Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:16 - ಪರಿಶುದ್ದ ಬೈಬಲ್‌

16 ನನ್ನ ಪ್ರಿಯ ಸಹೋದರ ಸಹೋದರಿಯರೇ, ಈ ವಿಷಯದಲ್ಲಿ ನೀವು ಮೋಸಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಪ್ರಿಯ ಸಹೋದರರೇ, ಮೋಸಹೋಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಾಜ್ಯಾ ಪ್ರಿತಿಚ್ಯಾ ಭಾವಾನು ಅನಿ ಭೆನಿಯಾನು, ಹ್ಯಾ ವಿಶಯಾತ್ ತುಮಿ ಪಸುನ್ ಪಡುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:16
22 ತಿಳಿವುಗಳ ಹೋಲಿಕೆ  

ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ.


ನನ್ನ ಪ್ರಿಯ ಸ್ನೇಹಿತರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ ನಾನು ದೂರವಿರುವಾಗಲೂ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿರಿ. ನೀವು ದೇವರಿಗೆ ಭಯಭಕ್ತಿಯಿಂದಿದ್ದು ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಮೋಸಹೋಗಬೇಡಿರಿ! ನೀವು ದೇವರನ್ನು ವಂಚಿಸಲು ಸಾಧ್ಯವಿಲ್ಲ. ಒಬ್ಬನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯುತ್ತಾನೆ.


ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು.


ನೀವು ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾಗಿರುವುದರಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ.


ಯಾವನೂ ನಿಮ್ಮನ್ನು ಸರಿಯೆನಿಸುವ ಸುಳ್ಳು ಮಾತುಗಳಿಂದ ಮೋಸಗೊಳಿಸದಂತೆ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಅವರು ಸತ್ಯೋಪದೇಶವನ್ನು ತಿರಸ್ಕರಿಸಿದರು. ಎಲ್ಲಾ ಜನರಿಗೆ ಉಂಟಾಗುವ ಪುನರುತ್ಥಾನವು ಈಗಾಗಲೇ ಆಗಿ ಹೋಗಿದೆಯೆಂದು ಅವರು ಹೇಳುತ್ತಾರೆ. ಅವರಿಬ್ಬರು ಕೆಲವು ಜನರ ನಂಬಿಕೆಯನ್ನು ಹಾಳುಮಾಡುತ್ತಿದ್ದಾರೆ.


ನನ್ನ ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ನಿಮ್ಮನ್ನು ನೋಡಬಯಸುತ್ತೇನೆ. ನೀವು ನನಗೆ ಆನಂದವನ್ನು ಉಂಟುಮಾಡಿ, ನಿಮ್ಮ ವಿಷಯದಲ್ಲಿ ನಾನು ಹೆಮ್ಮಪಡುವಂತೆ ಮಾಡಿದ್ದೀರಿ. ನಾನು ನಿಮಗೆ ಹೇಳಿದಂತೆ ಪ್ರಭುವನ್ನು ಅನುಸರಿಸಿರಿ.


ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು.


ದೇವರು ತನ್ನನ್ನು ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಎಂದು ಹೇಳಿಕೊಂಡಿರುವುದರಿಂದ ಇವರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ, ದೇವರು ಜೀವಿತರಿಗೆ ದೇವರಾಗಿದ್ದಾನೆಯೇ ಹೊರತು ಸತ್ತವರಿಗೆ ಅಲ್ಲ.”


ಯೇಸು, “ನೀವು ಇಂಥಾ ತಪ್ಪನ್ನು ಮಾಡುವುದೇಕೆ? ಪವಿತ್ರಗ್ರಂಥವಾಗಲಿ, ದೇವರ ಶಕ್ತಿಯಾಗಲಿ ನಿಮಗೆ ಗೊತ್ತಿಲ್ಲ.


ಯೇಸು, “ನೀವು ತಪ್ಪಾಗಿ ತಿಳಿದುಕೊಂಡಿರಲು ಕಾರಣವೇನೆಂದರೆ, ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ತಿಳಿದಿಲ್ಲ ಮತ್ತು ದೇವರ ಶಕ್ತಿಯ ಬಗ್ಗೆಯೂ ನಿಮಗೆ ಗೊತ್ತಿಲ್ಲ.


ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು:


ನನ್ನ ಸಹೋದರ ಸಹೋದರಿಯರೇ, ನಿಮಗೆ ಅನೇಕ ತೊಂದರೆಗಳು ಬರುತ್ತವೆ. ಆದರೆ ಅವುಗಳು ಬಂದಾಗ ನೀವು ಬಹಳ ಸಂತೋಷಪಡಬೇಕು.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಮಹಿಮಾಪೂರ್ಣನಾದ ಪ್ರಭು ಯೇಸು ಕ್ರಿಸ್ತನಲ್ಲಿ ನೀವು ನಂಬಿಕೆಯಿಟ್ಟಿದ್ದೀರಿ. ಆದ್ದರಿಂದ ಕೆಲವರು ಇತರ ಜನರಿಗಿಂತ ಬಹಳ ಮುಖ್ಯರೆಂದು ಯೋಚಿಸಬೇಡಿ.


ನನ್ನ ಸಹೋದರ ಸಹೋದರಿಯರೇ, ಒಬ್ಬ ವ್ಯಕ್ತಿಯು ತನ್ನಲ್ಲಿ ನಂಬಿಕೆಯಿದೆಯೆಂದು ಹೇಳಿಕೊಂಡರೂ ಅದನ್ನು ಕಾರ್ಯರೂಪಕ್ಕೆ ತರದಿದ್ದರೆ, ಅವನ ನಂಬಿಕೆಯಿಂದ ಪ್ರಯೋಜನವೇನೂ ಇಲ್ಲ. ಆ ರೀತಿಯ ನಂಬಿಕೆಯು ಅವನನ್ನು ರಕ್ಷಿಸಬಲ್ಲದೇ? ಇಲ್ಲ!


ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಅನೇಕರು ಬೋಧಕರಾಗಬಾರದು. ಏಕೆಂದರೆ ಬೋಧಕರಾದ ನಮಗೆ ಇತರ ಜನರಿಗಿಂತ ಕಠಿಣವಾದ ತೀರ್ಪಾಗುತ್ತದೆ ಎಂಬುದು ನಿಮಗೆ ತಿಳಿದಿದೆ.


ಹೊಗಳಿಕೆ ಮತ್ತು ತೆಗಳಿಕೆಗಳೆರಡೂ ಒಂದೇ ಬಾಯಿಂದ ಬರುತ್ತವೆ! ನನ್ನ ಸಹೋದರ ಸಹೋದರಿಯರೇ, ಇದು ಸಂಭವಿಸಲೇಬಾರದು.


ಸಹೋದರ ಸಹೋದರಿಯರೇ, ಒಬ್ಬರ ವಿರುದ್ಧ ಮತ್ತೊಬ್ಬರು ನಿಂದೆಯ ಮಾತುಗಳನ್ನಾಡದಿರಿ. ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನನ್ನು ನೀವು ಟೀಕಿಸಿದರೆ ಅಥವಾ ಅವನ ಬಗ್ಗೆ ತೀರ್ಪು ನೀಡಿದರೆ, ಅವನು ಅನುಸರಿಸುವ ಧರ್ಮಶಾಸ್ತ್ರವನ್ನೇ ಟೀಕಿಸಿದಂತಾಯಿತು. ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ನೀವು ತೀರ್ಪು ನೀಡಿದರೆ, ಅವನು ಅನುಸರಿಸುತ್ತಿರುವ ಧರ್ಮಶಾಸ್ತ್ರದ ಬಗ್ಗೆ ನೀವು ತೀರ್ಪು ನೀಡಿದಂತಾಯಿತು. ನೀವು ಧರ್ಮಶಾಸ್ತ್ರಕ್ಕೆ ತೀರ್ಪು ನೀಡುವಾಗ ನೀವು ಧರ್ಮಶಾಸ್ತ್ರವನ್ನು ಅನುಸರಿಸುವವರಲ್ಲ. ನೀವು ನ್ಯಾಯಾಧಿಪತಿಗಳಾಗಿದ್ದೀರಿ!


ನನ್ನ ಸಹೋದರ ಸಹೋದರಿಯರೇ, ನೀವು ವಾಗ್ದಾನ ಮಾಡುವಾಗ ಆಣೆ ಇಡಬೇಡಿರಿ. ಇದು ಬಹಳ ಮುಖ್ಯವಾದದ್ದು. ನಿಮ್ಮ ಹೇಳಿಕೆಯನ್ನು ನಿರೂಪಿಸಲು ಪರಲೋಕದ, ಭೂಲೋಕದ ಮತ್ತು ಬೇರಾವುದರ ಹೆಸರನ್ನೂ ಬಳಸಬೇಡಿ. ಹೌದಾಗಿದ್ದರೆ, “ಹೌದು” ಎನ್ನಿರಿ. ಇಲ್ಲವಾಗಿದ್ದರೆ, “ಇಲ್ಲ” ಎನ್ನಿರಿ. ನೀವು ಹೀಗೆ ಮಾಡಿದರೆ, ನಿಮಗೆ ದೋಷಿಗಳೆಂಬ ತೀರ್ಪಾಗುವುದಿಲ್ಲ.


ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಬ್ಬನು ಸತ್ಯದಿಂದ ದೂರವಾಗಿ ಅಲೆದಾಡುತ್ತಿದ್ದರೆ, ಮತ್ತೊಬ್ಬನು ಅವನಿಗೆ ಸಹಾಯಮಾಡಿ ಅವನನ್ನು ಸತ್ಯಕ್ಕೆ ನಡೆಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು