Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:16 - ಪರಿಶುದ್ದ ಬೈಬಲ್‌

16 ಆದರೆ ನೀವು ಆ ವ್ಯಕ್ತಿಗೆ, “ದೇವರು ನಿನ್ನೊಂದಿಗಿರಲಿ! ಚಳಿಕಾಯಿಸಿಕೊಂಡು ತೃಪ್ತಿಯಾಗುವಷ್ಟು ಊಟ ಮಾಡು” ಎಂಬುದಾಗಿ ಹೇಳಿ ಬೇಕಾದವುಗಳನ್ನು ಅವನಿಗೆ ಕೊಡದೆ ಹೋದರೆ ನಿಮ್ಮ ಮಾತುಗಳಿಗೆ ಯಾವ ಬೆಲೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು ಹೇಳಿದರೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದದ್ದನ್ನು ಕೊಡದೆ - ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆತುಂಬಿಸಿಕೊಳ್ಳಿ ಎಂದು ಬರೀ ಮಾತು ಹೇಳಿದರೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮ್ಮಲ್ಲಿ ಒಬ್ಬನು ಅವನಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ, “ಸಮಾಧಾನದಿಂದ ಹೋಗಿರಿ, ಚಳಿ ಕಾಯಿಸಿಕೊಳ್ಳಿರಿ, ಹೊಟ್ಟೆ ತುಂಬಿಸಿಕೊಳ್ಳಿರಿ,” ಎಂದು ಹೇಳಿದರೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆಂಕಾ ಗರಜ್ ಹೊತ್ತೆ ತೆಂಕಾ ದಿಯ್ನಸ್ತಾನಾ, ತುಮ್ಚ್ಯಾತ್ಲ್ಯಾ ಕೊನ್‍ಬಿ ಎಕ್ಲ್ಯಾನ್ ತೆಂಕಾ ಸಮಾದಾನಾನ್ ಜಾವಾ ಅನಿ ಹುನ್ಹುನಿತ್ ರ್‍ಹಾವಾ ಅನಿ ಪೊಟ್‍ಭರ್ ಜೆವಾ ಮನುನ್ ಸಾಂಗ್ಲ್ಯಾರ್ ಕಾಯ್ ಫಾಯ್ದೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:16
11 ತಿಳಿವುಗಳ ಹೋಲಿಕೆ  

ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.


ನೀವು ಕೊಡಬೇಕೆಂದು ನಾನು ಆಜ್ಞಾಪಿಸುತ್ತಿಲ್ಲ. ಆದರೆ ನಿಮ್ಮ ಪ್ರೀತಿಯು ನಿಜವಾದ ಪ್ರೀತಿಯೇ ಎಂಬುದನ್ನು ನಾನು ನೋಡಬಯಸುತ್ತೇನೆ. ಸಹಾಯ ಮಾಡಲು ಇತರ ಜನರಿಗಿರುವ ನಿಜವಾದ ಬಯಕೆಯನ್ನು ನಿಮಗೆ ತೋರಿಸುವುದರ ಮೂಲಕವಾಗಿ ನಾನು ನಿಮ್ಮನ್ನು ಪರೀಕ್ಷಿಸುತ್ತೇನೆ.


ಯೇಸು ತನ್ನ ಶಿಷ್ಯರನ್ನು ಕರೆದು, “ನಾನು ಈ ಜನರಿಗಾಗಿ ದುಃಖಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಈಗ ಇವರಿಗೆ ಊಟಕ್ಕೆ ಏನೂ ಇಲ್ಲ. ಇವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಮನಸ್ಸಿಲ್ಲ. ಇವರು ಮನೆಗೆ ಹೋಗುತ್ತಿರುವಾಗ ಬಳಲಿಹೋಗಬಹುದು” ಎಂದು ಹೇಳಿದನು.


ನೀವು ಈ ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ.


ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಟ್ಟಿರಿ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು, ನೀವು ನನಗೆ ಆರೈಕೆ ಮಾಡಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುತ್ತಾನೆ.


ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯಿಂದಲೇ ನಿನಗೆ ವಾಸಿಯಾಯಿತು. ಸಮಾಧಾನದಿಂದ ಹೋಗು. ನಿನಗೆ ಇನ್ನು ಮೇಲೆ ಆ ಕಾಯಿಲೆಯ ಬಾಧೆ ಇರುವುದಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು