Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:16 - ಪರಿಶುದ್ದ ಬೈಬಲ್‌

16 ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:16
31 ತಿಳಿವುಗಳ ಹೋಲಿಕೆ  

“ಯೆಹೂದದ ಜನರಾದ ನಾವು ನಾಚಿಕೆಪಟ್ಟೆವು. ಜನರು ನಮ್ಮನ್ನು ಅಪಮಾನಗೊಳಿಸಿದ್ದರಿಂದ ನಾವು ನಾಚಿಕೆಪಟ್ಟಿದ್ದೇವೆ. ಏಕೆಂದರೆ ಯೆಹೋವನ ಆಲಯದ ಪವಿತ್ರ ಸ್ಥಳಗಳಲ್ಲಿ ಅಪರಿಚಿತರು ಪ್ರವೇಶಗೈದಿದ್ದಾರೆ.”


“ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು, ಮುಂದಕ್ಕೆ ಬರಲಿಲ್ಲ.


ನಾನು ಈ ನಗರವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಜೆರುಸಲೇಮಿನಿಂದ ಹಾದುಹೋಗುವಾಗ ಜನರು ಸಿಳ್ಳುಹಾಕಿ ತಲೆಯಾಡಿಸಿ ಹೋಗುವರು. ನಗರವು ಹಾಳಾಗಿರುವುದನ್ನು ಕಂಡು ಅವರು ಬೆರಗಾಗುವರು.


ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


ನೀನು ನಮ್ಮನ್ನು ನೆರೆಹೊರೆಯವರಿಗೆ ತಮಾಷೆಯನ್ನಾಗಿ ಮಾಡಿರುವೆ. ನಮ್ಮ ನೆರೆಹೊರೆಯವರು ನಮ್ಮನ್ನು ಕಂಡು ನಗುತ್ತಾರೆ; ನಮ್ಮನ್ನು ಗೇಲಿ ಮಾಡುತ್ತಾರೆ.


ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.


ಎಫ್ರಾಯೀಮ್ ಶಿಕ್ಷಿಸಲ್ಪಡುವನು. ಅವನು ದ್ರಾಕ್ಷಿಹಣ್ಣಿನಂತೆ ನಜ್ಜುಗುಜ್ಜಾಗುವನು. ಕಾರಣವೇನೆಂದರೆ, ಅವನು ಹೊಲಸನ್ನು ಹಿಂಬಾಲಿಸಲು ತೀರ್ಮಾನಿಸಿದ್ದಾನೆ.


ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.


ಆ ಜನರು ತಮಗೊದಗಿದ ಅವಮಾನವನ್ನೂ ನನಗೆ ವಿರುದ್ಧವಾಗಿ ವರ್ತಿಸಿದ್ದನ್ನೂ ಮರೆತುಬಿಡುವರು. ತಮ್ಮ ಸ್ವದೇಶದಲ್ಲಿ ಸುರಕ್ಷಿತವಾಗಿ ವಾಸಿಸುವರು. ಅವರು ಯಾರಿಗೂ ಹೆದರಬೇಕಾಗಿಲ್ಲ.


ಯೆಹೋವನೇ, ನಮಗೆ ಸಂಭವಿಸಿದ್ದನ್ನು ಜ್ಞಾಪಿಸಿಕೊ. ನಮಗಾಗಿರುವ ಅವಮಾನವನ್ನು ನೋಡು.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಜನರಿಗೆ ಮಾರ್ಗದರ್ಶನ ಮಾಡುವ ನಾಯಕರು ಜನರನ್ನು ತಪ್ಪುದಾರಿಯಲ್ಲಿ ನಡಿಸುತ್ತಿದ್ದಾರೆ. ಅವರನ್ನು ಹಿಂಬಾಲಿಸುವ ಜನರು ನಾಶವಾಗುವರು.


ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.


ಯಾಕೆಂದರೆ ಜನರು ನನ್ನನ್ನು ತೊರೆದು ಸುಳ್ಳುದೇವರುಗಳಿಗೆ ಧೂಪಹಾಕಿದರು. ಅವರು ತಮ್ಮ ಕೆಟ್ಟಕಾರ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ಉರಿಯುವ ಬೆಂಕಿಯಂತಿರುವ ನನ್ನ ಕೋಪಾಗ್ನಿಯನ್ನು ಆರಿಸಲು ಸಾಧ್ಯವಿಲ್ಲ.’


ಮನಸ್ಸೆಯು ತನ್ನ ತಂದೆಯಾದ ಹಿಜ್ಕೀಯನು ನಾಶಪಡಿಸಿದ್ದ ಉನ್ನತಸ್ಥಳಗಳನ್ನು ಮತ್ತೆ ನಿರ್ಮಿಸಿದನು. ಮನಸ್ಸೆಯು ಇಸ್ರೇಲಿನ ರಾಜನಾದ ಅಹಾಬನಂತೆ ಬಾಳನಿಗಾಗಿ ಯಜ್ಞವೇದಿಕೆಯನ್ನು ಮತ್ತು ಅಶೇರಸ್ತಂಭಗಳನ್ನು ನಿರ್ಮಿಸಿದನು. ಮನಸ್ಸೆಯು ಪರಲೋಕದ ನಕ್ಷತ್ರಗಳನ್ನು ಆರಾಧಿಸಿ ಅವುಗಳ ಸೇವೆಮಾಡಿದನು.


ಅಹಾಜನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು. ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಆಹುತಿಕೊಟ್ಟನು. ಇಸ್ರೇಲರು ದೇಶಕ್ಕೆ ಬಂದ ಕಾಲದಲ್ಲಿ ಯೆಹೋವನು ಬಲಾತ್ಕಾರದಿಂದ ಓಡಿಸಿದ ಜನಾಂಗಗಳ ಅಸಹ್ಯ ಪಾಪಗಳನ್ನು ಅವನು ಅನುಸರಿಸಿದನು.


ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)


ಈ ಆಲಯವನ್ನು ನಾಶಗೊಳಿಸುತ್ತೇನೆ. ಇದನ್ನು ನೋಡುವ ಪ್ರತಿಯೊಬ್ಬರೂ ವಿಸ್ಮಿತರಾಗುವರು. ‘ಈ ದೇಶಕ್ಕೂ ಈ ಆಲಯಕ್ಕೂ ಇಂತಹ ಭೀಕರ ಕಾರ್ಯವನ್ನು ಯೆಹೋವನು ಏಕೆ ಮಾಡಿದನು?’ ಎಂದು ಜನರು ಕೇಳುತ್ತಾರೆ.


ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.


ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.


ಆದರೆ ಎಫ್ರಾಯೀಮನು ಯೆಹೋವನನ್ನು ಅತಿಯಾಗಿ ಕೋಪಿಸಿಕೊಳ್ಳುವಂತೆ ಮಾಡಿದನು. ಎಫ್ರಾಯೀಮನು ಅನೇಕ ಮಂದಿಯನ್ನು ಕೊಲೆ ಮಾಡಿದನು. ಅವನ ಅಪರಾಧಗಳಿಗಾಗಿ ಅವನು ಶಿಕ್ಷಿಸಲ್ಪಡುವನು. ಅವನ ದೇವರಾದ ಯೆಹೋವನು ಅವನು ಮಾಡಿದ ಅಪರಾಧಕ್ಕೆ ತಕ್ಕ ದಂಡನೆಯನ್ನು ವಿಧಿಸಿ ಅವಮಾನ ಹೊರುವಂತೆ ಮಾಡುವನು.”


ಜನರು, “ನೀನು ನಮಗೆ ಬೋಧಿಸಬೇಡ, ಆ ಕೆಟ್ಟವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವ ಕೆಟ್ಟ ವಿಷಯವೂ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ.


ಆದ್ದರಿಂದ ನಾನು ನಿಮ್ಮನ್ನು ಶಿಕ್ಷಿಸಲು ಪ್ರಾರಂಭಿಸಿದೆನು. ನಿಮ್ಮ ಪಾಪಗಳ ದೆಸೆಯಿಂದ ನಿಮ್ಮನ್ನು ನಾಶಮಾಡುವೆನು.


ಯೆಹೋವನ ದೃಷ್ಟಿಯಲ್ಲಿ ಅಹಜ್ಯನು ದುಷ್ಕೃತ್ಯಗಳನ್ನು ಮಾಡಿದನು. ಅಹಜ್ಯನ ತಂದೆಯು ಸತ್ತುಹೋದ ಬಳಿಕ ಅಹಾಬನ ಕುಟುಂಬದವರು ಅಹಜ್ಯನಿಗೆ ಕೆಟ್ಟ ಸಲಹೆಗಳನ್ನು ಕೊಟ್ಟರು. ಆ ಕೆಟ್ಟ ಸಲಹೆಗಳು ಅವನನ್ನು ಮರಣಕ್ಕೆ ನಡೆಸಿದವು.


ನಾವು ಜನರಿಗೆ ಗಾದೆಯ ಮಾತಾಗಿದ್ದೇವೆ. ಸ್ವದೇಶವನ್ನು ಹೊಂದಿಲ್ಲದವರು ಸಹ ನಮ್ಮನ್ನು ಕಂಡು ತಲೆಯಾಡಿಸುತ್ತಾ ನಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು