Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:12 - ಪರಿಶುದ್ದ ಬೈಬಲ್‌

12 ಮಾರೊತ್‌ನಲ್ಲಿ ವಾಸಿಸುವ ಜನರು ಬಲಹೀನರಾಗಿದ್ದಾರೆ. ಅವರು ಶುಭವಾರ್ತೆಗಾಗಿ ಕಾಯುತ್ತಿದ್ದಾರೆ. ಯಾಕೆಂದರೆ ಜೆರುಸಲೇಮಿನ ನಗರ ದ್ವಾರದ ಬಳಿಗೆ ಯೆಹೋವನಿಂದ ಆಪತ್ತು ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೇಡು ಯೆಹೋವನಿಂದ ಹೊರಟು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ತಮಗೆ ಮೇಲುಂಟಾಗುವುದಿಲ್ಲವೋ ಎಂದು ವೇದನೆಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮಾರೋತಿನ ನಿವಾಸಿಗಳು ತಮ್ಮ ಸಂಕಟ ಪರಿಹಾರವಾಗುವುದೋ ಇಲ್ಲವೋ ಎಂದು ವೇದನೆಪಡುತ್ತಾರೆ: ಏಕೆಂದರೆ ಸ್ವಾಮಿಯಿಂದ ಬಂದ ವಿಪತ್ತು ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೇಡು ಯೆಹೋವನಿಂದಿಳಿದು ಯೆರೂಸಲೇವಿುನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ಮೇಲುಂಟಾಗುವದಿಲ್ಲವೋ ಎಂದು ವೇದನೆಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕೇಡು ಯೆಹೋವ ದೇವರಿಂದ ಇಳಿದು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ಮೇಲುಂಟಾಗುವುದಿಲ್ಲವೋ ಎಂದು ವೇದನೆ ಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:12
9 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.


ಸಮಾರ್ಯದ ಗಾಯವು ವಾಸಿಯಾಗದು. ಆಕೆಯ ರೋಗವು (ಪಾಪ) ಯೆಹೂದಕ್ಕೆ ಹಬ್ಬಿಯದೆ. ಅದು ನನ್ನ ಜನರ ಪಟ್ಟಣದ ಹೆಬ್ಬಾಗಿಲಿನವರೆಗೆ ಹೋಗಿದೆ. ಜೆರುಸಲೇಮಿನ ತನಕ ಪಸರಿಸಿಯದೆ.


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ನಾವು ಶಾಂತಿಯನ್ನು ನಿರೀಕ್ಷಿಸಿದ್ದೆವು. ಆದರೆ ಒಳ್ಳೆಯದೇನೂ ಆಗಲಿಲ್ಲ. ಅವನು ನಮ್ಮನ್ನು ಗುಣಪಡಿಸುವ ಸಮಯಕ್ಕಾಗಿ ಕಾದುಕೊಂಡಿದ್ದೆವು. ಆದರೆ ಕೇವಲ ವಿನಾಶ ಮಾತ್ರ ಬಂದಿತು.


ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು.


ಆದರೆ ನಾನು ಒಳ್ಳೆಯವುಗಳನ್ನು ನಿರೀಕ್ಷಿಸುತ್ತಿದ್ದಾಗ ನನಗೆ ಕೇಡುಗಳೇ ಆದವು. ನಾನು ಬೆಳಕಿಗಾಗಿ ಎದುರುನೋಡುತ್ತಿದ್ದಾಗ ನನಗೆ ಕತ್ತಲಾಯಿತು.


ಅವನು ಶೀಲೋವನ್ನು ತಲುಪಿದಾಗ ಏಲಿಯು ಪೀಠದ ಮೇಲೆ ಕುಳಿತಿದ್ದನು. ದೇವರ ಪವಿತ್ರ ಪೆಟ್ಟಿಗೆಗೆ ಏನಾಯಿತೋ ಎಂದು ಚಿಂತಿಸುತ್ತಾ ಏಲಿಯು ನಗರದ್ವಾರದಲ್ಲಿ ಕುರ್ಚಿಯ ಮೇಲೆ ಕಾಯುತ್ತಾ ಕುಳಿತಿದ್ದನು. ಆಗ ಬೆನ್ಯಾಮೀನ್ಯನು ಶೀಲೋವನ್ನು ಪ್ರವೇಶಿಸಿ ಅಲ್ಲಿನ ಕೆಟ್ಟ ಸುದ್ದಿಯನ್ನು ಹೇಳಿದನು. ನಗರದ ಜನರೆಲ್ಲರು ಜೋರಾಗಿ ಗೋಳಾಡಿದರು.


ಆದರೆ ನೊವೊಮಿಯು ಜನರಿಗೆ, “ನನ್ನನ್ನು ನೊವೊಮಿ ಎಂದು ಕರೆಯದೆ, ನನ್ನನ್ನು ಮಾರಾ ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತನಾದ ದೇವರು ನನ್ನ ಜೀವನವನ್ನು ದುಃಖಕರವನ್ನಾಗಿ ಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು