Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:11 - ಪರಿಶುದ್ದ ಬೈಬಲ್‌

11 ಸೂರ್ಯನು ಮೇಲೇರಿದಂತೆ ಬಿಸಿಲು ಹೆಚ್ಚಾಗುವುದು. ಸೂರ್ಯನ ತಾಪದಿಂದ ಗಿಡಗಳು ಒಣಗಿಹೋಗುವವು; ಹೂವುಗಳು ಉದುರಿ ಹೋಗುವವು. ಹೂವು ಸುಂದರವಾಗಿತ್ತು, ಆದರೆ ಈಗ ಅದು ಒಣಗಿಹೋಯಿತು. ಐಶ್ವರ್ಯವಂತನಿಗೂ ಇದೇ ರೀತಿಯಾಗುವುದು. ಅವನು ತನ್ನ ವ್ಯಾಪಾರದ ಬಗ್ಗೆ ಯೋಜನೆಗಳನ್ನು ಮಾಡುತ್ತಿರುವಾಗಲೇ ಸತ್ತುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೂರ್ಯನು ಉದಯಿಸಿ ಉಷ್ಣವಾದ ಗಾಳಿ ಬೀಸಿ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ಕೆಡುವದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೂರ್ಯನು ಉದಯಿಸಿದ ತರುವಾಯ ಉಷ್ಣತೆಯಿಂದ ಗಿಡ ಬಾಡಲು, ಅದರ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುವುದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿಗಳಲ್ಲಿ ಬಾಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕಶ್ಯಾಕ್ ಮಟ್ಲ್ಯಾರ್, ದಿಸ್ ಉಗಾವಲ್ಲ್ಯಾ ತನ್ನಾ ತೊ ಅಪ್ನಾಚ್ಯಾ ಝಳಾನಿ ಗವ್ತಾಕ್ ಬಾಡುನ್ ಜಾಯ್ ಸಾರ್ಕೆ ಕರ್ತಾನಾ, ತ್ಯಾ ಗವ್ತಾಚೆ ಫುಲ್ಲ್‌ಬಿ ಝಡುನ್ ಜಾವ್ನ್ ತೆಚ್ಯಾ ರುಪಾಚೆ ಬರೆಪಾನ್ ನಾಸ್ ಹೊವ್ನ್ ಜಾತಾ. ತಸೆಚ್ ಸಾವ್ಕಾರ್ಕಿಬಿ ಅಪ್ಲ್ಯಾ ವಾಟೆ ವೈನಿ ಬಾವುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:11
27 ತಿಳಿವುಗಳ ಹೋಲಿಕೆ  

ಆದರೆ ಸೂರ್ಯನು ಮೇಲೇರಿದಾಗ, ಆಳವಾದ ಬೇರಿಲ್ಲದ ಕಾರಣ ಆ ಸಸಿಗಳು ಒಣಗಿಹೋದವು.


ಆದರೆ ಬಿಸಿಲೇರಿದಾಗ ಆ ಮೊಳಕೆಗಳು ಒಣಗಿಹೋದವು. ಏಕೆಂದರೆ ಅವುಗಳಿಗೆ ಆಳವಾದ ಬೇರಿರಲಿಲ್ಲ.


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ದೇವರು ತನ್ನ ಮಕ್ಕಳಿಗೆ ನೀಡುವ ಆಶೀರ್ವಾದಗಳಲ್ಲಿ ಈಗ ನಮಗೆ ನಿರೀಕ್ಷೆಯಿದೆ. ಅವು ನಿಮಗಾಗಿ ಪರಲೋಕದಲ್ಲಿ ಇಡಲ್ಪಟ್ಟಿವೆ. ಅವು ಹಾಳಾಗುವುದಿಲ್ಲ, ನಾಶವಾಗುವುದಿಲ್ಲ ಮತ್ತು ಸೌಂದರ್ಯವನ್ನು ಕಳೆದುಕೊಳ್ಳುವುದಿಲ್ಲ.


ಈ ಲೋಕದ ವಸ್ತುಗಳನ್ನು ಉಪಯೋಗಿಸುವ ಜನರು ತಮಗೆ ಆ ವಸ್ತುಗಳು ಮುಖ್ಯವಲ್ಲವೆಂಬಂತೆ ಜೀವಿಸಬೇಕು. ಏಕೆಂದರೆ, ಈ ಲೋಕದ ಇಂದಿನ ಸ್ಥಿತಿಯು ಬಹು ಬೇಗನೆ ಗತಿಸಿಹೋಗುವುದು.


ನಾನು ನಿರ್ಬಲನಾಗಿ ಒಣಗಿಹೋಗುತ್ತಿರುವ ಹುಲ್ಲಿನಂತಿದ್ದೇನೆ. ನಾನು ಊಟವನ್ನೂ ಮರೆತುಬಿಡುವೆನು.


ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.


ಆ ನಗರವು ಬೆಟ್ಟದ ಮೇಲೆ ಕುಳಿತಿದೆ; ಸುತ್ತಲೂ ಫಲವತ್ತಾದ ಕಣಿವೆ ಇದೆ. ಆ ಸುಂದರವಾದ ಪುಷ್ಪ ಕಿರೀಟವು ಕೇವಲ ಒಣಗಿದ ತರಗೆಲೆ. ಆ ನಗರವು ಬೇಸಿಗೆಯ ಮೊದಲಿನ (ಅಂಜೂರದ) ಹಣ್ಣುಗಳಂತೆ ಇದೆ. ಅದನ್ನು ನೋಡಿದವರು ಕೂಡಲೇ ತೆಗೆದುಕೊಂಡು ಬಾಯಿಗೆ ಹಾಕಿಕೊಳ್ಳುವರು.


ಸಮಾರ್ಯದ ಕಡೆಗೆ ನೋಡು! ಎಫ್ರಾಯೀಮಿನ ಮತ್ತರಾದ ಜನರು ಆ ಪಟ್ಟಣದ ಬಗ್ಗೆ ಬಹಳ ಅಭಿಮಾನಪಡುತ್ತಿದ್ದಾರೆ. ಆ ನಗರವು ಪರ್ವತದ ಮೇಲಿರುವುದು; ಅದರ ಸುತ್ತಲೂ ಫಲವತ್ತಾದ ಕಣಿವೆ ಇರುವುದು. ಸಮಾರ್ಯದ ಜನರು ತಮ್ಮ ನಗರವು ಸುಂದರವಾದ ಕಿರೀಟವೆಂದು ನೆನಸುತ್ತಾರೆ. ಆದರೆ ಅವರು ಕುಡಿದು ಮತ್ತರಾಗಿದ್ದಾರೆ. ಅವರ “ಸುಂದರ ಕಿರೀಟವು” ಒಣಗಿದ ತರಗೆಲೆಯಾಗಿದೆ.


ಮನುಷ್ಯನು ತಾಯಿಯ ಗರ್ಭದಿಂದ ಬರಿದಾಗಿ ಈ ಲೋಕಕ್ಕೆ ಬರುವನು; ಸಾಯುವಾಗ ಅದೇ ರೀತಿ ಬರಿದಾಗಿ ಹೋಗುವನು; ತಾನು ಪ್ರಯಾಸಪಟ್ಟು ಸಂಪಾದಿಸಿದವುಗಳಲ್ಲಿ ಒಂದನ್ನೂ ಅವನು ತನ್ನೊಡನೆ ತೆಗೆದುಕೊಂಡು ಹೋಗಲಾರನು.


ನನ್ನ ಜೀವಮಾನವು ಸಂಜೆಯ ನೆರಳಿನಂತೆ ಕೊನೆಗೊಂಡಿದೆ. ನಾನು ಒಣಗಿ ಸಾಯುತ್ತಿರುವ ಹುಲ್ಲಿನಂತಿದ್ದೇನೆ.


ದುಷ್ಟರು ಹುಲ್ಲಿನಂತೆಯೂ ಸೊಪ್ಪಿನಂತೆಯೂ ಬೇಗನೆ ಒಣಗಿಹೋಗುವರು.


ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.


ಹೊತ್ತಾರೆಯಲ್ಲಿ ಹುಲ್ಲು ಚಿಗುರತೊಡಗಿದರೂ ಸಾಯಂಕಾಲದೊಳಗೆ ಒಣಗಿಹೋಗುತ್ತದೆ.


ನಮ್ಮ ಜೀವಮಾನಗಳು ಕೊಂಚವೆಂಬುದು ಆತನಿಗೆ ಗೊತ್ತಿದೆ. ನಮ್ಮ ಜೀವಮಾನಗಳು ಹುಲ್ಲಿನಂತಿವೆ ಎಂಬುದೂ ಆತನಿಗೆ ತಿಳಿದಿದೆ.


ಬಯಲಿನಲ್ಲಿರುವ ಹುಲ್ಲಿಗೂ ದೇವರು ಹಾಗೆ ಹೊದಿಸುತ್ತಾನೆ. ಹುಲ್ಲಾದರೋ ಈ ಹೊತ್ತು ಇದ್ದು ನಾಳೆ ಬೆಂಕಿಯ ಪಾಲಾಗುತ್ತದೆ. ಆದ್ದರಿಂದ ದೇವರು ನಿಮಗೆ ಎಷ್ಟೋ ಹೆಚ್ಚಾಗಿ ತೊಡಿಸುತ್ತಾನೆಂದು ನಿಮಗೆ ಗೊತ್ತಿದೆ. ಅಲ್ಪವಿಶ್ವಾಸಿಗಳಾಗಿರಬೇಡಿ!


‘ಕೊನೆಗೆ ಗೊತ್ತುಮಾಡಲ್ಪಟ್ಟ ಆಳುಗಳು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಇವನು ಅವರಿಗೂ ನಮ್ಮಷ್ಟೇ ಕೊಟ್ಟಿದ್ದಾನೆ. ನಾವಾದರೋ ದಿನವೆಲ್ಲಾ ಬಿಸಿಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ’ ಎಂದರು.


ಅನ್ಯದೇಶದ ಜನರು ಭಯಗೊಳ್ಳುವರು; ತಾವು ಅಡಗಿದ್ದ ಸ್ಥಳಗಳಿಂದ ನಡುಗುತ್ತಾ ಹೊರಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು