Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:14 - ಪರಿಶುದ್ದ ಬೈಬಲ್‌

14 ಶೋಧನೆಗೆ ಗುರಿಯಾಗಿರುವವನು ತಾನು ಇಷ್ಟಪಡುವ ಕೆಟ್ಟಕಾರ್ಯಗಳಿಂದಲೇ ಶೋಧನೆಗೆ ಒಳಗಾಗಿದ್ದಾನೆ. ಅವನ ಕೆಟ್ಟ ಆಸೆಗಳೇ ಅವನನ್ನು ದೂರ ಸೆಳೆದು, ಬಿಡದೆ ಹಿಡಿದುಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮಾನವನು ಪ್ರಲೋಭನೆಗೆ ಒಳಗಾಗುವುದು ತನ್ನ ದುರಿಚ್ಛೆಯಿಂದಲೇ ಅದು ಅವನನ್ನು ಆಕರ್ಷಿಸಿ ಮರುಳುಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ಪ್ರತಿಯೊಬ್ಬನೂ ತನ್ನಲ್ಲಿರುವ ಆಶಾಪಾಶದಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಪ್ರೇರೇಪಿಸಲ್ಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಆಕರ್ಷಿಸಿ ಮರುಳುಗೊಂಡವನಾಗಿ ಶೋಧನೆಗೆ ಒಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಹರ್ ಎಕ್ಲೊಬಿ ಅಪ್ಲ್ಯಾ ಸ್ವತಾಚ್ಯಾ ಬುರ್ಶ್ಯಾ ಆಶಾತ್ ಪಡುನ್ ಮಳ್ಳ್ ಹೊವ್ನ್ ಪರಿಕ್ಷಾತ್ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:14
24 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ.


ಆದರೆ ಒಬ್ಬ ಮನುಷ್ಯನ ಬಾಯಿಂದ ಹೊರಡುವ ಕೆಟ್ಟಮಾತುಗಳು ಅವನ ಆಲೋಚನೆಯಿಂದ ಉದ್ಭವಿಸಿ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ.


ಆದರೆ ಒಬ್ಬರನ್ನೊಬ್ಬರು ಪ್ರತಿದಿನವೂ ಸಂತೈಸಿರಿ. “ಈ ದಿನ”ವು ಇನ್ನೂ ಇರುವಾಗಲೇ ಇದನ್ನೆಲ್ಲ ಮಾಡಿರಿ. ಪಾಪದಿಂದಾಗಲಿ ಪಾಪವು ಮೋಸಗೊಳಿಸುವ ರೀತಿಯಿಂದಾಗಲಿ ನಿಮ್ಮಲ್ಲಿ ಯಾರೂ ಕಠಿಣರಾಗದಂತೆ ಒಬ್ಬರಿಗೊಬ್ಬರು ಸಹಾಯ ಮಾಡಿರಿ.


ಆ ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ಈ ವಿಗ್ರಹವು ಸುಳ್ಳು ದೇವರಾಗಿದೆ” ಎಂದು ಅವನು ಹೇಳುವದಿಲ್ಲ.


ಹಾಗಾದರೆ, ಒಳ್ಳೆಯದೇ ನನಗೆ ಮರಣವನ್ನು ಬರಮಾಡಿತೆಂದರ್ಥವೇ? ಇಲ್ಲ! ಆದರೆ ಪಾಪವು ಒಳ್ಳೆಯದನ್ನೇ ಬಳಸಿಕೊಂಡು ನನಗೆ ಮರಣವನ್ನು ಬರಮಾಡಿತು. ಇದರಿಂದಾಗಿ, ನಾನು ಪಾಪದ ನಿಜಸ್ವರೂಪವನ್ನು ಕಾಣುವಂತಾಯಿತು. ಪಾಪವು ಬಹು ಕೆಟ್ಟದ್ದೆಂದು ಆಜ್ಞೆಯ ಮೂಲಕ ಸ್ಪಷ್ಟವಾಯಿತು.


ನಿನ್ನ ಆಲೋಚನೆಗಳ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಿನ್ನ ನಡತೆಯು ನಿನ್ನ ಆಲೋಚನೆಗಳ ಮೇಲೆ ಆಧಾರಗೊಂಡಿದೆ.


ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.


ಪಾಪವು ಆ ಆಜ್ಞೆಯನ್ನು ಬಳಸಿಕೊಂಡು ನನ್ನನ್ನು ವಂಚಿಸಿ, ನನ್ನಲ್ಲಿ ಆತ್ಮಿಕ ಮರಣವನ್ನು ಉಂಟುಮಾಡಿತು.


ನಾನು ಮರುಳುಗೊಂಡು ನನ್ನ ಕೈಗೆ ಮುದ್ದಿಡುವುದರ ಮೂಲಕ ಸೂರ್ಯಚಂದ್ರರನ್ನು ಪೂಜಿಸಲಿಲ್ಲ.


“ಒಂದುವೇಳೆ ನಾನು ಪರಸ್ತ್ರೀಯಲ್ಲಿ ಮರುಳುಗೊಂಡಿದ್ದರೆ, ನನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡಲು ಅವನ ಮನೆಯ ಬಾಗಿಲಲ್ಲಿ ಕಾದುಕೊಂಡಿದ್ದರೆ,


ಇವು ಮನುಷ್ಯನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಆದರೆ ಊಟಕ್ಕೆ ಮೊದಲು ಕೈತೊಳೆಯದ ಮಾತ್ರಕ್ಕೆ ಮನುಷ್ಯನೇನೂ ಅಶುದ್ಧನಾಗುವುದಿಲ್ಲ” ಎಂದು ಹೇಳಿದನು.


ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.


ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.


“ಇಸ್ರೇಲೇ, ನಾನು ನಿನಗೆ ಸಹಾಯ ಮಾಡಿದರೂ ನೀನು ನನಗೆ ವಿರೋಧವಾಗಿ ಎದ್ದಿರುವೆ. ಆದ್ದರಿಂದ ನಾನು ನಿನ್ನನ್ನು ನಾಶಮಾಡುವೆನು.


ಸ್ತ್ರೀಗೆ ಆ ಮರ ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರ ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.


ದಾವೀದನು ತನಗಾಗಿ ಬತ್ಷೆಬೆಳನ್ನು ಕರೆತರಲು ಸಂದೇಶಕರನ್ನು ಕಳುಹಿಸಿದನು. ಅವಳು ದಾವೀದನ ಬಳಿಗೆ ಬಂದಾಗ ಅವನು ಅವಳೊಡನೆ ಲೈಂಗಿಕ ಸಂಬಂಧವನ್ನು ಹೊಂದಿದನು. ತನ್ನ ಮಾಸಿಕ ಮುಟ್ಟು ನಿಂತಮೇಲೆ ತನ್ನನ್ನು ಶುದ್ಧಪಡಿಸಿಕೊಳ್ಳಲು ಆಕೆ ಸ್ನಾನಮಾಡಿಕೊಂಡ ಮೇಲೆ ಇದು ಸಂಭವಿಸಿತು.


ಆಗ ದೇವರಾತ್ಮನು ಸೈತಾನನಿಂದ ಶೋಧಿಸಲ್ಪಡಲು ಯೇಸುವನ್ನು ಅಡವಿಗೆ ನಡೆಸಿದನು.


ಶೋಧನೆಗೆ ಗುರಿಯಾಗಿರುವ ವ್ಯಕ್ತಿಯು, “ದೇವರು ನನ್ನನ್ನು ಶೋಧಿಸುತ್ತಿದ್ದಾನೆ” ಎಂದು ಹೇಳಬಾರದು. ಕೆಟ್ಟದ್ದು ದೇವರನ್ನು ಶೋಧಿಸಲಾರದು. ದೇವರು ತಾನಾಗಿಯೇ ಯಾರನ್ನೂ ಶೋಧಿಸುವುದಿಲ್ಲ.


ಈ ಆಸೆಗಳು ಅವನಿಂದ ಪಾಪವನ್ನು ಮಾಡಿಸುತ್ತದೆ. ನಂತರ ಪಾಪವು ಬೆಳೆದು ಸಾವನ್ನು ತರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು