Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:13 - ಪರಿಶುದ್ದ ಬೈಬಲ್‌

13 ದೇಶದಲ್ಲಿ ವಾಸಿಸಿದ್ದ ಜನರಿಂದಲೂ ಅವರು ಮಾಡಿದ್ದ ಕೆಲಸಗಳಿಂದಲೂ ದೇಶವು ಹಾಳಾಗಿಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಅಷ್ಟರೊಳಗೆ ಈ ದೇಶವು ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೆ ನಾಡು ಅದರ ನಿವಾಸಿಗಳ ನಿಮಿತ್ತ ಹಾಗೂ ಅವರ ದುಷ್ಕೃತ್ಯಗಳ ಪರಿಣಾಮವಾಗಿ, ಮರಳುಗಾಡಾಗಿ ಮಾರ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ [ಅಷ್ಟರೊಳಗೆ] ಈ ದೇಶವು ತನ್ನ ನಿವಾಸಿಗಳ ನಿವಿುತ್ತ, ಅವರ ದುಷ್ಕೃತ್ಯಗಳಿಗೆ ಫಲವಾಗಿ ಹಾಳುಬಿದ್ದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:13
22 ತಿಳಿವುಗಳ ಹೋಲಿಕೆ  

ಆ ಇಡೀ ಪ್ರದೇಶವು ಒಂದು ಮರುಭೂಮಿಯಾಗುವುದು. ಆ ಜನಾಂಗಗಳೆಲ್ಲ ಎಪ್ಪತ್ತು ವರ್ಷಗಳವರೆಗೆ ಬಾಬಿಲೋನಿನ ರಾಜನ ಗುಲಾಮರಾಗುವರು.


ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಬಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಬಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು.


ಆದ್ದರಿಂದ ನಾನು ನಿಮ್ಮನ್ನು ಶಿಕ್ಷಿಸಲು ಪ್ರಾರಂಭಿಸಿದೆನು. ನಿಮ್ಮ ಪಾಪಗಳ ದೆಸೆಯಿಂದ ನಿಮ್ಮನ್ನು ನಾಶಮಾಡುವೆನು.


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ನೀನು ಮಹತ್ತರವಾದ ಯೋಜನೆಗಳನ್ನು ಹಾಕಿ ಮಹತ್ಕಾರ್ಯಗಳನ್ನು ಮಾಡುವೆ. ಜನರು ಮಾಡುವ ಎಲ್ಲವನ್ನೂ ನೀನು ನೋಡುವೆ. ಒಳ್ಳೆಯದನ್ನು ಮಾಡುವವರಿಗೆ ನೀನು ಪ್ರತಿಫಲಗಳನ್ನು ಕೊಡುವೆ. ಕೆಟ್ಟದ್ದನ್ನು ಮಾಡುವವರನ್ನು ನೀನು ದಂಡಿಸುವೆ. ಅವರು ಯಾವುದಕ್ಕೆ ಅರ್ಹರೊ ಅದನ್ನು ಕೊಡುವೆ.


“ನೀವು ತಕ್ಕ ಶಿಕ್ಷೆಯನ್ನು ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನ್ನು ಸುಟ್ಟುಹಾಕುತ್ತದೆ.”


ಆಕೆ ತನಗೆ ಯೋಗ್ಯವಾದ ಪ್ರತಿಫಲವನ್ನು ಹೊಂದಬೇಕು. ಆಕೆಯ ಕಾರ್ಯಗಳಿಗಾಗಿ ಜನರೆಲ್ಲರೂ ಆಕೆಯನ್ನು ಬಹಿರಂಗವಾಗಿ ಸನ್ಮಾನಿಸಬೇಕು.


ಕೆಡುಕನ ದುಷ್ಕೃತ್ಯಗಳು ಅವನನ್ನೇ ಹಿಡಿಯುತ್ತವೆ. ಅವನ ಪಾಪಗಳು ಹಗ್ಗದಂತೆ ಅವನನ್ನೇ ಬಂಧಿಸುತ್ತವೆ.


ಆದ್ದರಿಂದ ನೀವು ನಿಮ್ಮ ದುರ್ನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ.


ನಾನು ನೋಡಿರುವಂತೆ, ಅಧರ್ಮವನ್ನು ಮತ್ತು ಕೇಡನ್ನು ಬಿತ್ತುವವರು ಅದನ್ನೇ ಕೊಯ್ಯುವರು.


ಇದನ್ನು ನೀನು ಸಾಮಾನ್ಯ ಜನರಿಗೆ ತಿಳಿಸಬೇಕು. ನೀನು ಹೀಗೆ ಹೇಳಬೇಕು, ‘ಇನ್ನೂ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಬಗ್ಗೆ ನಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಅವರು ಊಟಮಾಡುವಾಗ ಉದ್ವೇಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ.


ನಾನು ಈ ದೇಶವನ್ನು ಬರಿದಾಗಿಯೂ ಬಂಜರು ಭೂಮಿಯನ್ನಾಗಿಯೂ ಮಾಡುವೆನು. ಈ ದೇಶವು ಹೆಮ್ಮೆಪಟ್ಟುಕೊಳ್ಳುತ್ತಿದ್ದ ವಿಷಯಗಳನ್ನೆಲ್ಲಾ ಅವರು ಕಳೆದುಕೊಳ್ಳುವರು. ಇಸ್ರೇಲಿನ ಪರ್ವತಗಳು ಬೋಳುಗುಡ್ಡಗಳಾಗುವವು. ಯಾರೂ ಅದನ್ನು ದಾಟಿ ಹೋಗಲಾರರು.


ನೀವು ಯೆಹೋವನಿಗೆ ಪ್ರಾರ್ಥಿಸಬಹುದು. ಆದರೆ ಆತನು ನಿಮಗೆ ಉತ್ತರಕೊಡುವದಿಲ್ಲ. ನಿಮ್ಮ ಕೆಟ್ಟ ಪಾಪಗಳ ನಿಮಿತ್ತ ತನ್ನ ಮುಖವನ್ನು ಮರೆಮಾಡಿಕೊಳ್ಳುತ್ತಾನೆ.”


ಸ್ತ್ರೀಯು ತನ್ನ ಮಗನನ್ನು ಹೆರುವ ತನಕ ಯೆಹೋವನು ತನ್ನ ಜನರನ್ನು ತೊರೆದುಬಿಡುವನು. ಅನಂತರ ಉಳಿದ ಅವನ ಸಹೋದರರು ಇಸ್ರೇಲ್ ಜನರ ಬಳಿಗೆ ತಿರುಗಿ ಬರುವರು.


ಆ ಸಮಯದಲ್ಲಿ ಕೋಟೆಗೋಡೆಗಳಿರುವ ಎಲ್ಲಾ ಪಟ್ಟಣಗಳು ನಿರ್ಜನವಾಗುವದು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳುವ ಕಾಲದಲ್ಲಿ ಹೇಗೆ ಅಡವಿಗಳಂತೆಯೂ ಬೆಟ್ಟಗಳಂತೆಯೂ ಇದ್ದವೋ ಅದೇ ರೀತಿಯಲ್ಲಿ ಇರುವವು. ಆ ಸಮಯದಲ್ಲಿ ಇಸ್ರೇಲರು ದೇಶದೊಳಗೆ ಪ್ರವೇಶಿಸುವಾಗ ಅಲ್ಲಿಯ ನಿವಾಸಿಗಳೆಲ್ಲರೂ ಓಡಿಹೋದರು. ಮುಂಬರುವ ದಿವಸಗಳಲ್ಲಿ ದೇಶವು ಮತ್ತೆ ನಿರ್ಜನವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು