Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:8 - ಪರಿಶುದ್ದ ಬೈಬಲ್‌

8 ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ! ನಾನು ತಿರುಗಿ ಏಳುತ್ತೇನೆ; ನಾನೀಗ ಅಂಧಕಾರದಲ್ಲಿ ಕುಳಿತುಕೊಳ್ಳುತ್ತೇನೆ. ಆದರೆ ಯೆಹೋವನು ನನ್ನ ಬೆಳಕಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನ ಶತ್ರುಗಳೇ, ನನ್ನನ್ನು ನೋಡಿ ಹಿಗ್ಗಬೇಡಿ. ನಾನು ಬಿದ್ದುಹೋದರೂ, ಎದ್ದೇಳುವೆನು; ಕತ್ತಲೆಯಲ್ಲಿ ಕುಳಿತಿದ್ದರೂ ಸರ್ವೇಶ್ವರ ನನಗೆ ಬೆಳಕಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನ ಶತ್ರುವೇ, ನನ್ನ ಮೇಲೆ ಸಂತೋಷ ಪಡಬೇಡ, ನಾನು ಬಿದ್ದಿದ್ದರೂ ತಿರುಗಿ ಏಳುವೆನು. ನಾನು ಕತ್ತಲೆಯಲ್ಲಿ ಕುಳಿತುಕೊಂಡರೂ ಯೆಹೋವ ದೇವರೇ ನನಗೆ ಬೆಳಕಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:8
46 ತಿಳಿವುಗಳ ಹೋಲಿಕೆ  

ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.


ಈಗ ಅವರು ಕತ್ತಲಲ್ಲಿ ವಾಸಿಸುವರು. ಆದರೆ ಒಂದು ದೊಡ್ಡ ಬೆಳಕನ್ನು ಅವರು ನೋಡುವರು. ಅವರಿರುವ ಸ್ಥಳವು ಮರಣದ ಸ್ಥಳದಂತೆ ಅಂಧಕಾರದಿಂದ ತುಂಬಿದೆ. ಆದರೆ ದೊಡ್ಡ ಬೆಳಕು ಅವರ ಮೇಲೆ ಪ್ರಕಾಶಿಸುವದು.


ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ ದಯಾಮಯನೂ ಕೃಪಾಮಯನೂ ಆಗಿದ್ದಾನೆ.


ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!


ನಿನ್ನ ಸಹೋದರನ ಸಂಕಟದಲ್ಲಿ ನೀನು ಹರ್ಷಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ಯೆಹೂದವನ್ನು ನಾಶಮಾಡುವಾಗ ನೀನು ಸಂತೋಷಪಟ್ಟೆ. ನೀನು ಹಾಗೆ ಮಾಡಬಾರದಾಗಿತ್ತು. ನೀನು ಅವರ ಸಂಕಟ ಕಾಲದಲ್ಲಿ ಕೊಚ್ಚಿಕೊಂಡೆ. ನೀನು ಹಾಗೆ ಮಾಡಬಾರದಾಗಿತ್ತು.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ನಾನು ಏನೇ ಹೇಳಿದರೂ ವೈರಿಗಳು ನನ್ನನ್ನು ನೋಡಿ ನಗುವರು. ನನ್ನ ಕಾಯಿಲೆಯು ಪಾಪದ ಫಲವೆಂದು ಹೇಳುವರು.


ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.


ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.


“ನನ್ನ ವೈರಿಗಳು ನಾಶವಾದಾಗ ನಾನೆಂದೂ ಸಂತೋಷಪಡಲಿಲ್ಲ. ನನ್ನ ವೈರಿಗಳಿಗೆ ಕೇಡಾದಾಗ ನಾನೆಂದೂ ನಗಲಿಲ್ಲ.


ನೀತಿವಂತರಿಗೋಸ್ಕರ ಬೆಳಕೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಪ್ರಕಾಶಿಸುತ್ತವೆ.


ಇಸ್ರೇಲ್ ರಾಜ್ಯವು ನಾಶವಾದಾಗ ನೀನು ಸಂತೋಷಪಟ್ಟಿರುವೆ. ನಾನು ಕೂಡ ಹಾಗೆಯೇ ಮಾಡುವೆನು. ಸೇಯೀರ್ ಪರ್ವತ ಮತ್ತು ಎದೋಮ್ ರಾಜ್ಯವೆಲ್ಲಾ ನಾಶವಾಗುವದು. ಆಗ ನಾನು ಯೆಹೋವನೆಂದು ನೀನು ತಿಳಿಯುವೆ.”


ಸುಳ್ಳುಗಾರರಾದ ನನ್ನ ವೈರಿಗಳು ಇನ್ನು ಮೇಲೆ ಹಿಗ್ಗಲಾರರು. ನನ್ನ ವೈರಿಗಳು ತಮ್ಮ ಒಳಸಂಚುಗಳಿಗೆ ಖಂಡಿತವಾಗಿ ದಂಡಿಸಲ್ಪಡುವರು.


ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಅಳುವಿರಿ, ದುಃಖಪಡುವಿರಿ. ಆದರೆ ಲೋಕವು ಸಂತೋಷಪಡುವುದು. ನೀವು ದುಃಖಪಡುವಿರಿ, ಆದರೆ ನಿಮ್ಮ ದುಃಖವು ಆನಂದವಾಗುವುದು.


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.


ಯೆಹೋವನು ಹೇಳುವುದೇನೆಂದರೆ: ಜೆರುಸಲೇಮ್ ನಾಶವಾಯಿತೆಂದು ನೀವು ಸಂತೋಷಪಟ್ಟಿರಿ. ನೀವು ಚಪ್ಪಾಳೆತಟ್ಟಿ ಕಾಲಿನಿಂದ ನೆಲವನ್ನು ಬಡಿದಿರಿ. ಇಸ್ರೇಲ್ ದೇಶವನ್ನು ಕಡೆಗಣಿಸಿ ನಗಾಡಿದಿರಿ.


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


“ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದುಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು.


ಜನರು ಕತ್ತಲಲ್ಲಿ ಜೀವಿಸುತ್ತಿದ್ದರು. ಆಗ ಅವರಿಗೆ ದೊಡ್ಡ ಬೆಳಕೊಂದು ಕಾಣಿಸಿತು. ಸಮಾಧಿಯಂತಿರುವ ಕಾರ್ಗತ್ತಲೆಯ ದೇಶದಲ್ಲಿ ವಾಸಿಸುವ ಆ ಜನರಿಗೆ ಬೆಳಕು ದೊರೆಯಿತು.”


“ಬಾಬಿಲೋನೇ, ನೀನು ಉಲ್ಲಾಸದಲ್ಲಿರುವೆ ಮತ್ತು ಸಂತೋಷದಲ್ಲಿರುವೆ. ನೀನು ನನ್ನ ಪ್ರದೇಶವನ್ನು ತೆಗೆದುಕೊಂಡೆ. ನೀನು ಕಣತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿರುವೆ. ನಿನ್ನ ನಗು ಕುದುರೆಗಳ ಸಂತೋಷಭರಿತ ಕೆನೆತದಂತೆ ಇದೆ.


ಸೆರೆಮನೆಯಲ್ಲಿರುವವರಿಗೆ ನೀವು, ‘ಸೆರೆಮನೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಅಂಧಕಾರದಲ್ಲಿರುವವರಿಗೆ, ‘ಕತ್ತಲೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಪ್ರಯಾಣದಲ್ಲಿರುವವರು ತಿನ್ನುತ್ತಾ ಹೋಗುವರು. ಬೋಳುಬೆಟ್ಟಗಳಲ್ಲೂ ನಿಮಗೆ ಆಹಾರ ದೊರೆಯುವದು.


ಯಾಕೋಬನ ಮನೆತನದವರೇ, ನೀವು ಯೆಹೋವನ ಬೆಳಕನ್ನು ಹಿಂಬಾಲಿಸುವವರಾಗಬೇಕು.


ಅವನು ಎಡವಿದರೂ ಬೀಳುವುದಿಲ್ಲ; ಯಾಕೆಂದರೆ ಯೆಹೋವನು ಅವನ ಕೈಹಿಡಿದುಕೊಂಡಿದ್ದಾನೆ.


ದುಷ್ಟನು ತಾನು ಮಾಡಿದ ಸಾಲವನ್ನು ತೀರಿಸುವುದಿಲ್ಲ. ನೀತಿವಂತನಾದರೋ ಬೇರೆಯವರಿಗೆ ಉದಾರವಾಗಿ ಕೊಡುವನು.


ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.


ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.


ನಾವು ಹಿಂಸೆಗೆ ಗುರಿಯಾದೆವು, ಆದರೆ ದೇವರು ನಮ್ಮನ್ನು ತೊರೆದುಬಿಡಲಿಲ್ಲ. ಕೆಲವು ಸಲ ನಮಗೆ ನೋವಾಯಿತು, ಆದರೂ ನಾಶವಾಗಲಿಲ್ಲ.


ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; ನಾವಾದರೋ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!


“ಯೆರೆಮೀಯನೇ, ಯೆಹೂದದ ಜನರಿಗೆ ಹೀಗೆ ಹೇಳು: ‘ಯೆಹೋವನು ಈ ಮಾತನ್ನು ಹೇಳುತ್ತಾನೆ. “‘ಒಬ್ಬ ಮನುಷ್ಯನು ಕೆಳಗೆ ಬಿದ್ದರೆ ಪುನಃ ಅವನು ಮೇಲಕ್ಕೆ ಏಳುತ್ತಾನೆ; ಒಬ್ಬ ಮನುಷ್ಯನು ತಪ್ಪುದಾರಿ ಹಿಡಿದರೆ ಅವನು ಹಿಂತಿರುಗಿ ಬರುತ್ತಾನೆಂಬುದು ನಿಮಗೆ ಗೊತ್ತು.


“ಮೋವಾಬೇ, ನೀನು ಇಸ್ರೇಲಿನ ಬಗ್ಗೆ ತಮಾಷೆ ಮಾಡಿದೆ. ಇಸ್ರೇಲ್ ಒಂದು ಕಳ್ಳರ ಗುಂಪಿನಿಂದ ಹಿಡಿಯಲ್ಪಟ್ಟಿತ್ತೇನು? ಇಸ್ರೇಲಿನ ಬಗ್ಗೆ ಮಾತನಾಡಿದಾಗಲೆಲ್ಲ ನೀನು ತಲೆಯಾಡಿಸಿದೆ. ಇಸ್ರೇಲಿಗಿಂತ ಉತ್ತಮನೋ ಎಂಬಂತೆ ನಟಿಸಿದೆ.


“ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ತ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.


ಚೀಯೋನ್ ಕುಮಾರಿಯೇ, ಪ್ರಸವವೇದನೆಯಲ್ಲಿರುವ ಸ್ತ್ರೀಯಂತೆ ನೀನು ನೋವನ್ನು ಅನುಭವಿಸು. ನೀನು ಜೆರುಸಲೇಮ್ ಪಟ್ಟಣದಿಂದ ಹೊರಗೆ ಹೋಗಿ ಹೊಲದಲ್ಲಿ ವಾಸಿಸುವೆ. ನಾನು ಹೇಳುವುದೇನೆಂದರೆ, ನೀನು ಬಾಬಿಲೋನಿಗೆ ಹೋಗುವೆ, ಆದರೆ ಅಲ್ಲಿ ನೀನು ರಕ್ಷಿಸಲ್ಪಡುವೆ. ಯೆಹೋವನು ಅಲ್ಲಿಗೆ ಬಂದು ನಿನ್ನನ್ನು ರಕ್ಷಿಸುವನು. ನಿನ್ನ ವೈರಿಗಳಿಂದ ನಿನ್ನನ್ನು ಬಿಡುಗಡೆ ಮಾಡುವನು.


ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.


ಆದರೆ ನನ್ನ ಶತ್ರುಗಳು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಅವರು ನನ್ನ ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾರೆ. ಬಹುಕಾಲದ ಹಿಂದೆ ಸತ್ತವರನ್ನು ಕಾರ್ಗತ್ತಲೆಯ ಸಮಾಧಿಗೆ ನೂಕುವಂತೆ ಅವರು ನನ್ನನ್ನು ನೂಕುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು