Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:23 - ಪರಿಶುದ್ದ ಬೈಬಲ್‌

23 ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ಅಬ್ರಹಾಮನನ್ನು “ದೇವರ ಸ್ನೇಹಿತ” ನೆಂದು ಕರೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದುದರಿಂದಲೇ, “ಅಬ್ರಹಾಮನು ದೇವರಲ್ಲಿ ವಿಶ್ವಾಸ ಇಟ್ಟನು. ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ಮಾತು ನೆರವೇರಿತು. ಅಬ್ರಹಾಮನು ದೇವರ ಮಿತ್ರನೆನಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಶಾಸ್ತ್ರದ ಮಾತು ಹೀಗೆ ನೆರವೇರಿತು, ಮತ್ತು ದೇವರ ಸ್ನೇಹಿತನೆಂಬ ಹೆಸರು ಅವನಿಗೆ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅನಿ ಅಸೆ “ಅಬ್ರಾಹಾಮಾನ್ ದೆವಾಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನ್ ತೆಚ್ಯಾ ವೈನಾ ದೆವಾನ್ ತೆಕಾ ನಿತಿವಂತ್ ಮನುನ್ ಸ್ವಿಕಾರ್ ಕರ್ಲ್ಯಾನ್” ಮನುನ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಪುರಾ ಹೊಲೆ ಅನಿ ಅಸೆ ಅಬ್ರಾಹಾಮ್ ದೆವಾಚೊ ವಾಂಗ್ಡಿ ಮನುನ್ ಬಲ್ವುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:23
22 ತಿಳಿವುಗಳ ಹೋಲಿಕೆ  

ಅಬ್ರಾಮನು ಯೆಹೋವನನ್ನು ನಂಬಿದನು. ಆ ನಂಬಿಕೆಯ ನಿಮಿತ್ತವೇ ಯೆಹೋವನು ಅಬ್ರಾಮನನ್ನು ನೀತಿವಂತನೆಂದು ಪರಿಗಣಿಸಿದನು.


ಯೆಹೋವನು ಹೀಗೆನ್ನುತ್ತಾನೆ, “ಇಸ್ರೇಲೇ, ನೀನು ನನ್ನ ಸೇವಕನಾಗಿರುವೆ. ಯಾಕೋಬೇ, ನಾನು ನಿನ್ನನ್ನು ಆರಿಸಿಕೊಂಡೆನು. ನೀನು ನನ್ನ ಸ್ನೇಹಿತನಾದ ಅಬ್ರಹಾಮನ ಕುಟುಂಬದವನಾಗಿರುವೆ.


ನೀನೇ ನಮ್ಮ ದೇವರಾಗಿರುವೆ. ನೀನು ಈ ದೇಶದಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿ ಈ ದೇಶವನ್ನು ಅಬ್ರಹಾಮನ ಸಂತತಿಯವರಾದ ಇಸ್ರೇಲರಿಗೆ ಕೊಟ್ಟೆ. ಅಬ್ರಹಾಮನು ನಿನ್ನ ಸ್ನೇಹಿತನಾಗಿದ್ದನು.


ಪವಿತ್ರ ಗ್ರಂಥವು ಅಬ್ರಹಾಮನ ವಿಷಯವಾಗಿಯೂ ಇದನ್ನೇ ಹೇಳುತ್ತದೆ. “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅವನ ನಂಬಿಕೆಯನ್ನು ಪರಿಗಣಿಸಿದ್ದರಿಂದ ನೀತಿವಂತನೆಂಬ ನಿರ್ಣಯ ಅವನಿಗೆ ದೊರೆಯಿತು.”


ಯೆಹೋವನು ಮೋಶೆಯೊಂದಿಗೆ ಮುಖಾಮುಖಿಯಾಗಿ ಮಾತಾಡುತ್ತಿದ್ದನು. ಒಬ್ಬನು ತನ್ನ ಸ್ನೇಹಿತನೊಂದಿಗೆ ಮಾತಾಡುವಂತೆ ಯೆಹೋವನು ಮೋಶೆಯೊಂದಿಗೆ ಮಾತಾಡುತ್ತಿದ್ದನು. ಯೆಹೋವನೊಂದಿಗೆ ಮಾತಾಡಿದ ನಂತರ ಮೋಶೆಯು ಪಾಳೆಯಕ್ಕೆ ಮರಳಿ ಹೋಗುತ್ತಿದ್ದನು. ನೂನನ ಮಗನೂ ಯೌವನಸ್ಥನೂ ಆಗಿದ್ದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯು ಗುಡಾರವನ್ನು ಬಿಟ್ಟುಹೋದಾಗ ಯೆಹೋಶುವನು ಗುಡಾರದಲ್ಲಿಯೇ ಇರುತ್ತಿದ್ದನು.


ಇಸ್ರೇಲರು ಹುಟ್ಟುವುದಕ್ಕಿಂತ ಮೊದಲೇ ದೇವರು ಅವರನ್ನು ತನ್ನ ಜನರನ್ನಾಗಿ ಆರಿಸಿಕೊಂಡನು. ಆತನು ಅವರನ್ನು ಹೊರಕ್ಕೆ ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ಇಸ್ರೇಲಿನ ಜನರ ವಿರೋಧವಾಗಿ ಎಲೀಯನು ದೇವರಿಗೆ ಮಾಡಿದ ಪ್ರಾರ್ಥನೆಯ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿದೆ.


ಆದರೆ ಇದು ಸತ್ಯವಲ್ಲ. ಏಕೆಂದರೆ ಸಮಸ್ತವೂ ಪಾಪಕ್ಕೆ ಒಳಗಾಗಿದೆ ಎಂದು ಪವಿತ್ರ ಗ್ರಂಥ ಪ್ರಕಟಿಸುತ್ತದೆ. ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವವರಿಗೆ ಅವರ ನಂಬಿಕೆಯ ಆಧಾರದ ಮೇಲೆ ವಾಗ್ದಾನದ ಫಲವು ದೊರೆಯಬೇಕೆಂದೇ ಪವಿತ್ರ ಗ್ರಂಥವು ಹೀಗೆ ಪ್ರಕಟಿಸಿದೆ.


ಒಬ್ಬನು ತನ್ನ ಸ್ನೇಹಿತನಿಗಾಗಿ ಬೇಡಿಕೊಳ್ಳುವಂತೆ ನನ್ನ ಕಣ್ಣೀರು ನನ್ನ ಪರವಾಗಿ ದೇವರ ಮುಂದೆ ವಾದ ಮಾಡುತ್ತದೆ.


ಪವಿತ್ರ ಗ್ರಂಥದಲ್ಲಿ ದೇವರು ಫರೋಹನಿಗೆ, “ನಾನು ನಿನಗೆ ನನ್ನ ಶಕ್ತಿಯನ್ನು ತೋರಿಸಬೇಕೆಂತಲೂ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಿಪಡಿಸಬೇಕೆಂತಲೂ ನಿನ್ನನ್ನು ರಾಜನನ್ನಾಗಿ ಮಾಡಿದೆನು” ಎಂದು ಹೇಳಿದ್ದಾನೆ.


ಆಗ ಯೇಸು, ಅವರಿಗೆ, “ನಾನು ಇದೀಗ ಓದಿದ ಮಾತುಗಳನ್ನು ನೀವು ಕೇಳುತ್ತಿದ್ದಾಗಲೇ ಅವು ನಿಜವಾಗಿ ನೆರವೇರಿದವು!” ಎಂದು ಹೇಳಿದನು.


ಅಲ್ಲದೆ ಅವರು ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದರು. ಅವರು ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು.


ಪವಿತ್ರಗ್ರಂಥದಲ್ಲಿ ಬರೆದಿರುವಂತೆ, ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ನಾನು ಅಮೂಲ್ಯವಾದ ಮೂಲೆಗಲ್ಲನ್ನು ಆರಿಸಿದ್ದೇನೆ. ನಾನು ಆ ಕಲ್ಲನ್ನು ಚಿಯೋನಿನಲ್ಲಿ ಇಟ್ಟಿರುವೆನು; ಆತನನ್ನು ನಂಬುವವನು ಎಂದಿಗೂ ಆಶಾಭಂಗಪಡುವುದಿಲ್ಲ”


ಪವಿತ್ರ ಗ್ರಂಥವನ್ನು ದೇವರು ದಯಪಾಲಿಸಿದನು. ಉಪದೇಶವನ್ನು ಮಾಡುವುದಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಬೋಧೆಗೂ ಅದು ಉಪಯುಕ್ತವಾಗಿದೆ.


“ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.”


ಹೀಗಿರಲು ಒಬ್ಬನು ತನ್ನ ಕ್ರಿಯೆಗಳಿಂದ ನೀತಿವಂತನಾಗುತ್ತಾನೆ ಎಂಬುದು ಸ್ಪಷ್ಟವಾಗಿದೆ. ಒಬ್ಬನು ಕೇವಲ ನಂಬಿಕೆಯೊಂದರಿಂದಲೇ ನೀತಿವಂತನಾಗಲು ಸಾಧ್ಯವಿಲ್ಲ.


ನಾತಾನನ ಮಗನಾದ ಅಜರ್ಯ; ಅಜರ್ಯನು ಜಿಲ್ಲಾ ಅಧಿಕಾರಿಗಳ ಮೇಲ್ವಿಚಾರಕನಾಗಿದ್ದನು. ನಾತಾನನ ಮಗನಾದ ಚಾಬೂದ; ಚಾಬೂದನು ರಾಜನಾದ ಸೊಲೊಮೋನನಿಗೆ ಯಾಜಕನೂ ಸಲಹೆಗಾರನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು