Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:21 - ಪರಿಶುದ್ದ ಬೈಬಲ್‌

21 ಅಬ್ರಹಾಮನು ನಮ್ಮ ಪಿತೃ. ಅವನು ತನ್ನ ಕ್ರಿಯೆಗಳಿಂದ ನೀತಿವಂತನಾದನು. ಅವನು ಯಜ್ಞವೇದಿಕೆಯ ಮೇಲೆ ತನ್ನ ಮಗನಾದ ಇಸಾಕನನ್ನು ದೇವರಿಗೆ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಮ್ಮ ಪಿತಾಮಹ ಅಬ್ರಹಾಮನು ದೇವರೊಂದಿಗೆ ಸತ್ಸಂಬಂಧವನ್ನು ಪಡೆದುದ್ದಾದರೂ ಹೇಗೆ? ತನ್ನ ಮಗ ಇಸಾಕನನ್ನು ದೇವರಿಗೆ ಬಲಿಯಾಗಿ ಸಮರ್ಪಿಸಿದ ಸತ್ಕ್ರಿಯೆಯಿಂದಲ್ಲವೇ? ವಿಶ್ವಾಸವು ಸತ್ಕ್ರಿಯೆಗಳಿಂದ ಸಚೇತನಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಮ್ಮ ಪಿತೃವಾದ ಅಬ್ರಹಾಮನು ಇಸಾಕನೆಂಬ ತನ್ನ ಮಗನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಬಲಿಪೀಠದ ಮೇಲೆ ಅರ್ಪಿಸಿದಾಗ ನೀತಿನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅಮ್ಚ್ಯಾ ವಾಡ್ ವಡ್ಲಾ ಅಬ್ರಾಹಾಮಾನ್ ಅಪ್ನಾಚ್ಯಾ ಲೆಕಾಕ್ ಇಸಾಕಾಕ್ ಅಲ್ತಾರಿ ವರ್ತಿ ಭೆಟ್ವುತಾನಾ, ತ್ಯಾ ತೆಚ್ಯಾ ಕಾಮಾಕ್ ಲಾಗುನ್ ತೊ ನಿತಿವಂತ್ ಮನುನ್ ಹೊಲೆ ಹೊಯ್ ಕಾಯ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:21
21 ತಿಳಿವುಗಳ ಹೋಲಿಕೆ  

ಯೆಹೂದ್ಯರು, “ಅಬ್ರಹಾಮನೇ ನಮ್ಮ ತಂದೆ” ಎಂದು ಹೇಳಿದರು. ಯೇಸು, “ನೀವು ನಿಜವಾಗಿಯೂ ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದ ಕಾರ್ಯಗಳನ್ನೇ ಮಾಡುತ್ತಿದ್ದಿರಿ.


ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ನಿಮ್ಮ ಮಾತುಗಳಿಂದಲೇ ನಿಮಗೆ ನೀತಿವಂತರೆಂದಾಗಲಿ ಅಪರಾಧಿಗಳೆಂದಾಗಲಿ ತೀರ್ಪು ನೀಡಲಾಗುವುದು” ಎಂದನು.


ಹೀಗಿರಲು ಒಬ್ಬನು ತನ್ನ ಕ್ರಿಯೆಗಳಿಂದ ನೀತಿವಂತನಾಗುತ್ತಾನೆ ಎಂಬುದು ಸ್ಪಷ್ಟವಾಗಿದೆ. ಒಬ್ಬನು ಕೇವಲ ನಂಬಿಕೆಯೊಂದರಿಂದಲೇ ನೀತಿವಂತನಾಗಲು ಸಾಧ್ಯವಿಲ್ಲ.


ಆದರೆ ಯಾವನಾದರೂ, “ನಿನ್ನಲ್ಲಿ ನಂಬಿಕೆಯಿದೆ; ನನ್ನಲಿ ಕ್ರಿಯೆಗಳಿವೆ” ಎಂದು ವಾದಿಸಬಹುದು. ಅದಕ್ಕೆ ನನ್ನ ಉತ್ತರವೇನೆಂದರೆ ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ತೋರಿಸಲಾರೆ. ನಾನಾದರೊ ನನ್ನ ಒಳ್ಳೆಯ ಕಾರ್ಯಗಳ ಮೂಲಕ ನನ್ನ ನಂಬಿಕೆಯನ್ನು ನಿನಗೆ ತೋರಿಸುವೆ ಎಂದು ಹೇಳಬಹುದು.


ಅಲ್ಲದೆ ಸುನ್ನತಿ ಮಾಡಿಸಿಕೊಂಡಿರುವ ಜನರಿಗೂ ಸಹ ಅಬ್ರಹಾಮನು ತಂದೆಯಾಗಿದ್ದಾನೆ. ಆದರೆ ಅವನನ್ನು ಅವರ ತಂದೆಯನ್ನಾಗಿ ಮಾಡುವಂಥದ್ದು ಅವರ ಸುನ್ನತಿಯಲ್ಲ. ನಮ್ಮ ತಂದೆಯಾದ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವ ಮೊದಲು ಹೊಂದಿದ್ದ ನಂಬಿಕೆಗನುಸಾರವಾಗಿ ಅವರು ಜೀವಿಸಿದರೆ ಮಾತ್ರ ಅವನು ಅವರ ತಂದೆಯಾಗಿದ್ದಾನೆ.


ಹಾಗಾದರೆ, ನಮ್ಮ ಪಿತೃವಾದ ಅಬ್ರಹಾಮನ ಬಗ್ಗೆ ನಾವು ಏನು ಹೇಳೋಣ? ಅವನು ನಂಬಿಕೆಯ ಬಗ್ಗೆ ಏನು ಕಲಿತುಕೊಂಡನು?


ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.


ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.


ನಮ್ಮತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೆಂದು ಭಾವಿಸಿಕೊಂಡಿರುವೆಯಾ? ಅಬ್ರಹಾಮನು ಸತ್ತುಹೋದನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಹೀಗಿರಲು, ನೀನು ನಿನ್ನನ್ನು ಯಾರೆಂದು ಭಾವಿಸಿಕೊಂಡಿರುವೆ?” ಎಂದು ಕೇಳಿದರು.


“ಅದಕ್ಕೆ ಐಶ್ವರ್ಯವಂತನು, ‘ತಂದೆಯಾದ ಅಬ್ರಹಾಮನೇ, ಹಾಗೆನ್ನಬೇಡ! ಯಾರಾದರೊಬ್ಬರು ಸತ್ತವರೊಳಗಿಂದ ಎದ್ದುಹೋದರೆ, ಅವರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳುವರು’ ಎಂದು ಹೇಳಿದನು.


‘ತಂದೆಯಾದ ಅಬ್ರಹಾಮನೇ, ನನ್ನ ಮೇಲೆ ಕರುಣೆತೋರು! ಲಾಜರನನ್ನು ನನ್ನ ಬಳಿಗೆ ಕಳುಹಿಸು. ಅವನು ತನ್ನ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ನಾನು ಈ ಬೆಂಕಿಯಲ್ಲಿ ಯಾತನೆಪಡುತ್ತಿದ್ದೇನೆ!’ ಎಂದು ಬೇಡಿಕೊಂಡನು.


ನಮ್ಮ ವೈರಿಗಳ ಹಿಡಿತದಿಂದ ನಮ್ಮನ್ನು ಬಿಡಿಸುವುದಾಗಿ ದೇವರು ನಮ್ಮ ಪಿತೃವಾದ ಅಬ್ರಹಾಮನಿಗೆ ವಾಗ್ದಾನ ಮಾಡಿದ್ದಾನೆ.


‘ಅಬ್ರಹಾಮನು ನಮ್ಮ ತಂದೆ’ ಎಂದು ನೀವು ಜಂಬಪಡುವುದೇಕೆ? ದೇವರು ಅಬ್ರಹಾಮನಿಗಾಗಿ ಇಲ್ಲಿರುವ ಬಂಡೆಗಳಿಂದಲೂ ಮಕ್ಕಳನ್ನು ಸೃಷ್ಟಿಸಬಲ್ಲನು ಎಂದು ನಾನು ನಿಮಗೆ ಹೇಳುತ್ತೇನೆ.


ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮ ಮಾತೆಯಾದ ಸಾರಳನ್ನೂ ದೃಷ್ಟಿಸಿರಿ; ನಾನು ಕರೆದಾಗ ಅಬ್ರಹಾಮನು ಒಬ್ಬಂಟಿಗನಾಗಿದ್ದನು. ನಾನು ಅವನನ್ನು ಆಶೀರ್ವದಿಸಿ, ಅವನ ಸಂತಾನವನ್ನು ಅಭಿವೃದ್ಧಿಪಡಿಸಿ, ಅವನನ್ನು ಮಹಾಜನಾಂಗದ ಮೂಲಪುರುಷನನ್ನಾಗಿ ಮಾಡಿದೆನು.”


ನಿನ್ನ ಸೇವಕನಾದ ನನಗೆ ತೀರ್ಪುಮಾಡಬೇಡ. ನನ್ನ ಇಡೀ ಜೀವಮಾನದಲ್ಲಿ ನಿರಪರಾಧಿಯೆಂಬ ತೀರ್ಪನ್ನು ಹೊಂದಲು ನನಗೆ ಸಾಧ್ಯವೇ ಇಲ್ಲ.


ಆದರೆ ಯೆಹೋವನಾದ ನಾನು ನಿಮ್ಮ ಪೂರ್ವಿಕನಾದ ಅಬ್ರಹಾಮನನ್ನು ಆ ಪ್ರದೇಶದಿಂದ ನದಿಯ ಮತ್ತೊಂದು ದಡಕ್ಕೆ ಕರೆದುಕೊಂಡು ಬಂದೆ. ನಾನು ಅವನನ್ನು ಕಾನಾನ್ ಪ್ರದೇಶದಲ್ಲೆಲ್ಲ ಸಂಚಾರ ಮಾಡಿಸಿ ಅವನಿಗೆ ಅನೇಕ ಮಕ್ಕಳನ್ನು ಕೊಟ್ಟೆನು, ನಾನು ಅಬ್ರಹಾಮನಿಗೆ ಇಸಾಕನೆಂಬ ಮಗನನ್ನು ಕೊಟ್ಟೆ.


ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಿದನು. ಇಸಾಕನನ್ನು ಯಜ್ಞವಾಗಿ ಸಮರ್ಪಿಸೆಂದು ದೇವರು ಅವನಿಗೆ ಹೇಳಿದನು. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ ವಿಧೇಯನಾದನು. ದೇವರು ಅವನಿಗೆ, “ನಿನ್ನ ಸಂತತಿಗಳವರು ಇಸಾಕನ ಮೂಲಕ ಬರುವರು” ಎಂದು ಮೊದಲೇ ವಾಗ್ದಾನ ಮಾಡಿದ್ದನು. ಆದರೂ ತನ್ನ ಒಬ್ಬನೇ ಮಗನನ್ನು ಅರ್ಪಿಸಲು ಅವನು ಸಿದ್ಧನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು