Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:20 - ಪರಿಶುದ್ದ ಬೈಬಲ್‌

20 ಬುದ್ಧಿಹೀನರೇ, ಕ್ರಿಯೆಯಿಲ್ಲದ ನಂಬಿಕೆಯು ನಿಷ್ಪ್ರಯೋಜಕವೆಂದು ನಿಮಗೆ ತೋರಿಸಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮತಿಹೀನನೇ, ಸತ್ಕ್ರಿಯೆಗಳಿಲ್ಲದ ವಿಶ್ವಾಸ ಗೊಡ್ಡು ವಿಶ್ವಾಸ ಎಂಬುದಕ್ಕೆ ದೃಷ್ಟಾಂತ ಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಪ್ರಯೋಜಕನೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾಗಿದೆ ಎಂಬದಕ್ಕೆ ದೃಷ್ಟಾಂತಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮೂರ್ಖನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಪ್ರಮಾಣಗಳು ಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅರೆ ಪಿಶ್ಯಾ ಮಾನ್ಸಾ, ಕಾಮಾ ನಸ್ತಾನಾ ಅಸಲ್ಲೊ ವಿಶ್ವಾಸ್ ಕಾಯ್ಬಿ ಫಾಯ್ದ್ಯಾಚೊ ನ್ಹಯ್ ಮನುನ್ ತುಕಾ ದಾಕ್ವುಚೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:20
16 ತಿಳಿವುಗಳ ಹೋಲಿಕೆ  

ಒಬ್ಬ ವ್ಯಕ್ತಿಯ ದೇಹದಲ್ಲಿ ಆತ್ಮವಿಲ್ಲದಿದ್ದರೆ, ಅವನ ದೇಹವು ಸತ್ತದ್ದೇ. ಅದೇ ರೀತಿಯಲ್ಲಿ ಕ್ರಿಯೆಯಿಲ್ಲದ ನಂಬಿಕೆಯು ಸತ್ತದ್ದೇ.


ಇದೇ ನಿಯಮ ನಂಬಿಕೆಗೂ ಅನ್ವಯಿಸುತ್ತದೆ. ಕ್ರಿಯೆಯಿಲ್ಲದ ನಂಬಿಕೆಯು ತನ್ನಲ್ಲಿಯೇ ಸತ್ತುಹೋಗಿದೆ.


ತನ್ನ ಜಮೀನಿನಲ್ಲಿ ದುಡಿಯುವ ರೈತನಿಗೆ ಸಾಕಷ್ಟು ಆಹಾರವಿರುವುದು. ಆದರೆ ಮೂಢನು ಪ್ರಯೋಜನವಿಲ್ಲದ ಸಂಗತಿಗಳಲ್ಲಿ ತನ್ನ ಸಮಯವನ್ನು ಹಾಳುಮಾಡುವನು.


ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.


ಯಾವನಾದರೂ ತಾನು ಪ್ರಾಮುಖ್ಯನಲ್ಲದಿದ್ದರೂ ತನ್ನನ್ನು ಪ್ರಾಮುಖ್ಯನೆಂದು ಭಾವಿಸಿಕೊಂಡರೆ ಅವನು ತನ್ನನ್ನೇ ಮೋಸಪಡಿಸಿಕೊಳ್ಳುತ್ತಾನೆ. ಒಬ್ಬನು ತನ್ನನ್ನು ಮತ್ತೊಬ್ಬನೊಡನೆ ಹೋಲಿಸಿಕೊಳ್ಳಕೂಡದು.


ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ “ಭಕ್ತಿ”ಗೆ ಬೆಲೆಯಿಲ್ಲ.


ಅವಿಧೇಯರಾಗಿರುವ ಜನರು ಅನೇಕರಿದ್ದಾರೆ. ಅವರು ನಿರರ್ಥಕವಾದುದನ್ನು ಕುರಿತು ಮಾತನಾಡುತ್ತಲೇ ಇರುತ್ತಾರೆ ಮತ್ತು ಉಳಿದ ಜನರನ್ನು ತಪ್ಪುದಾರಿಗೆ ಎಳೆಯುತ್ತಾರೆ. ಯೆಹೂದ್ಯರಲ್ಲದ ಜನರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ಬೋಧಿಸುವ ಜನರ ಬಗ್ಗೆಯೇ ನಾನು ಹೇಳುತ್ತಿರುವುದು.


ಕೆಲವರು ಈ ಗುರಿತಪ್ಪಿ ನಿರರ್ಥಕವಾದ ವಿಷಯಗಳನ್ನು ಕುರಿತು ಮಾತಾಡುತ್ತಿದ್ದಾರೆ.


ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು.


ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮ ಪೂರ್ವಿಕರಿಗೆ ಅನ್ಯಾಯ ಮಾಡಿದೆನೇ? ಅದಕ್ಕಾಗಿ ಅವರು ನನ್ನನ್ನು ತಿರಸ್ಕರಿಸಿದರೇ? ನಿಮ್ಮ ಪೂರ್ವಿಕರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿ ತಾವು ಸಹ ನಿಷ್ಪ್ರಯೋಜಕರಾದರು.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ಏಕೆಂದರೆ ಒಬ್ಬನು ನೀತಿವಂತನಾಗುವುದು ನಂಬಿಕೆಯ ಮೂಲಕವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಲು ಅವನು ಮಾಡಿದ ಕಾರ್ಯಗಳಿಂದಲ್ಲ. ನಾವು ನಂಬುವುದೂ ಇದನ್ನೇ.


ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು