Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:19 - ಪರಿಶುದ್ದ ಬೈಬಲ್‌

19 ಒಬ್ಬನೇ ದೇವರಿರುವನೆಂದು ನೀವು ನಂಬಿದ್ದೀರಿ. ಒಳ್ಳೆಯದು! ಆದರೆ ದೆವ್ವಗಳೂ ಅದನ್ನು ನಂಬುತ್ತವೆ ಮತ್ತು ಭಯದಿಂದ ನಡುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೇವರು ಒಬ್ಬರೇ ಎಂದು ನೀವು ನಂಬುತ್ತೀರಿ. ಈ ನಂಬಿಕೆ ಒಳ್ಳೆಯದೇ. ಆದರೆ ದೆವ್ವಗಳೂ ನಂಬುತ್ತವೆ; ಹೆದರಿ ನಡುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೇವರು ಒಬ್ಬನೇ ಎಂದು ನೀನು ನಂಬುವವನು. ಹಾಗೆ ನಂಬುವದು ಒಳ್ಳೇದು. ದೆವ್ವಗಳು ಕೂಡ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರು ಒಬ್ಬರೇ ಎಂದು ನೀನು ನಂಬುತ್ತೀ, ಅದು ಒಳ್ಳೆಯದು, ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ಗಿರೆ ಸೈತ್ ದೆವ್ ಎಕ್ಲೊಚ್ ಮನುನ್ ವಿಶ್ವಾಸ್ ಕರ್ತಾತ್ ಅನಿ ಭಿಂಯಾನ್ ಥರ್ ಥರ್‌ತ್ಯಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:19
31 ತಿಳಿವುಗಳ ಹೋಲಿಕೆ  

“ನಜರೇತಿನ ಯೇಸುವೇ! ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡಲು ಇಲ್ಲಿಗೆ ಬಂದಿರುವೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಕಳುಹಿಸಲ್ಪಟ್ಟ ಪರಿಶುದ್ಧನು!” ಎಂದು ಕೂಗಿದನು.


“ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು.


ಅವರಿಬ್ಬರು ಯೇಸುವಿನ ಬಳಿಗೆ ಬಂದು. “ನೀನು ನಮಗೆ ಏನು ಮಾಡಬೇಕೆಂದಿರುವೆ? ದೇವಕುಮಾರನೇ, ನೇಮಿತ ಕಾಲಕ್ಕಿಂತ ಮುಂಚೆಯೇ ನಮ್ಮನ್ನು ಶಿಕ್ಷಿಸಲು ಇಲ್ಲಿಗೆ ಬಂದೆಯಾ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಈ ಜನರು ಮಹೋನ್ನತನಾದ ದೇವರ ಸೇವಕರು! ನೀವು ಹೇಗೆ ರಕ್ಷಣೆ ಹೊಂದಬಹುದೆಂಬುದನ್ನು ಅವರು ಹೇಳುತ್ತಿದ್ದಾರೆ!” ಎಂದು ಕೂಗುತ್ತಿದ್ದಳು.


“ಇಸ್ರೇಲಿನ ಜನರೇ, ಕಿವಿಗೊಡಿರಿ. ಯೆಹೋವನೇ ನಮ್ಮ ದೇವರು. ದೇವರು ಒಬ್ಬನೇ!


ಒಂದೇ ಪಕ್ಷವಿದ್ದರೆ ಮಧ್ಯಸ್ತನು ಬೇಕಿಲ್ಲ. ದೇವರು ಒಬ್ಬನೇ.


“ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ ‘ಬಂಡೆ’ಯೂ ಇಲ್ಲ. ನಾನೊಬ್ಬನೇ!”


ಆದರೆ ಒಂದು ಸಲ ದೆವ್ವವೊಂದು ಅವರಿಗೆ, “ನನಗೆ ಯೇಸುವೂ ಗೊತ್ತು ಪೌಲನೂ ಗೊತ್ತು. ಆದರೆ ನೀವು ಯಾರು?” ಎಂದು ಪ್ರತ್ಯುತ್ತರ ಕೊಟ್ಟಿತು.


ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು.


ಆ ಸಮಯದಲ್ಲಿ ಯೆಹೋವನು ಇಡೀ ಭೂಲೋಕದ ಅರಸನಾಗುವನು. ಆತನು ಒಬ್ಬನೇ. ಆತನ ಹೆಸರು ಒಂದೇ.


ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ.


ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ಯೆಹೋವನು ಹೇಳುವುದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿಮ್ಮನ್ನು ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀವು ತಿಳಿಯಬೇಕೆಂದು ನಿಮ್ಮನ್ನು ಆರಿಸಿಕೊಂಡೆನು. ನಾನೇ ನಿಜವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವದಿಲ್ಲ.


ದೇವರು ಒಬ್ಬನೇ. ದೇವರಿಗೂ ಮನುಷ್ಯರಿಗೂ ಮಧ್ಯಸ್ತನು ಒಬ್ಬನೇ. ಮನುಷ್ಯನಾಗಿರುವ ಯೇಸುಕ್ರಿಸ್ತನೇ ಆತನು.


ಅದಕ್ಕೆ ಯೇಸು, “ಇಸ್ರೇಲಿನ ಜನರೇ ಕೇಳಿರಿ, ‘ನಮ್ಮ ದೇವರಾದ ಪ್ರಭುವೊಬ್ಬನೇ ದೇವರು.


ನಮಗಾದರೋ ಒಬ್ಬನೇ ಒಬ್ಬ ದೇವರಿದ್ದಾನೆ. ಆತನು ನಮ್ಮ ತಂದೆ. ಸಮಸ್ತವನ್ನು ಆತನೇ ಸೃಷ್ಟಿ ಮಾಡಿದನು. ನಾವು ಆತನಿಗೋಸ್ಕರ ಜೀವಿಸುತ್ತೇವೆ. ಒಬ್ಬನೇ ಒಬ್ಬ ಪ್ರಭುವಿದ್ದಾನೆ. ಆತನೇ ಯೇಸು ಕ್ರಿಸ್ತನು. ಆತನ ಮೂಲಕವಾಗಿ ಸಮಸ್ತವು ಉಂಟಾಯಿತು. ಆತನ ಮೂಲಕವಾಗಿ ನಾವು ಜೀವವನ್ನು ಹೊಂದಿದ್ದೇವೆ.


ನಾನೊಬ್ಬನೇ ದೇವರೆಂದು ಎಲ್ಲರೂ ತಿಳಿದುಕೊಳ್ಳಲಿ ಎಂದು ನಾನು ಇದನ್ನೆಲ್ಲಾ ಮಾಡುತ್ತಿದ್ದೇನೆ. ಪೂರ್ವದಿಂದ ಪಶ್ಚಿಮದ ತನಕ ಜನರೆಲ್ಲರೂ ನಾನೇ ದೇವರೆಂದೂ ನನ್ನ ಹೊರತು ಬೇರೆ ದೇವರಿಲ್ಲವೆಂದೂ ತಿಳಿದುಕೊಳ್ಳುವರು.


ದೇವರು ಒಬ್ಬನೇ. ಆತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ದೇವದೂತರು ಅಧಿಕಾರವನ್ನು ಹೊಂದಿದ್ದರೂ ಅದನ್ನು ಉಳಿಸಿಕೊಳ್ಳಲಾರದೆ ಸ್ವಂತ ವಾಸಸ್ಥಾನವನ್ನು ಬಿಟ್ಟುಹೋದದ್ದನ್ನು ನೆನಸಿಕೊಳ್ಳಿರಿ. ಆದ್ದರಿಂದ ಪ್ರಭುವು ಈ ದೇವದೂತರನ್ನು ಅಂಧಕಾರದಲ್ಲಿಟ್ಟನು. ಅವರನ್ನು ಶಾಶ್ವತವಾದ ಬೇಡಿಗಳಿಂದ ಬಂಧಿಸಲಾಯಿತು. ಮಹಾದಿನದಂದು ಅವರಿಗೆ ತೀರ್ಪು ನೀಡುವುದಕ್ಕಾಗಿ ಆತನು ಅವರನ್ನು ಅಲ್ಲಿಟ್ಟಿದ್ದಾನೆ.


ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು” ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ.


ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.


ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.


ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.


ನಂತರ ಯೇಸು ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಅನುಸರಿಸುವುದಕ್ಕಾಗಿ ದೇವರ ಆಜ್ಞೆಗಳನ್ನು ತಿರಸ್ಕರಿಸುವುದರಲ್ಲಿ ನಿಪುಣರಾಗಿದ್ದೀರಿ!


ಆದರೆ ನೀತಿಯಬಾಳ್ವೆ, ಇಂದ್ರಿಯನಿಗ್ರಹ ಮತ್ತು ಮುಂದೆ ಬರಲಿರುವ ನ್ಯಾಯತೀರ್ಪುಗಳ ಬಗ್ಗೆ ಪೌಲನು ಮಾತಾಡಿದಾಗ ಅವನು ಭಯಗೊಂಡು, “ಈಗ ನೀನು ಹೋಗು! ನನಗೆ ಹೆಚ್ಚು ಸಮಯವಿರುವಾಗ ನಿನ್ನನ್ನು ಕರೆಯಿಸುತ್ತೇನೆ” ಎಂದು ಹೇಳಿದನು.


ಆಗ ಯೆಹೋವನು ಅವನಿಗೆ, “ನಾನು ಆ ಜನರನ್ನು ನಾಶಮಾಡದೆ ಹೋದುದರಿಂದ ನೀನು ಸಿಟ್ಟುಗೊಳ್ಳುವದು ಸರಿಯೋ?” ಎಂದು ಕೇಳಿದನು.


ಆದರೆ ದೇವರು ಯೋನನಿಗೆ ಹೇಳಿದ್ದೇನೆಂದರೆ, “ಆ ಸೋರೆ ಗಿಡವು ಸತ್ತುಹೋದುದಕ್ಕೆ ನೀನು ಕೋಪಗೊಳ್ಳುವುದು ಸರಿಯೋ?” ಅದಕ್ಕುತ್ತರವಾಗಿ ಯೋನನು, “ಹೌದು! ನಾನು ಕೋಪಗೊಂಡದ್ದು ನಿಜ. ನಾನು ಸಾಯುವಷ್ಟು ಕೋಪಗೊಂಡಿದ್ದೇನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು