ಯಾಕೋಬನು 1:1 - ಪರಿಶುದ್ದ ಬೈಬಲ್1 ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ದೆವಾಚೊ ಅನಿ ಧನಿಯಾ ಜೆಜು ಕ್ರಿಸ್ತಾಚೊ ಸೆವಕ್ ಹೊವ್ನ್ ಹೊತ್ತೊ ಜಾಕೊಬ್ ಸಗ್ಳ್ಯಾ ಜಗಾತ್ ಪಗ್ಳುನ್ ಗೆಲ್ಲ್ಯಾ ಇಸ್ರಾಯೆಲಾಂಚ್ಯಾ ಬಾರಾ ಕುಳಿಯಾಂಚ್ಯಾ ಲೊಕಾಕ್ನಿ ಲಿವ್ತಲಿ ಚಿಟ್ ತುಮ್ಕಾ ಬರೆ ಹೊಂವ್ದಿತ್. ಅಧ್ಯಾಯವನ್ನು ನೋಡಿ |
ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.
ನಡೆದ ಸಂಗತಿ ಏನೆಂದರೆ: ಪೇತ್ರನು ಮೊದಲು ಅಂತಿಯೋಕ್ಯಕ್ಕೆ ಬಂದಾಗ ಅವನು ಯೆಹೂದ್ಯರಲ್ಲದವರೊಂದಿಗೆ ಊಟಮಾಡಿದನು ಮತ್ತು ಅನ್ಯೋನ್ಯತೆಯಿಂದಿದ್ದನು. ಆ ಬಳಿಕ ಯಾಕೋಬನಿಂದ ಕಳುಹಿಸಲ್ಪಟ್ಟಿದ್ದ ಕೆಲವು ಯೆಹೂದ್ಯರು ಬಂದರು. ಆಗ, ಪೇತ್ರನು ಯೆಹೂದ್ಯರಲ್ಲದವರೊಂದಿಗೆ ಊಟಮಾಡುವುದನ್ನು ನಿಲ್ಲಿಸಿದನು. ಪೇತ್ರನು ತನ್ನನ್ನು ಯೆಹೂದ್ಯರಲ್ಲದವರಿಂದ ಬೇರ್ಪಡಿಸಿಕೊಂಡನು. ಯೆಹೂದ್ಯರಲ್ಲದವರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಂಬಿಕೊಂಡಿದ್ದ ಯೆಹೂದ್ಯರಿಗೆ ಅವನು ಹೆದರಿಕೊಂಡನು.