Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:6 - ಪರಿಶುದ್ದ ಬೈಬಲ್‌

6 ಜನರು, “ನೀನು ನಮಗೆ ಬೋಧಿಸಬೇಡ, ಆ ಕೆಟ್ಟವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವ ಕೆಟ್ಟ ವಿಷಯವೂ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ. ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು, ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಆ ಕೆಡುಕರು, “ಪ್ರವಾದನೆ ಮಾಡಬೇಡ. ಇಂಥ ವಿಷಯಗಳಲ್ಲಿ ಪ್ರವಾದನೆಯ ಮಾತೆತ್ತಕೂಡದು. ಆ ವಿನಾಶ ನಮಗೆ ತಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 [ಆಹಾ, ಆ ಕೆಡುಕರು] ಪ್ರವಾದನೆ ಮಾಡಬೇಡಿರಿ; ಇಂಥ ವಿಷಯಗಳಲ್ಲಿ ಪ್ರವಾದನೆಯನ್ನೆತ್ತ ಕೂಡದು; ದೂಷಣೆಗಳು ತೊಲಗುವದೇ ಇಲ್ಲ ಎಂದು ಪ್ರವಾದನೆಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಪ್ರವಾದಿಸಬೇಡ, ಈ ಸಂಗತಿಗಳ ಬಗ್ಗೆ ಪ್ರವಾದನೆ ಹೇಳಬೇಡ. ಅವಮಾನ ನಮ್ಮ ಮೇಲೆ ಬರುವುದೇ ಇಲ್ಲ,” ಎಂದು ಅವರ ಪ್ರವಾದಿಗಳು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:6
21 ತಿಳಿವುಗಳ ಹೋಲಿಕೆ  

“ಆದರೆ ನೀವು ನಾಜೀರರನ್ನು ದ್ರಾಕ್ಷಾರಸ ಕುಡಿಯುವಂತೆ ಮಾಡಿದಿರಿ. ಪ್ರವಾದಿಗಳನ್ನು ಪ್ರವಾದಿಸಬೇಡಿ ಎಂದು ಹೇಳಿದಿರಿ.


ಅವರು ಪ್ರವಾದಿಗಳಿಗೆ, “ನಾವು ಮಾಡಬೇಕಿರುವ ಕಾರ್ಯಗಳ ಬಗ್ಗೆ ದೈವೋಕ್ತಿ ನುಡಿಯಬೇಡಿ, ನಮಗೆ ಸತ್ಯವನ್ನು ತಿಳಿಸಬೇಡಿ. ನಮಗೊಪ್ಪುವ ಮನರಂಜನೆಯ ಮಾತುಗಳನ್ನಾಡಿ. ನಮಗೋಸ್ಕರ ಒಳ್ಳೆಯ ಸಂಗತಿಗಳನ್ನೇ ನಿಮ್ಮ ದರ್ಶನಗಳಲ್ಲಿ ನೋಡಿರಿ.


ಅವರು ಅಪೊಸ್ತಲರನ್ನು ಒಳಗೆ ಕರೆಸಿ, ಹೊಡೆಸಿ, ಯೇಸುವಿನ ಬಗ್ಗೆ ಜನರಿಗೆ ಹೇಳಕೂಡದೆಂದು ಎಚ್ಚರಿಸಿ ಕಳುಹಿಸಿ ಬಿಟ್ಟರು.


ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


“ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಈ ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು.


ಆದರೆ ಈ ಮನುಷ್ಯನ (ಯೇಸುವಿನ) ಬಗ್ಗೆ ಜನರಿಗೆ ಹೇಳದಂತೆ ನಾವು ಅವರನ್ನು ಬೆದರಿಸಬೇಕು. ಆಗ ಈ ಸಮಾಚಾರ ಜನರ ಮಧ್ಯದಲ್ಲಿ ಹರಡುವುದಿಲ್ಲ” ಎಂದು ಅವರು ಮಾತಾಡಿಕೊಂಡರು.


ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”


ಬೇತೇಲಿನಲ್ಲಿ ಇನ್ನು ನೀನು ಪ್ರವಾದಿಸುವದು ಬೇಡ. ಇದು ಯಾರೊಬ್ಬಾಮನ ಪವಿತ್ರಸ್ಥಳ. ಇದು ಇಸ್ರೇಲಿನ ದೇವಾಲಯ” ಎಂದು ಹೇಳಿದನು.


“ನರಪುತ್ರನೇ, ಜೆರುಸಲೇಮಿನ ಕಡೆಗೆ ನೋಡಿ ಅವರ ಪವಿತ್ರ ಸ್ಥಳಗಳಿಗೆ ವಿರುದ್ಧವಾಗಿ ಹೇಳು. ನನ್ನ ಪರವಾಗಿ ಇಸ್ರೇಲ್ ದೇಶದ ವಿರುದ್ಧವಾಗಿ ಮಾತನಾಡು.


“ನರಪುತ್ರನೇ, ಯೆಹೂದದ ದಕ್ಷಿಣದಲ್ಲಿರುವ ನೆಗೆವ್ ಕಡೆಗೆ ನೋಡು. ನೆಗೆವ್ ಅಡವಿಗೆ ವಿರುದ್ಧವಾಗಿ ಮಾತನಾಡು.


ನಿನ್ನ ನಾಲಿಗೆಯು ಸೇದಿ ಹೋಗುವಂತೆ ಮಾಡುವೆನು. ನಿನಗೆ ಮಾತನಾಡಲು ಆಗದು. ಆದ್ದರಿಂದ ಅವರನ್ನು ಖಂಡಿಸಲು ಯಾರೂ ಇರುವದಿಲ್ಲ. ಯಾಕೆಂದರೆ ಆ ಜನರು ಯಾವಾಗಲೂ ನನ್ನ ವಿರುದ್ಧವಾಗಿ ವರ್ತಿಸುವರು.


ನಮ್ಮ ಯಾವ ಚಿಹ್ನೆಗಳೂ ನಮಗೆ ಕಾಣಲಿಲ್ಲ. ಪ್ರವಾದಿಗಳಲ್ಲಿ ಯಾರೂ ಉಳಿದಿಲ್ಲ. ಯಾರಿಗೂ ದಿಕ್ಕೇ ತೋಚುತ್ತಿಲ್ಲ.


ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.)


ಆದ್ದರಿಂದ ಯೆಹೋವನ ಸಂದೇಶಕ್ಕೆ ಕಿವಿಗೊಡು. ಆದರೆ ನೀನು, ‘ಇಸ್ರೇಲರಿಗೆ ವಿರುದ್ಧವಾಗಿ ಪ್ರವಾದಿಸಬೇಡ. ಇಸಾಕನ ಕುಟುಂಬದ ವಿರುದ್ಧ ಪ್ರಸಂಗಿಸಬೇಡ’ ಎಂದು ಹೇಳುತ್ತಿ.


“ಹೀಗಿರುವದರಿಂದ ನಿಮಗೆ ರಾತ್ರಿಯಂತಿರುವದು. ನಿಮಗೆ ದರ್ಶನಗಳಾಗುವದಿಲ್ಲ. ಮುಂದೆ ಏನು ಸಂಭವಿಸುತ್ತದೆ ಎಂಬುದನ್ನು ನೀವು ನೋಡುವದಿಲ್ಲ. ಆದ್ದರಿಂದ ನಿಮಗೆ ಕತ್ತಲೆಯಂತಿದೆ. ಪ್ರವಾದಿಗಳಿಗೆ ಸೂರ್ಯನು ಮುಳುಗಿರುತ್ತಾನೆ. ಅವರಿಗೆ ಮುಂದೆ ಆಗುವಂಥದು ಕಾಣಿಸುವುದಿಲ್ಲ. ಆದ್ದರಿಂದ ಅವರಿಗೆ ಎಲ್ಲಾ ಕತ್ತಲೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು