Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:10 - ಪರಿಶುದ್ದ ಬೈಬಲ್‌

10 “ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ದೇವರಾದ ಯೆಹೋವನು ಎಲ್ಲಿ ಎಂದು ನನ್ನನ್ನು ಜರೆದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವದು; ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಂತೆ ತುಳಿತಕ್ಕೀಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:10
42 ತಿಳಿವುಗಳ ಹೋಲಿಕೆ  

ಇವರು ಶತ್ರುಗಳನ್ನು ಜಯಿಸುವರು. ಸೈನಿಕರು ರಸ್ತೆಯ ಧೂಳಿನ ಮೇಲೆ ಮುನ್ನಡೆದು ಯೆಹೋವನು ಅವರೊಂದಿಗಿರುವದರಿಂದ ಅವರು ಅಶ್ವಾರೂಢನಾಗಿರುವ ಶತ್ರುಸೈನ್ಯವನ್ನು ಸದೆಬಡಿಯುವರು.


ನನ್ನ ವಿರೋಧಿಗಳು ಸತತವಾಗಿ, “ನಿನ್ನ ದೇವರು ಎಲ್ಲಿ?” ಎಂದು ಕೇಳುವುದರಿಂದ ನನ್ನ ಮೂಳೆಗಳು ಮುರಿದಂತಾಗಿವೆ.


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


ಯೆಹೋವನ ಸೇವಕರಾದ ಯಾಜಕರು ಮಂಟಪಕ್ಕೂ ವೇದಿಕೆಗೂ ಮಧ್ಯದಲ್ಲಿ ಗೋಳಾಡಲಿ. ಆ ಜನರೆಲ್ಲಾ ಹೀಗೆ ಹೇಳಬೇಕು, “ಯೆಹೋವನೇ, ನಿನ್ನ ಜನರ ಮೇಲೆ ಕರುಣೆ ಇಡು, ನಿನ್ನ ಜನರನ್ನು ನಾಚಿಕೆಗೆ ತುತ್ತಾಗುವಂತೆ ಮಾಡಬೇಡ. ನಿನ್ನ ಜನರ ವಿಷಯವಾಗಿ ಅನ್ಯಜನರು ಗೇಲಿ ಮಾಡದಿರಲಿ. ಇತರ ದೇಶದ ಜನರು ನಮಗೆ ಹಾಸ್ಯ ಮಾಡುತ್ತಾ, ‘ಅವರ ದೇವರು ಎಲ್ಲಿ?’ ಎಂದು ಹೇಳದ ಹಾಗೆ ಮಾಡು.”


ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ.


ನಾನು ನನ್ನ ಶತ್ರುಗಳನ್ನು ಹೊಡೆದು ತುಂಡುತುಂಡು ಮಾಡುವೆನು; ಜಜ್ಜಿ ಪುಡಿಪುಡಿ ಮಾಡುವೆನು; ಗಾಳಿ ಬಡಿದುಕೊಂಡು ಹೋಗುವ ಧೂಳಿನಂತೆ ಅವರಾಗುವರು.


ನಾನು ನನ್ನ ಶತ್ರುಗಳನ್ನು ತುಂಡುತುಂಡಾಗಿ ಕತ್ತರಿಸಿಹಾಕಿದೆ. ಅವರು ನೆಲದ ಮೇಲಿನ ಧೂಳಿನಂತಾದರು. ನನ್ನ ಶತ್ರುಗಳನ್ನು ರಸ್ತೆಯಲ್ಲಿನ ಮಣ್ಣಿನಂತಾಗುವವರೆಗೆ ತುಳಿದುಬಿಟ್ಟೆನು.


ಎಷ್ಟೋ ಜನಾಂಗಗಳು ನಿನ್ನ ವಿರುದ್ಧ ಯುದ್ಧಕ್ಕೆ ಬಂದಿವೆ. “ಅಲ್ಲಿ ನೋಡಿ, ಚೀಯೋನ್, ಬನ್ನಿ ಆಕ್ರಮಣ ಮಾಡೋಣ” ಎಂದು ಹೇಳುವರು.


“ಯೆಹೂದದ ಜನರಾದ ನಾವು ನಾಚಿಕೆಪಟ್ಟೆವು. ಜನರು ನಮ್ಮನ್ನು ಅಪಮಾನಗೊಳಿಸಿದ್ದರಿಂದ ನಾವು ನಾಚಿಕೆಪಟ್ಟಿದ್ದೇವೆ. ಏಕೆಂದರೆ ಯೆಹೋವನ ಆಲಯದ ಪವಿತ್ರ ಸ್ಥಳಗಳಲ್ಲಿ ಅಪರಿಚಿತರು ಪ್ರವೇಶಗೈದಿದ್ದಾರೆ.”


ಅನ್ಯ ಜನಾಂಗಗಳು, “ನಿಮ್ಮ ದೇವರು ಎಲ್ಲಿ? ಆತನು ನಿಮಗೆ ಸಹಾಯಮಾಡಲಾರನೇ?” ಎಂದು ಹೇಳಲು ಅವಕಾಶ ಕೊಡಬೇಡ. ದೇವರೇ, ಅವರು ನಿನ್ನ ಸೇವಕರನ್ನು ಕೊಂದದ್ದಕ್ಕಾಗಿ ನಮ್ಮ ಕಣ್ಣೆದುರಿನಲ್ಲಿಯೇ ಅವರನ್ನು ದಂಡಿಸು.


ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು.


ಆಗ ನೀವು ದುಷ್ಟಜನರ ಮೇಲೆ ನಡೆದುಕೊಂಡು ಹೋಗುವಿರಿ; ಅವರು ನಿಮ್ಮ ಕಾಲುಗಳ ಕೆಳಗೆ ಬೂದಿಯಂತಿರುವರು. ನ್ಯಾಯತೀರ್ಪಿನ ಸಮಯದಲ್ಲಿ ನಾನು ಹಾಗೆ ಮಾಡುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಇದನ್ನು ನೋಡಿದವರಾದ ನೀವು ಹೇಳುತ್ತೀರಿ, “ಯೆಹೋವನು ಮಹಾದೇವರು. ಇಸ್ರೇಲಿನ ಹೊರಗೂ ತನ್ನ ಪ್ರತಾಪವನ್ನು ತೋರಿಸುವನು.”


ನೀನು ನಾಚಿಕೆಯಿಂದ ಮುಚ್ಚಲ್ಪಡುವೆ, ನಿರಂತರಕ್ಕೂ ನಾಶವಾಗುವೆ. ಯಾಕೆಂದರೆ ನೀನು ನಿನ್ನ ಸಹೋದರನಾದ ಯಾಕೋಬನೊಂದಿಗೆ ಕ್ರೂರವಾಗಿ ನಡೆದುಕೊಂಡೆ.


ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.


ಆದರೆ ನಾನು ಬಾಬಿಲೋನಿಗೆ ಮುಯ್ಯಿತೀರಿಸುವೆನು. ನಾನು ಬಾಬಿಲೋನಿನ ಎಲ್ಲಾ ಜನರಿಗೆ ಮುಯ್ಯಿತೀರಿಸುವೆನು. ಅವರು ಚೀಯೋನಿಗೆ ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಮುಯ್ಯಿತೀರಿಸುವೆನು. ಯೆಹೂದವೇ, ನಿನ್ನ ಎದುರಿನಲ್ಲಿಯೇ ಅವರಿಗೆ ಮುಯ್ಯಿತೀರಿಸುವೆನು.” ಇದು ಯೆಹೋವನ ನುಡಿ.


ಅವರ ದೇವರು ಎಲ್ಲಿದ್ದಾನೆಂದು ಜನಾಂಗಗಳು ಯಾಕೆ ಹೇಳಬೇಕು?


ನನ್ನ ಶತ್ರುಗಳಿಗೆ ಅವಮಾನವೇ ವಸ್ತ್ರವಾಗಲಿ! ನಾಚಿಕೆಯೇ ಅವರ ಮೇಲಂಗಿಯಾಗಲಿ.


ದುಷ್ಟರಿಗಾಗುವ ಪ್ರತಿದಂಡನೆಯನ್ನು ನೀತಿವಂತರು ಕಂಡು ಹರ್ಷಿಸುವರು; ಆ ದುಷ್ಟರ ರಕ್ತದಲ್ಲಿ ಕಾಲಾಡಿಸುವರು.


“ನಿನ್ನ ದೇವರು ಎಲ್ಲಿ?” ಎಂದು ನನ್ನ ವೈರಿಗಳು ಯಾವಾಗಲೂ ಗೇಲಿಮಾಡುವುದರಿಂದ ಹಗಲಿರುಳು ಕಣ್ಣೀರೇ ನನಗೆ ಆಹಾರವಾಯಿತು.


ಅವರು ಶೋಕಬಟ್ಟೆಗಳನ್ನು ಧರಿಸಿ ಭಯಗ್ರಸ್ತರಾಗುವರು. ಪ್ರತೀ ಮುಖದಲ್ಲಿ ನಾಚಿಕೆಯು ಕಾಣಿಸುವುದು. ತಮ್ಮ ದುಃಖವನ್ನು ಪ್ರದರ್ಶಿಸಲು ತಮ್ಮ ತಲೆಗಳನ್ನು ಬೋಳಿಸುವರು.


“ಉತ್ತರದಿಕ್ಕಿನಲ್ಲಿರುವ ಒಬ್ಬ ಮನುಷ್ಯನನ್ನು ನಾನು ಎಚ್ಚರಪಡಿಸಿದೆನು. ಅವನು ಪೂರ್ವದಿಕ್ಕಿನಿಂದ ಬರುವನು. ನನ್ನ ನಾಮವನ್ನು ಅವನು ಆರಾಧಿಸುವನು. ಕುಂಬಾರನು ಜೇಡಿಮಣ್ಣನ್ನು ತುಳಿದು ಹದಗೊಳಿಸುವಂತೆ ಅವನು ಅರಸರುಗಳ ಮೇಲೆ ತುಳಿದಾಡುವನು.


ನಿನ್ನ ಸಹೋದರನ ಸಂಕಟದಲ್ಲಿ ನೀನು ಹರ್ಷಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ಯೆಹೂದವನ್ನು ನಾಶಮಾಡುವಾಗ ನೀನು ಸಂತೋಷಪಟ್ಟೆ. ನೀನು ಹಾಗೆ ಮಾಡಬಾರದಾಗಿತ್ತು. ನೀನು ಅವರ ಸಂಕಟ ಕಾಲದಲ್ಲಿ ಕೊಚ್ಚಿಕೊಂಡೆ. ನೀನು ಹಾಗೆ ಮಾಡಬಾರದಾಗಿತ್ತು.


ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ! ನಾನು ತಿರುಗಿ ಏಳುತ್ತೇನೆ; ನಾನೀಗ ಅಂಧಕಾರದಲ್ಲಿ ಕುಳಿತುಕೊಳ್ಳುತ್ತೇನೆ. ಆದರೆ ಯೆಹೋವನು ನನ್ನ ಬೆಳಕಾಗಿರುತ್ತಾನೆ.


ಈ ವಿಷಯವು ಕಾನಾನ್ಯರಿಗೂ ದೇಶದ ಉಳಿದ ಎಲ್ಲಾ ಜನರಿಗೂ ತಿಳಿಯುವುದು. ಆಗ ಅವರು ನಮ್ಮ ಮೇಲೆ ಧಾಳಿಮಾಡಿ ನಮ್ಮೆಲ್ಲರನ್ನು ಕೊಂದು ಹಾಕುತ್ತಾರೆ. ಆಗ ನೀನು ನಿನ್ನ ಕೀರ್ತಿಯನ್ನು ಉಳಿಸಿಕೊಳ್ಳಲು ಏನು ಮಾಡುವೆ?” ಎಂದು ಪ್ರಲಾಪಿಸಿದನು.


ನೀತಿವಂತರಾದರೋ ಯೆಹೋವನ ಆಲಯದಲ್ಲಿ ಬೆಳೆಯುತ್ತಿರುವ ಲೆಬನೋನಿನ ದೇವದಾರು ವೃಕ್ಷದಂತಿರುವರು. ನೀತಿವಂತರಾದರೋ ನಮ್ಮ ದೇವಾಲಯದ ಅಂಗಳದಲ್ಲಿ ಮೊಗ್ಗು ಬಿಡುತ್ತಿರುವ ಖರ್ಜೂರದ ಮರಗಳಂತಿರುವರು.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ಎದೋಮೇ, ನಾನು ನಿನಗೆ ಪ್ರಮುಖನಾಗಲು ಬಿಡುವುದಿಲ್ಲ. ಪ್ರತಿಯೊಬ್ಬರು ನಿನ್ನನ್ನು ದ್ವೇಷಿಸುವರು.


ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು