Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:10 - ಪರಿಶುದ್ದ ಬೈಬಲ್‌

10 ಎದ್ದು ಈ ಸ್ಥಳವನ್ನು ಬಿಟ್ಟುಹೋಗು. ಇದು ನಿನ್ನ ವಿಶ್ರಾಂತಿಯ ಸ್ಥಳವಲ್ಲ, ಯಾಕೆಂದರೆ ನೀನು ಇದನ್ನು ಹಾಳು ಮಾಡಿರುವೆ. ನೀನು ಇದನ್ನು ಹೊಲಸು ಮಾಡಿರುವೆ, ಆದ್ದರಿಂದ ಇದು ನಾಶವಾಗುವದು; ಭಯಂಕರ ರೀತಿಯಲ್ಲಿ ಕೆಡವಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಳಿರಿ, ತೊಲಗಿರಿ, ಈ ದೇಶವು ನಿಮ್ಮ ಸುಖವಸತಿಯಾಗದು. ನಾಶನವನ್ನು, ವಿಪರೀತ ನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎದ್ದು ತೊಲಗಿರಿ! ಇದು ನಿಮ್ಮ ನೆಮ್ಮದಿಯ ನೆಲೆಯಲ್ಲ. ನಿಮಗೆ ನಾಶವನ್ನು, ವಿಪರೀತ ನಾಶವನ್ನು ಉಂಟುಮಾಡುವ ಹೊಲಸು ಈ ನಾಡಿಗೆ ಅಂಟಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಏಳಿರಿ, ತೊಲಗಿರಿ! ಈ ದೇಶವು ನಿಮಗೆ ಸುಖ ವಸತಿಯಾಗದು; ನಾಶನವನ್ನು, ವಿಪರೀತನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿಯ ಸ್ಥಳವಲ್ಲ, ಏಕೆಂದರೆ ಇದಕ್ಕೆ ಹೊಲಸು ಅಂಟಿಕೊಂಡು, ಯಾವ ಸುಧಾರಣೆಗೂ ಒಳಗಾಗದಂತೆ ಹಾಳಾಗಿ ಹೋಗಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:10
20 ತಿಳಿವುಗಳ ಹೋಲಿಕೆ  

ದೇವಜನರು ನಿರಪರಾಧಿಗಳಾದ ತಮ್ಮ ಮಕ್ಕಳ ರಕ್ತವನ್ನು ಆ ಸುಳ್ಳುದೇವರುಗಳಿಗೆ ಅರ್ಪಿಸಿದರು.


ಯೆಹೋವನು ಹೇಳುತ್ತಾನೆ: “ಈ ಸಾರಿ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.”


“ಚೀಯೋನಿನಿಂದ ಮಹಾಗೋಳಾಟವು ಕೇಳಿಸುತ್ತಿದೆ: ‘ನಿಜವಾಗಿಯೂ ನಾವು ಹಾಳಾಗಿಹೋದೆವು. ನಿಜವಾಗಿಯೂ ನಾವು ನಾಚಿಕೆಪಡುವಂತಾಗಿದೆ. ನಾವು ನಮ್ಮ ನಾಡನ್ನು ಬಿಡಬೇಕು, ಏಕೆಂದರೆ ನಮ್ಮ ಮನೆಗಳನ್ನು ನಾಶಪಡಿಸಲಾಗಿದೆ.’”


ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”


ನಾನು ಇಸ್ರೇಲರನ್ನು ಅವರಿಗೆ ಕೊಟ್ಟಿರುವ ದೇಶದಿಂದ ತೆಗೆದುಹಾಕುವೆನು; ನನ್ನ ಹೆಸರಿಗೋಸ್ಕರ ಪವಿತ್ರ ಮಾಡಿದ ಈ ದೇವಾಲಯವನ್ನು ತೊರೆದುಬಿಡುವೆನು. ಈ ದೇವಾಲಯದ ಬಗ್ಗೆ ಲೋಕದ ಜನರು ಗೇಲಿಮಾಡುವಂತೆ ಮಾಡುವೆನು.


ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.


ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.


ನೀವು ನಾಶವಾಗುವಿರಿ. ನಿಮ್ಮನ್ನು ನಾನು ಎಚ್ಚರಿಸುತ್ತಿದ್ದೇನೆ. ನೀವು ಯೆಹೋವನಿಗೆ ವಿಮುಖರಾದರೆ, ನಿಮಗಾಗಿ ತೆಗೆದುಕೊಳ್ಳಲು ನೀವು ಪ್ರವೇಶಿಸುತ್ತಿರುವ ಜೋರ್ಡನ್ ನದಿಯ ಆಚೆ ದಡದಲ್ಲಿರುವ ದೇಶದಲ್ಲಿ ನೀವು ಬಹುಕಾಲದವರೆಗೆ ಜೀವಿಸುವುದಿಲ್ಲ.


ಆದ್ದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ.


“ಯೆಹೂದವೇ, ತಲೆಯೆತ್ತಿ ಬೋಳುಗುಡ್ಡಗಳ ಕಡೆಗೆ ನೋಡು. ನೀನು ಕಾಮಕೇಳಿ ಆಡದ ಸ್ಥಳ ಯಾವುದಾದರೂ ಇದೆಯೇ? ಅರಬೀಯನಂತೆ ನೀನು ಮಾರ್ಗದ ಮಗ್ಗುಲಲ್ಲಿ ಪ್ರಿಯತಮರಿಗಾಗಿ ಎದುರುನೋಡುತ್ತಾ ಕುಳಿತಿರುವೆ. ನೀನು ಭೂಮಿಯನ್ನು ಅಪವಿತ್ರಗೊಳಿಸಿದೆ; ಹೇಗೆಂದರೆ, ನೀನು ಅನೇಕ ಕೆಟ್ಟಕೆಲಸಗಳನ್ನು ಮಾಡಿದೆ. ನನಗೆ ವಿಶ್ವಾಸದ್ರೋಹ ಮಾಡಿದೆ.


“ನರಪುತ್ರನೇ, ಇಸ್ರೇಲ್ ಜನಾಂಗವು ತನ್ನ ಸ್ವದೇಶದಲ್ಲಿ ವಾಸಿಸಿತು. ಆದರೆ ಅವರು ನಡೆಸಿದ ದುಷ್ಟತನದಿಂದ ದೇಶವನ್ನು ಮುಟ್ಟಾದ ಸ್ತ್ರೀಯಂತೆ ಅಶುದ್ಧಗೊಳಿಸಿದರು.


ದೇಶಾಂತರಕ್ಕೆ ಅವರನ್ನು ಚದರಿಸಿ, ಎಲ್ಲಾ ದೇಶಗಳಲ್ಲಿ ಅವರನ್ನು ಹರಡಿಸಿಬಿಟ್ಟೆನು. ಅವರು ಮಾಡಿದ ದುಷ್ಟತನಕ್ಕೆ ನಾನು ಶಿಕ್ಷಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು