯ ಮಾಡುವವನು ಖಂಡಿತವಾಗಿಯೂ ಪ್ರತಿಫಲವನ್ನು ಪಡೆಯುವನು. ನನ್ನ ಹಿಂಬಾಲಕರಿಗೆ ಕೇವಲ ಒಂದು ಬಟ್ಟಲು ತಣ್ಣೀರನ್ನು ಕೊಟ್ಟರೂ ಸಹ ಅದಕ್ಕೆ ಬರತಕ್ಕ ಪ್ರತಿಫಲವು ತಪ್ಪುವುದೇ ಇಲ್ಲ.”


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.


ನಿಮ್ಮ ಮುಂದಿರುವ ನಿಜಾಂಶಗಳನ್ನು ನೀವು ಗಮನಿಸಬೇಕು. ಒಬ್ಬ ವ್ಯಕ್ತಿಯು ತಾನು ನಿಜವಾಗಿಯೂ ಕ್ರಿಸ್ತನವನೆಂದು ತಿಳಿದುಕೊಂಡಿದ್ದರೆ ಅವನಂತೆಯೇ ನಾವೂ ಕ್ರಿಸ್ತನವರೆಂಬುದನ್ನು ಅವನು ತಿಳಿದುಕೊಳ್ಳಬೇಕು.


ಆದರೆ ಪ್ರತಿಯೊಬ್ಬನು ಕ್ರಮಬದ್ಧ ರೀತಿಯಲ್ಲಿ ಜೀವಂತವಾಗಿ ಎದ್ದುಬರುವನು. ಮೊಟ್ಟಮೊದಲನೆಯದಾಗಿ ಕ್ರಿಸ್ತನೇ ಎದ್ದುಬಂದನು. ಕ್ರಿಸ್ತನು ಮತ್ತೆ ಬರುವಾಗ ಕ್ರಿಸ್ತನಿಗೆ ಸೇರಿದ ಜನರು ಜೀವಂತವಾಗಿ ಎದ್ದುಬರುವರು.


ನೀನು ತಿನ್ನುವ ಒಂದು ಆಹಾರಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಆ ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ಆ ವ್ಯಕ್ತಿಗಾಗಿಯೂ ಸತ್ತನು.


ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ.


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.


ನೀವು ಕ್ರಿಸ್ತನವರಾಗಿದ್ದೀರಿ. ಆದ್ದರಿಂದ ನೀವು ಅಬ್ರಹಾಮನ ಸಂತಾನದವರು. ದೇವರು ಅವನಿಗೆ ಮಾಡಿದ ವಾಗ್ದಾನದ ಪ್ರಕಾರ ನೀವೆಲ್ಲರೂ ದೇವರ ಆಶೀರ್ವಾದಗಳನ್ನು ಪಡೆದುಕೊಳ್ಳುವಿರಿ.


ನೀವು ಕ್ರಿಸ್ತನಿಗೆ ಸೇರಿದವರಾಗಿದ್ದೀರಿ. ಕ್ರಿಸ್ತನು ದೇವರಿಗೆ ಸೇರಿದವನಾಗಿದ್ದಾನೆ.


ತರುವಾಯ, ಯೇಸು ಒಬ್ಬನೇ ಇದ್ದಾಗ ಹನ್ನೆರಡು ಮಂದಿ ಅಪೊಸ್ತಲರು ಮತ್ತು ಯೇಸುವಿನ ಇತರ ಶಿಷ್ಯರು ಆ ಸಾಮ್ಯಗಳ ಕುರಿತು ಆತನನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು