Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:7 - ಪರಿಶುದ್ದ ಬೈಬಲ್‌

7 ದೇವರಾದ ಯೆಹೋವನು ಒಂದು ಸಾವಿರ ಟಗರು, ಹತ್ತುಸಾವಿರ ಎಣ್ಣೆಯ ಹೊಳೆಗಳಲ್ಲಿ ಸಂತೋಷಿಸುವನೋ? ನಾನು ಮಾಡಿದ ತಪ್ಪಿನ ಪರಿಹಾರಕ್ಕಾಗಿ ನನ್ನ ಚೊಚ್ಚಲ ಮಗನನ್ನು ಸಮರ್ಪಿಸಲೋ? ನನ್ನ ಶರೀರದಿಂದ ಬಂದ ಮಗನನ್ನು ನನ್ನ ಪಾಪಗಳಿಗಾಗಿ ಸಮರ್ಪಿಸಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಾವಿರಾರು ಟಗರುಗಳನ್ನೂ, ಲಕ್ಷೋಪಲಕ್ಷ ತೈಲ ಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚುತ್ತಾನೆಯೇ? ನನ್ನ ದ್ರೋಹದ ನಿಮಿತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ? ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಾವಿರಾರು ಟಗರುಗಳನ್ನೂ ಧಾರಾಕಾರವಾಗಿ ಹರಿಯುವ ತೈಲಪ್ರವಾಹಗಳನ್ನು ನೋಡಿ ಸರ್ವೇಶ್ವರ ಮೆಚ್ಚುವುದುಂಟೆ? ನಾನು ಮಾಡಿದ ದ್ರೋಹಕ್ಕಾಗಿ ನನ್ನ ಚೊಚ್ಚಲುಮಗನನ್ನೇ ಅರ್ಪಿಸಲೇ? ನನ್ನ ಪಾಪಕ್ಕಾಗಿ ನನ್ನ ಕರುಳ ಕುಡಿಯನ್ನೇ ಬಲಿಕೊಡಲೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಾವಿರಾರು ಟಗರುಗಳನ್ನೂ ಲಕ್ಷೋಪಲಕ್ಷ ತೈಲಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚಾನೇ? ನನ್ನ ದ್ರೋಹದ ನಿವಿುತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ, ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಮೆಚ್ಚುವರೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನೂ ಕೊಡಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:7
29 ತಿಳಿವುಗಳ ಹೋಲಿಕೆ  

ಅಹಾಜನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು. ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಆಹುತಿಕೊಟ್ಟನು. ಇಸ್ರೇಲರು ದೇಶಕ್ಕೆ ಬಂದ ಕಾಲದಲ್ಲಿ ಯೆಹೋವನು ಬಲಾತ್ಕಾರದಿಂದ ಓಡಿಸಿದ ಜನಾಂಗಗಳ ಅಸಹ್ಯ ಪಾಪಗಳನ್ನು ಅವನು ಅನುಸರಿಸಿದನು.


ನಿನಗೆ ನಿಜವಾಗಿಯೂ ಬೇಕಾದದ್ದು ಯಜ್ಞಗಳಲ್ಲ. ಹೀಗಿರಲು ನಿನಗೆ ಇಷ್ಟವೇ ಇಲ್ಲದ ಯಜ್ಞಗಳನ್ನು ನಾನೇಕೆ ಅರ್ಪಿಸಲಿ!


ಆದಕ್ಕೆ ಸಮುವೇಲನು, “ಯೆಹೋವನಿಗೆ ಯಾವುದು ಹೆಚ್ಚು ಮೆಚ್ಚಿಗೆಯಾಗಿದೆ? ಸರ್ವಾಂಗಹೋಮಗಳೇ? ಯಜ್ಞಗಳೇ? ಇಲ್ಲವೆ ಯೆಹೋವನ ಆಜ್ಞೆಗಳಿಗೆ ವಿಧೇಯರಾಗುವುದೇ? ದೇವರಿಗೆ ಯಜ್ಞವನ್ನು ಸಮರ್ಪಿಸುವುದಕ್ಕಿಂತ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದೇ ಉತ್ತಮ. ಟಗರುಗಳ ಕೊಬ್ಬನ್ನು ಅರ್ಪಿಸುವುದಕ್ಕಿಂತ ಆತನ ಮಾತುಗಳನ್ನು ಆಲಿಸುವುದು ಉತ್ತಮ.


ಯಾಕೆಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ. ಜನರು ತರುವ ಸರ್ವಾಂಗಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.


ಯೆಹೂದದ ಜನರು ಬೆನ್‌ಹಿನ್ನೊಮ್ ತಗ್ಗಿನಲ್ಲಿ ತೋಫೆತೆಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ಆ ಸ್ಥಳಗಳಲ್ಲಿ ಜನರು ತಮ್ಮ ಗಂಡು ಮತ್ತು ಹೆಣ್ಣುಮಕ್ಕಳನ್ನು ಕೊಂದು ಯಜ್ಞದ ಆಹುತಿಯೆಂದು ಅವರನ್ನು ಸುಡುತ್ತಾರೆ. ನೀವು ಹೀಗೆ ಮಾಡಬೇಕೆಂದು ನಾನೆಂದೂ ಹೇಳಿಲ್ಲ. ಇಂಥ ವಿಚಾರಗಳು ನನ್ನ ಮನಸ್ಸಿನಲ್ಲಿಯೂ ಬಂದಿಲ್ಲ.


ನಿಮ್ಮಮನೆಗಳಿಂದ ನಾನು ಹೋರಿಗಳನ್ನು ತೆಗೆದುಕೊಳ್ಳುವುದಿಲ್ಲ; ನಿಮ್ಮ ದೊಡ್ಡಿಗಳಿಂದ ಆಡುಗಳನ್ನು ತೆಗೆದುಕೊಳ್ಳುವುದಿಲ್ಲ.


ತೋಫೆತ್ ಎನ್ನುವುದು ಬೆನ್‌ಹಿನ್ನೋಮ್‌ನ ಮಗನಿಗೆ ಸೇರಿದ ಒಂದು ಕಣಿವೆ. ಅಲ್ಲಿ ಸುಳ್ಳುದೇವರಾದ ಮೋಲೆಕನ ಗೌರವಾರ್ಥವಾಗಿ ಜನರು ತಮ್ಮ ಮಕ್ಕಳನ್ನು ಆಹುತಿ ಕೊಡುತ್ತಿದ್ದರು ಮತ್ತು ಯಜ್ಞವೇದಿಕೆಯ ಮೇಲೆ ಸುಡುತ್ತಿದ್ದರು. ಯೋಷೀಯನು, ಜನರು ಮತ್ತೆ ಆ ಸ್ಥಳವನ್ನು ಉಪಯೋಗಿಸದಂತೆ ನಾಶಗೊಳಿಸಿದನು.


ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.


ಆಗ ಮೋವಾಬಿನ ರಾಜನು, ತನ್ನ ನಂತರ ರಾಜನಾಗುವ ಹಿರಿಯ ಮಗನನ್ನು ಕರೆದೊಯ್ದನು. ಮೋವಾಬಿನ ರಾಜನು ನಗರವನ್ನು ಸುತ್ತುವರಿದಿರುವ ಗೋಡೆಯ ಮೇಲೆ ತನ್ನ ಮಗನನ್ನು ವಧಿಸಿ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಈ ಕಾರ್ಯವು ಇಸ್ರೇಲಿನ ಜನರನ್ನು ತಳಮಳಗೊಳಿಸಿತು. ಇಸ್ರೇಲಿನ ಜನರು ಮೋವಾಬಿನ ರಾಜನನ್ನು ಬಿಟ್ಟು ತಮ್ಮ ಸ್ವಂತ ದೇಶಕ್ಕೆ ಹಿಂದಿರುಗಿ ಹೋದರು.


ಯೆಹೋವನಿಗೆ ಲೆಬನೋನಿನಲ್ಲಿರುವ ಮರಗಳನ್ನೆಲ್ಲಾ ಸುಟ್ಟರೂ ಸಾಲದು, ಲೆಬನೋನಿನಲ್ಲಿರುವ ಪ್ರಾಣಿಗಳು ಆತನ ಯಜ್ಞಕ್ಕೆ ಸಾಲವು.


“ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!


ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸುತ್ತಿದ್ದೇನೆ. ಅವನೊಂದಿಗೆ ನನ್ನ ಹೃದಯವನ್ನೇ ಕಳುಹಿಸುತ್ತಿದ್ದೇನೆ.


ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ.


ಅವರು ವ್ಯಭಿಚಾರ ಮಾಡಿದ್ದಾರೆ. ಅವರು ಕೊಲೆ ಮಾಡಿರುತ್ತಾರೆ. ಅವರು ಸೂಳೆಯಂತೆ ವರ್ತಿಸಿದ್ದಾರೆ. ಅವರು ತಮ್ಮ ಹೊಲಸು ವಿಗ್ರಹಗಳೊಂದಿಗೆ ಇರಲು ನನ್ನನ್ನು ತೊರೆದುಬಿಟ್ಟಿದ್ದಾರೆ. ಅವರಲ್ಲಿ ನನ್ನ ಮಕ್ಕಳು ಇದ್ದಾರೆ. ಆದರೆ ಅವರನ್ನು ಬಲವಂತದಿಂದ ಬೆಂಕಿಯ ಮೇಲೆ ದಾಟಿಸಿದರು. ತಮ್ಮ ಹೊಲಸು ವಿಗ್ರಹಗಳಿಗೆ ಆಹಾರ ಕೊಡುವಂತೆ ಅವರು ಹಾಗೆ ಮಾಡಿದರು.


ಯೆಹೂದದ ರಾಜರು ಬಾಳ್ ದೇವರಿಗಾಗಿ ಉನ್ನತವಾದ ಸ್ಥಳಗಳನ್ನು ಕಟ್ಟಿಸಿದರು. ಅವರು ಆ ಸ್ಥಳಗಳಲ್ಲಿ ತಮ್ಮ ಗಂಡುಮಕ್ಕಳನ್ನು ಹೋಮಮಾಡಿದರು. ಅವರು ಬಾಳ್ ದೇವರಿಗೆ ತಮ್ಮ ಗಂಡುಮಕ್ಕಳನ್ನು ಆಹುತಿಕೊಟ್ಟರು. ನಾನು ಹಾಗೆ ಮಾಡಲು ಅವರಿಗೆ ಹೇಳಿರಲಿಲ್ಲ. ನಿಮ್ಮ ಗಂಡುಮಕ್ಕಳನ್ನು ಆಹುತಿಯಾಗಿ ಕೊಡಿ ಎಂದು ನಿಮಗೆ ಹೇಳಲಿಲ್ಲ. ಅಂಥ ವಿಚಾರ ನನ್ನ ಮನಸ್ಸಿನಲ್ಲಿ ಬರಲೇ ಇಲ್ಲ.


ಆ ದಿನಗಳಲ್ಲಿ ನನ್ನ ಜೀವಿತವು ತುಂಬ ಚೆನ್ನಾಗಿತ್ತು. ನನ್ನ ಮಾರ್ಗಗಳು ಕೆನೆಯಿಂದ ತುಂಬಿರುವಂತೆಯೂ ಬಂಡೆಗಳು ನನಗಾಗಿ ಆಲೀವ್ ಎಣ್ಣೆಯ ನದಿಗಳನ್ನೇ ಹರಿಸುತ್ತಿರುವಂತೆಯೂ ನನ್ನ ಜೀವಿತವಿತ್ತು.


ಎರಡು ತಿಂಗಳು ಗತಿಸಿದ ಮೇಲೆ ಯೆಫ್ತಾಹನ ಮಗಳು ತನ್ನ ತಂದೆಯಲ್ಲಿಗೆ ಬಂದಳು. ಯೆಫ್ತಾಹನು ದೇವರಿಗೆ ಹರಕೆ ಹೊತ್ತಂತೆ ಮಾಡಿದನು. ಯೆಫ್ತಾಹನ ಮಗಳು ಎಂದೂ ಯಾರೊಂದಿಗೂ ಲೈಂಗಿಕ ಸಂಬಂಧ ಹೊಂದಲಿಲ್ಲ.


ನಾನು ಜಯಶಾಲಿಯಾಗಿ ಬರುವಾಗ ನನ್ನ ಮನೆಯಿಂದ ಹೊರ ಬರುವ ಮೊದಲನೆಯ ಜೀವಿಯನ್ನು ನಿನಗೆ ಕೊಡುತ್ತೇನೆ. ನಾನು ಅದನ್ನು ಯೆಹೋವನ ಸರ್ವಾಂಗಹೋಮಕ್ಕೆ ಆಹುತಿಯಾಗಿ ಕೊಡುವೆನು” ಎಂದು ಹರಕೆ ಮಾಡಿಕೊಂಡನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ಸರಿಯಾದ ಮತ್ತು ನ್ಯಾಯವಾದ ಕಾರ್ಯಗಳನ್ನು ಮಾಡು. ಯೆಹೋವನು ಅವುಗಳನ್ನು ಯಜ್ಞಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು.


ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ. ಯೆಹೂದ ಮತ್ತು ಜೆರುಸಲೇಮಿನಲ್ಲಿ ನಡೆಯಲಿದ್ದ ಘಟನೆಗಳ ಬಗ್ಗೆ ದೇವರು ಯೆಶಾಯನಿಗೆ ಈ ದರ್ಶನ ನೀಡಿದನು; ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ ಮತ್ತು ಹಿಜ್ಕೀಯರ ಕಾಲದಲ್ಲಿ ಯೆಶಾಯನಿಗೆ ಈ ದರ್ಶನವಾಯಿತು.


“ಜನರ ನಾಯಕರು ಯೆಹೋವನನ್ನು ಹುಡುಕಾಡುವರು. ಅವರು ತಮ್ಮ ಕುರಿದನಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವರು. ಆದರೆ ಅವರು ಯೆಹೋವನನ್ನು ಕಂಡುಕೊಳ್ಳುವದಿಲ್ಲ. ಯಾಕೆಂದರೆ ಆತನು ಅವರನ್ನು ಬಿಟ್ಟುಹೋಗಿರುತ್ತಾನೆ.


ಚೀಯೋನಿಗೆ ಕರುಣೆತೋರಿ ಜೆರುಸಲೇಮಿನ ಕೋಟೆಗಳನ್ನು ಮತ್ತೆ ನಿರ್ಮಿಸು.


ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು