Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:21 - ಪರಿಶುದ್ದ ಬೈಬಲ್‌

21 ಆದ್ದರಿಂದ ಎಲ್ಲಾ ನೀಚತನವನ್ನೂ ದುಷ್ಟತನವನ್ನೂ ನಿಮ್ಮ ಜೀವನದಿಂದ ದೂರತಳ್ಳಿರಿ. ನಿಮ್ಮ ಹೃದಯದಲ್ಲಿ ಬೇರೂರಿರುವ ದೇವರ ವಾಕ್ಯವನ್ನು ದೀನತೆಯಿಂದ ಒಪ್ಪಿಕೊಳ್ಳಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದಕಾರಣ ಎಲ್ಲಾ ನೀಚತನವನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆಯಿಂದ ಎಡೆಗೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸುವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತುಮಿ ಅದ್ದಿಚ್ಯಾನುಚ್ ಯೆಲ್ಲೆ ಬುರ್ಶೆಪಾನ್ ಅನಿ ಬುರ್ಶಿ ಚಾಲ್ ಸೊಡುನ್ ಸೊಡಾ ಅನಿ ತುಮ್ಕಾಚ್ ತುಮಿ ದೆವಾಕ್ ಒಪ್ಸುನ್ ದಿವಾ ಅನಿ ತುಮ್ಕಾ ರಾಕುಕ್ ಸಕ್ತಲ್ಯಾ ಗೊಸ್ಟಿಕ್ ಸ್ವಿಕಾರ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:21
37 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ.


ಇದು ನಿಮಗೂ ಅನ್ವಯಿಸುತ್ತದೆ. ನೀವು ಸತ್ಯ ಬೋಧನೆಯ ಬಗ್ಗೆ ಅಂದರೆ ನಿಮ್ಮ ರಕ್ಷಣೆಯ ಕುರಿತಾದ ಸುವಾರ್ತೆಯ ಬಗ್ಗೆ ಕೇಳಿದಾಗ ಕ್ರಿಸ್ತನಲ್ಲಿ ನಂಬಿಕೆಯಿಟ್ಟಿರಿ. ದೇವರು ತನ್ನ ವಾಗ್ದಾನಕ್ಕನುಸಾರವಾಗಿ ನಿಮಗೆ ಪವಿತ್ರಾತ್ಮನನ್ನು ದಯಪಾಲಿಸುವುದರ ಮೂಲಕ ನಿಮ್ಮ ಮೇಲೆ ತನ್ನ ವಿಶೇಷವಾದ ಮುದ್ರೆಯನ್ನು ಹಾಕಿದನು.


ಪ್ರಿಯ ಸ್ನೇಹಿತರೇ, ನೀವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಪರದೇಶದವರಂತೆ ಇದ್ದೀರಿ. ಆದ್ದರಿಂದ ನಿಮ್ಮ ದೇಹಗಳಿಗೆ ಇಷ್ಟವಾದ ಕೆಟ್ಟಸಂಗತಿಗಳಿಂದ ದೂರವಾಗಿರಿ. ಇವು ನಿಮ್ಮ ಜೀವಾತ್ಮಕ್ಕೆ ವಿರುದ್ಧವಾಗಿ ಹೋರಾಡುತ್ತವೆ.


ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.


ಆತನು ದೀನರಿಗೆ ತನ್ನ ಮಾರ್ಗಗಳನ್ನು ಉಪದೇಶಿಸುವನು. ಆತನು ಅವರನ್ನು ತನ್ನ ನ್ಯಾಯಾನುಸಾರವಾಗಿ ನಡೆಸುವನು.


ಆದ್ದರಿಂದ ಇತರ ಜನರಿಗೆ ಕೇಡುಮಾಡಬೇಡಿ, ಸುಳ್ಳಾಡದಿರಿ, ಜನರನ್ನು ಮೋಸಗೊಳಿಸಬೇಡಿ, ಹೊಟ್ಟೆಕಿಚ್ಚುಪಡದಿರಿ, ಜನರ ಬಗ್ಗೆ ಕೆಟ್ಟಮಾತುಗಳನ್ನು ಆಡದಿರಿ. ಇವುಗಳನ್ನೆಲ್ಲಾ ನಿಮ್ಮ ಜೀವಿತದಿಂದ ಹೊರಕ್ಕೆ ಹಾಕಿರಿ.


ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.


ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.


ಎಲ್ಲರಿಗೂ ರಕ್ಷಣೆಯನ್ನು ಕೊಡುವ ದೇವರ ಕೃಪೆಯು ಪ್ರತ್ಯಕ್ಷವಾಗಿದೆ.


ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ.


ರಕ್ಷಣಾಮಾರ್ಗದ ಕುರಿತು ಅವರಿಗೆ ತಿಳಿಸಲ್ಪಟ್ಟಂತೆಯೇ ನಮಗೂ ತಿಳಿಸಲಾಯಿತು. ಅವರು ಆ ಬೋಧನೆಯನ್ನು ಕೇಳಿದರೂ ಅವರಿಗೆ ಪ್ರಯೋಜನವಾಗಲಿಲ್ಲ. ಏಕೆಂದರೆ ಅವರು ಅದನ್ನು ನಂಬಿಕೆಯಿಂದ ಸ್ವೀಕರಿಸಿಕೊಳ್ಳಲಿಲ್ಲ.


ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.


ನೀವು ಆ ಸಂದೇಶದ ಮೂಲಕ ರಕ್ಷಣೆ ಹೊಂದಿದ್ದೀರಿ. ನಾನು ನಿಮಗೆ ತಿಳಿಸಿದ ಸಂದೇಶದಲ್ಲಿ ನಿಮಗೆ ದೃಢವಾದ ನಂಬಿಕೆ ಇರಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮ ನಂಬಿಕೆಯು ನಿರರ್ಥಕವಾಗುವುದು.


ಹಿಂದಿನ ಕಾಲದಲ್ಲಿ ನೀವು ಪಾಪಕ್ಕೆ ಗುಲಾಮರಾಗಿದ್ದಿರಿ. ಪಾಪವು ನಿಮ್ಮನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿತ್ತು. ನಿಮಗೆ ಬೋಧಿಸಿದ ವಿಷಯಗಳಿಗೆ ನೀವು ಸಂಪೂರ್ಣವಾಗಿ ವಿಧೇಯರಾದ್ದರಿಂದ ದೇವರಿಗೆ ಸ್ತೋತ್ರವಾಗಲಿ.


ದೀನರನ್ನು ಯೆಹೋವನು ಸಂತೋಷಿಸುವಂತೆ ಮಾಡುವನು. ಬಡವರು ಇಸ್ರೇಲರ ಪರಿಶುದ್ಧನಲ್ಲಿ ಉಲ್ಲಾಸಿಸುವರು.


ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನಾವೆಲ್ಲಿಗೆ ಹೋಗೋಣ? ನಿತ್ಯಜೀವವನ್ನು ಕೊಡುವ ಸಂಗತಿಗಳು ನಿನ್ನಲ್ಲಿವೆ.


ನೀವು ದೇವರ ಸಂದೇಶವನ್ನು ಸ್ವೀಕರಿಸಿಕೊಂಡದ್ದಕ್ಕಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀವು ಆ ಸಂದೇಶವನ್ನು ನಮ್ಮಿಂದ ಕೇಳಿ, ಅದನ್ನು ದೇವರ ವಾಕ್ಯದಂತೆ ಒಪ್ಪಿಕೊಂಡಿರೇ ಹೊರತು ಮಾನವನ ವಾಕ್ಯಗಳೆಂದಲ್ಲ. ಅದು ನಿಜವಾಗಿಯೂ ದೇವರ ಸಂದೇಶ. ಆ ಸಂದೇಶವು ನಂಬುವವರಾದ ನಿಮ್ಮಲ್ಲಿ ಕಾರ್ಯಮಾಡುತ್ತದೆ.


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿಬಿಡುವಿರಿ.


ಆ ಸಮಯದಲ್ಲಿ ಜನರು ತಮ್ಮ ಬೆಳ್ಳಿಬಂಗಾರಗಳ ವಿಗ್ರಹಗಳನ್ನೆತ್ತಿ ಬಿಸಾಡಿಬಿಡುವರು. ಈ ವಿಗ್ರಹಗಳನ್ನು ಜನರು ಪೂಜಿಸುವದಕ್ಕಾಗಿ ಮಾಡಿಕೊಂಡರು. ಬಾವಲಿಗಳೂ, ಇಲಿಗಳೂ ವಾಸಿಸುವ ಸಂದುಗಳಲ್ಲಿ ಈ ವಿಗ್ರಹಗಳನ್ನು


“ನನ್ನ ಸಹೋದರರೇ, ಅಬ್ರಹಾಮನ ಕುಟುಂಬದ ಪುತ್ರರೇ, ನಿಜದೇವರನ್ನು ಆರಾಧಿಸುತ್ತಿರುವ ಯೆಹೂದ್ಯರಲ್ಲದವರೇ, ಕೇಳಿರಿ! ಈ ರಕ್ಷಣೆಯ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.


ನಿಮ್ಮ ನಂಬಿಕೆಗೆ ಒಂದು ಗುರಿಯಿದೆ. ನಿಮ್ಮ ಆತ್ಮವನ್ನು ರಕ್ಷಿಸಬೇಕೆಂಬುದೇ ಆ ಗುರಿ. ನಿಮ್ಮ ಗುರಿಯಾಗಿರುವ ರಕ್ಷಣೆಯನ್ನು ಹೊಂದಿಕೊಳ್ಳುವಿರಿ.


ಇದು, ಆಲಿವ್ ಮರದ ಕೆಲವು ಕೊಂಬೆಗಳು ಮುರಿಯಲ್ಪಟ್ಟಾಗ, ಕಾಡುಆಲಿವ್ ಮರದ ಕೊಂಬೆಯೊಂದು ಮೊದಲಿನ ಆಲಿವ್ ಮರಕ್ಕೆ ಸೇರಿಕೊಂಡಂತಿದೆ. ಯೆಹೂದ್ಯರಲ್ಲದ ನೀವು ಕಾಡುಕೊಂಬೆಗೆ ಸಮಾನವಾಗಿದ್ದೀರಿ. ಆದರೆ ಈಗ ನೀವು ಮೊದಲನೆ ಮರದ (ಯೆಹೂದ್ಯರ) ಶಕ್ತಿಯಲ್ಲಿಯೂ ಜೀವದಲ್ಲಿಯೂ ಪಾಲುಗಾರರಾಗಿದ್ದೀರಿ.


ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು.


ದೀನರು ಧನ್ಯರು. ದೇವರು ವಾಗ್ದಾನ ಮಾಡಿದ ಭೂಮಿಯನ್ನು ಅವರು ಹೊಂದಿಕೊಳ್ಳುವರು.


ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು.


ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


ನಿಮ್ಮ ದಂಗೆಕೋರತನದ ಮಾರ್ಗಗಳನ್ನೆಲ್ಲ ತೊರೆದುಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿರಿ. ಇಸ್ರೇಲ್ ಜನರೇ, ನೀವು ಮರಣವನ್ನು ಬರಮಾಡಿಕೊಳ್ಳುವುದೇಕೆ?


ನಿಮಗೆ ಸುವಾರ್ತೆಯನ್ನು ಶಕ್ತಿಯೊಡನೆ ತಂದಿದ್ದೇವೆ. ಕೇವಲ ನುಡಿಗಳನ್ನು ಬಳಸದೆ ಅದನ್ನು ಪವಿತ್ರಾತ್ಮನೊಡನೆಯೂ ಮತ್ತು ಅದು ಸತ್ಯವೆಂಬ ನಿಶ್ಚಿತ ಜ್ಞಾನದೊಡನೆಯೂ ತಂದಿದ್ದೇವೆ. ಇದಲ್ಲದೆ ನಾವು ನಿಮ್ಮೊಡನೆ ಇದ್ದಾಗ ನಿಮಗೋಸ್ಕರ ಹೇಗೆ ಜೀವಿಸಿದ್ದೆವು ಎಂಬುದು ನಿಮಗೆ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ಹಾಗೆ ಜೀವಿಸಿದೆವು.


ಅಲ್ಲದೆ ನಿಮ್ಮ ಮಧ್ಯದಲ್ಲಿ ಕೆಟ್ಟಮಾತುಗಳು ಇರಕೂಡದು. ನೀವು ಮೂರ್ಖತನದಿಂದ ಮಾತಾಡಕೂಡದು ಮತ್ತು ಹೊಲಸಾದ ಹಾಸ್ಯನುಡಿಗಳನ್ನು ಹೇಳಕೂಡದು. ಇವುಗಳು ನಿಮಗೆ ಯೋಗ್ಯವಾದವುಗಳಲ್ಲ. ಆದರೆ ನೀವು ದೇವರಿಗೆ ಸ್ತೋತ್ರ ಸಲ್ಲಿಸುವವರಾಗಿರಬೇಕು.


ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ.


ಇದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ: ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ಸರಿಯಾದ ಮಾರ್ಗಕ್ಕೆ ನಡೆಸುವವನು ಆ ಪಾಪಿಯ ಆತ್ಮವನ್ನು ಮರಣದಿಂದ ಪಾರುಮಾಡಿದವನೂ ಅನೇಕ ಪಾಪಗಳಿಗೆ ಕ್ಷಮಾಪಣೆಯಾಗುವಂತೆ ಮಾಡಿದವನೂ ಆಗುತ್ತಾನೆ.


ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು