Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:3 - ಪರಿಶುದ್ದ ಬೈಬಲ್‌

3 ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು. ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು. ಇನ್ನು ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬಗೆಹರಿಸುವನಾತ ಹಲವು ರಾಷ್ಟ್ರಗಳಾ ವ್ಯಾಜ್ಯವನು ತೀರಿಸುವನು ಪ್ರಬಲ ಜನಾಂಗಗಳಿಗೆ ನ್ಯಾಯವನು. ಹಾಕುವರವರು ಕುಲುಮೆಗೆ ತಮ್ಮ ಕತ್ತಿಗಳನು ಮಾರ್ಪಡಿಸುವರು ಅವುಗಳನ್ನು ಗುಳಗಳನ್ನಾಗಿ ಭರ್ಜಿಗಳನ್ನೂ ಕುಡುಗೋಲುಗಳನ್ನಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು; ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು; ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು, ಇನ್ನು ಯುದ್ಧಾಭ್ಯಾಸವು ನಡೆಯುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗಗಳಿಗೆ ತೀರ್ಪುಕೊಡುವನು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ. ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:3
40 ತಿಳಿವುಗಳ ಹೋಲಿಕೆ  

ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.


“ಆ ಸಮಯದಲ್ಲಿ ನಾನು ಇಸ್ರೇಲರಿಗೋಸ್ಕರವಾಗಿ ಅಡವಿಯ ಮೃಗಗಳೊಂದಿಗೂ ಆಕಾಶದ ಪಕ್ಷಿಗಳೊಂದಿಗೂ ನೆಲದ ಮೇಲೆ ಹರಿದಾಡುವ ಜಂತುಗಳೊಂದಿಗೂ ಒಡಂಬಡಿಕೆ ಮಾಡುವೆನು. ನಾನು ಯುದ್ಧದ ಆಯುಧ, ಬಿಲ್ಲು, ಖಡ್ಗಗಳನ್ನು ತುಂಡು ಮಾಡುವೆನು. ಆ ದೇಶದೊಳಗೆ ಯಾವ ಆಯುಧವೂ ಇರದು. ಆಗ ಇಸ್ರೇಲಿನ ಜನರು ನಿಶ್ಟಿಂತೆಯಿಂದ ಮಲಗುವರು.


ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”


ತೋಳಗಳೂ ಕುರಿಮರಿಗಳೂ ಒಟ್ಟಾಗಿ ಮೇಯುವವು. ಸಿಂಹಗಳು ದನಕುರಿಗಳಂತೆ ಹುಲ್ಲನ್ನು ಮೇಯುತ್ತವೆ. ವಿಷದ ಹಾವುಗಳು ಕೇವಲ ಮಣ್ಣನ್ನೇ ತಿನ್ನುತ್ತವೆ. ನನ್ನ ಪವಿತ್ರಪರ್ವತದಲ್ಲಿ ಅವು ಯಾರಿಗೂ ಕೇಡುಮಾಡುವುದಿಲ್ಲ; ಯಾರಿಗೂ ಭಯ ಹುಟ್ಟಿಸುವುದಿಲ್ಲ.” ಇವು ಯೆಹೋವನ ನುಡಿಗಳು.


ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕೆಂದರೆ ಆತನು ಭೂಲೋಕವನ್ನು ಆಳಲು ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.


ಯಾಕೆಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ. ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು.


ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು.


ಆಗ ಯೆಹೋವನು ಆ ಜನಾಂಗಗಳ ವಿರುದ್ಧವಾಗಿ ಯುದ್ಧ ಮಾಡುವನು. ಅದು ಭಯಂಕರವಾದ ಕಾದಾಟವಾಗಿರುವದು.


ಅರಸನು ಹೀಗೆನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು.


ಕೆಲವು ಜನಾಂಗಗಳು ನನ್ನ ಮಾತಿಗೆ ಕಿವಿಗೊಡುವುದಿಲ್ಲ. ಆಗ ನಾನು ನನ್ನ ಕೋಪವನ್ನು ಪ್ರದರ್ಶಿಸಿ ಮುಯ್ಯಿತೀರಿಸುವೆನು.”


ಮತ್ತು ಎಲ್ಲಾ ಜನಾಂಗಗಳನ್ನು ನಾನು ಒಟ್ಟುಗೂಡಿಸುವೆನು. ಆ ದೇಶಗಳನ್ನು ಯೆಹೋಷಾಫಾಟ್ ತಗ್ಗಿಗೆ ಕರೆತರುವೆನು. ಅಲ್ಲಿ ಅವರಿಗೆ ನ್ಯಾಯತೀರಿಸುವೆನು. ಆ ದೇಶಗಳವರು ನನ್ನ ಜನರಾದ ಇಸ್ರೇಲರನ್ನು ಚದರಿಸಿದ್ದರು. ಅವರನ್ನು ಪರದೇಶಗಳಲ್ಲಿ ವಾಸಿಸುವಂತೆ ಮಾಡಿದರು. ಆದ್ದರಿಂದ ಆ ದೇಶಗಳವರನ್ನು ನಾನು ಶಿಕ್ಷಿಸುವೆನು. ಆ ದೇಶದವರು ನನ್ನ ದೇಶವನ್ನು ವಿಭಜಿಸಿದರು.


“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.


ನಿನ್ನ ಸೇವೆಮಾಡದ ಯಾವ ರಾಜ್ಯವಾಗಲಿ ನಾಶಮಾಡಲ್ಪಡುವದು. ಹೌದು, ಆ ರಾಜ್ಯಗಳು ಸರ್ವನಾಶವಾಗುವವು.


ನಾನು ನ್ಯಾಯವಂತನೆಂದು ನಿಮಗೆ ಬೇಗನೆ ತೋರಿಸುವೆನು. ನಿಮ್ಮನ್ನು ಬೇಗನೆ ರಕ್ಷಿಸುವೆನು. ನಾನು ನನ್ನ ಸಾಮರ್ಥ್ಯದಿಂದ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವೆನು. ದೂರದೇಶದವರು ನನಗೋಸ್ಕರ ಕಾಯುತ್ತಿದ್ದಾರೆ. ಅವರು ತಮ್ಮ ರಕ್ಷಣೆಗಾಗಿ ನನ್ನ ಶಕ್ತಿಯನ್ನು ಎದುರುನೋಡುತ್ತಿದ್ದಾರೆ.


ಬಲಾಢ್ಯ ದೇಶಗಳ ಜನರು ನಿನ್ನನ್ನು ಸನ್ಮಾನಿಸುವರು. ಬಲಿಷ್ಠ ನಗರಗಳ ಬಲಶಾಲಿಗಳು ನಿನಗೆ ಭಯಪಡುವರು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ದೇವರೇ ಎದ್ದೇಳು! ನೀನೇ ನ್ಯಾಯಾಧೀಶನಾಗಿರು! ಎಲ್ಲಾ ಜನಾಂಗಗಳಿಗೆ ನೀನೇ ನಾಯಕನಾಗಿರು!


ಅವನ ಆಡಳಿತದ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ. ಚಂದ್ರನಿರುವವರೆಗೂ ಶಾಂತಿ ನೆಲಸಿರಲಿ.


ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; ಬಿಲ್ಲುಗಳನ್ನೂ ಗುರಾಣಿಗಳನ್ನೂ ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು.


ಯೆಹೋವನು ತನ್ನ ಶತ್ರುಗಳನ್ನು ನಾಶಗೊಳಿಸುವನು. ಮಹೋನ್ನತನಾದ ದೇವರು ಪರಲೋಕದಲ್ಲಿ ಜನರಿಗೆ ವಿರುದ್ಧವಾಗಿ ಗುಡುಗುವನು. ಯೆಹೋವನು ಬಹುದೂರದ ದೇಶಗಳಿಗೂ ತೀರ್ಪನ್ನು ಕೊಡುವನು. ಆತನು ತನ್ನ ರಾಜನಿಗೆ ಶಕ್ತಿಯನ್ನು ಕೊಡುವನು. ತಾನು ಅಭಿಷೇಕಿಸಿದ ರಾಜನನ್ನು ಬಲಗೊಳಿಸುವನು.”


ಪ್ರಖ್ಯಾತವಾದ ಬೆಟ್ಟಗುಡ್ಡಗಳಲ್ಲೆಲ್ಲಾ, ದೇಶದಲ್ಲೆಲ್ಲಾ ಶಾಂತಿಯೂ ನ್ಯಾಯವೂ ನೆಲೆಸಿರಲಿ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಮುಂದಿನ ದಿವಸಗಳಲ್ಲಿ ಬೇರೆಬೇರೆ ನಗರದ ಜನರು ಜೆರುಸಲೇಮಿಗೆ ಬರುವರು.


ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”


ನಿನ್ನನ್ನು ನಾನು ನನ್ನ ನಂಬಿಗಸ್ತಳಾದ ವಧುವನ್ನಾಗಿ ಮಾಡುವೆನು. ಆಗ ನೀನು ನನ್ನನ್ನು ನಿಜವಾಗಿಯೂ ಅರಿತುಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು