Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:8 - ಪರಿಶುದ್ದ ಬೈಬಲ್‌

8 ಆದರೆ ನನಗೆ ವೈರಿಯಂತೆ ಎದ್ದುನಿಂತಿರುವ ನನ್ನ ಜನರೇ, ನೀವು ಹಾದುಹೋಗುವವರ ಬಟ್ಟೆಯನ್ನು ಅವರ ಬೆನ್ನಿನ ಮೇಲಿಂದ ಕಿತ್ತುಕೊಳ್ಳುತ್ತೀರಿ. ನಿಭರ್ಯವಾಗಿ ಓಡಾಡುವ ಜನರಿಂದ ಕೈದಿಗಳೋ ಎಂಬಂತೆ ಸುಲಿದುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ. ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿ ಬರುವವರ ಮೇಲಂಗಿಯನ್ನು ಕಿತ್ತುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಸರ್ವೇಶ್ವರ: “ಇತ್ತೀಚೆಗೆ ನನ್ನ ಜನರಿಗೆ ನೀವೇ ಶತ್ರುಗಳು. ಜಗಳಮಾಡಲು ಒಪ್ಪದೆ, ಸಮಾಧಾನದಿಂದ ತಿರುಗಾಡುವರ ಮೇಲಂಗಿಯನ್ನು ಕಸಿದುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ; ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿಬರುವವರ ಅಂಗಿಯ ಮೇಲಿನಿಂದ ಶಲ್ಯವನ್ನು ಕಸುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ. ಯುದ್ಧದಿಂದ ತಿರುಗಿಕೊಂಡು ನಿರ್ಭಯವಾಗಿ ಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:8
10 ತಿಳಿವುಗಳ ಹೋಲಿಕೆ  

ಇದರರ್ಥವೇನೆಂದರೆ ಮನಸ್ಸೆಯು ಎಫ್ರಾಯೀಮನೊಡನೆ ಯುದ್ಧ ಮಾಡುವನು ಮತ್ತು ಎಫ್ರಾಯೀಮನು ಮನಸ್ಸೆಯೊಂದಿಗೆ ಯುದ್ಧಮಾಡುವನು. ಆಮೇಲೆ ಅವರಿಬ್ಬರೂ ಸೇರಿ ಯೆಹೂದದೊಂದಿಗೆ ಯುದ್ಧ ಮಾಡುವರು. ಯೆಹೋವನು ಇಸ್ರೇಲರ ಮೇಲೆ ಇನ್ನೂ ಕೋಪದಿಂದಿದ್ದಾನೆ; ತನ್ನ ಜನರನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ನನ್ನ ವೈರಿಗಳು ತಮ್ಮ ಸ್ನೇಹಿತರ ಮೇಲೆಯೇ ಆಕ್ರಮಣ ಮಾಡುವರು; ತಮ್ಮ ಒಡಂಬಡಿಕೆಗಳನ್ನು ತಾವೇ ಉಲ್ಲಂಘಿಸುವರು.


ನಮ್ಮ ಪಟ್ಟಣವು ಇಸ್ರೇಲರಲ್ಲಿ ಶಾಂತಿಯಿಂದಲೂ ರಾಜನಿಷ್ಠೆಯಿಂದಲೂ ಇದೆ. ಈ ಕಾರಣದಿಂದ ಈ ಪಟ್ಟಣವು ಇಸ್ರೇಲ್ ಪಟ್ಟಣಗಳಲ್ಲಿ ತಾಯಿ ಎನಿಸಿಕೊಂಡಿದೆ. ಇಂಥ ಪಟ್ಟಣವನ್ನು ನೀನು ನಾಶಮಾಡುವುದು ಸರಿಯೋ?” ಎಂದು ಕೇಳಿದಳು.


ನನ್ನ ‘ಸ್ವಾಸ್ತ್ಯವಾದ ಜನರು’ ನನಗೊಂದು ಅರಣ್ಯದ ಸಿಂಹದಂತಾಗಿದ್ದಾರೆ. ಅವರು ನನ್ನನ್ನು ಕಂಡು ಗರ್ಜಿಸುತ್ತಾರೆ. ಆದ್ದರಿಂದಲೇ ನಾನು ಅವರಿಗೆ ವಿಮುಖನಾದೆನು.


ನೀವು ಶಿಷ್ಟತನವನ್ನು ದ್ವೇಷಿಸಿ ದುಷ್ಟತನವನ್ನು ಪ್ರೀತಿಸುತ್ತೀರಿ! ನೀವು ಜನರ ಚರ್ಮವನ್ನು ಸುಲಿಯುತ್ತಾ ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತೆಗೆಯುತ್ತೀರಿ.


ನೀವು ನನ್ನ ಜನರ ದೇಹದಿಂದ ಚರ್ಮ ತೆಗೆದು ಎಲುಬುಗಳನ್ನು ತುಂಡುಮಾಡಿ ಅವರನ್ನು ನಾಶಮಾಡುತ್ತೀರಿ. ತಪ್ಪಲೆಯೊಳಗೆ ಬೇಯಿಸಲು ಮಾಂಸ ತುಂಡುಮಾಡಿ ಹಾಕುವಂತೆ ನೀವು ಅವರ ಎಲುಬುಗಳನ್ನು ತುಂಡುಮಾಡುತ್ತೀರಿ.


ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.


ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು