Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:25 - ಪರಿಶುದ್ದ ಬೈಬಲ್‌

25 ರಹಾಬಳು ಮತ್ತೊಬ್ಬ ಉದಾಹರಣೆಯಾಗಿದ್ದಾಳೆ. ಆಕೆ ಒಬ್ಬ ವೇಶ್ಯೆ. ಆದರೆ ಅವಳು ತನ್ನ ಕ್ರಿಯೆಗಳಿಂದಲೇ ನೀತಿವಂತಳಾದಳು. ಅವಳು ದೇವರ ಜನರಿಗೋಸ್ಕರ ಗೂಢಚಾರರನ್ನು ತನ್ನ ಮನೆಗೆ ಬರಮಾಡಿಕೊಂಡು, ಬೇರೊಂದು ರಸ್ತೆಯಲ್ಲಿ ತಪ್ಪಿಸಿಕೊಂಡು ಹೋಗಲು ಅವರಿಗೆ ಸಹಾಯ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದೇ ರೀತಿಯಾಗಿ ವೇಶ್ಯೆಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇದೇ ರೀತಿಯಾಗಿ ರಹಾಬಳೆಂಬ ಜಾರಿಣಿ ಗೂಢಚಾರರನ್ನು ತನ್ನ ಮನೆಗೆ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಸಾಗಕಳುಹಿಸಿದಳು. ಈ ಸತ್ಕ್ರಿಯೆಯಿಂದಲೇ ದೇವರೊಡನೆ ನೀತಿಯುತ ಸಂಬಂಧವನ್ನು ಪಡೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದೇ ರೀತಿಯಾಗಿ ಸೂಳೆಯಾದ ರಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿವಂತಳೆಂಬ ನಿರ್ಣಯವನ್ನು ಹೊಂದಿದಳಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದೇ ರೀತಿಯಾಗಿ ರಹಾಬಳೆಂಬ ವೇಶ್ಯೆಯು ಸಹ ಗೂಢಚಾರರನ್ನು ಸೇರಿಸಿಕೊಂಡು, ಅವರನ್ನು ಬೇರೆ ದಾರಿಯಿಂದ ಕಳುಹಿಸಿದ ಕ್ರಿಯೆಗಳಿಂದಲೇ ಆಕೆಯು ನೀತಿನಿರ್ಣಯವನ್ನು ಹೊಂದಿದಳಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆಚ್ ವೆಭಿಚಾರ್ ಕರ್ತಲ್ಯಾ ರಾಹಾಬ್ ಮನ್ತಲ್ಯಾ ಬಾಯ್ಕೊಮನ್ಸಿಕ್ ತಿಚ್ಯಾ ಕಾಮಾಂಚ್ಯಾ ವೈನಾ ನಿತಿವಂತ್ ಮನುನ್ ಎಚುನ್ ಹೊಲೆ ನ್ಹಯ್? ತಿನಿ ಖಬರ್ ದಿತಲ್ಯಾಕ್ನಿ ಸ್ವಾಗತ್ ಕರ್ಲಿನ್ ಅನಿ ಎಕ್ ದುಸ್ರ್ಯಾಚ್ ವಾಟೆನ್ ತೆಂಕಾ ಧಾಡುನ್ ದಿಲಿನ್, ಅಶೆ ತಿಚ್ಯಾ ಹ್ಯಾ ಕಾಮಾಂಚ್ಯಾ ವೈನಾ ತಿಕಾ ನಿತಿವಂತ್ ಮನುನ್ ಎಚುನ್ ಕಾಡುನ್ ಹೊಲೆ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:25
15 ತಿಳಿವುಗಳ ಹೋಲಿಕೆ  

ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ.


ರಾಹಾಬಳ ಮನೆಯನ್ನು ಊರಗೋಡೆಗೆ ಸೇರಿಸಿ ಕಟ್ಟಲಾಗಿತ್ತು, ಆದ್ದರಿಂದ ಅವರನ್ನು ಒಂದು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿದಳು.


ರಾಹಾಬಳು ಈ ಇಬ್ಬರನ್ನು ಅಡಗಿಸಿಟ್ಟಿದ್ದಳು. ಆದರೆ ಆಕೆಯು ಕೇಳಬಂದವರಿಗೆ, “ಇಬ್ಬರು ಮನುಷ್ಯರು ಇಲ್ಲಿಗೆ ಬಂದಿದ್ದರು, ಆದರೆ ಅವರು ಎಲ್ಲಿಂದ ಬಂದಿದ್ದರೆಂಬುದು ನನಗೆ ಗೊತ್ತಿರಲಿಲ್ಲ.


ಈ ನಗರ ಮತ್ತು ಇದರಲ್ಲಿರುವದೆಲ್ಲವೂ ಯೆಹೋವನ ಸ್ವತ್ತಾಗಿದೆ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಮನೆಯಲ್ಲಿರುವ ಎಲ್ಲ ಜನರು ಮಾತ್ರ ಜೀವಸಹಿತ ಉಳಿಯಲಿ, ಅವರನ್ನು ಕೊಲ್ಲಬಾರದು. ಏಕೆಂದರೆ ರಾಹಾಬಳು ನಮ್ಮ ಆ ಇಬ್ಬರು ಗೂಢಚಾರರಿಗೆ ಸಹಾಯ ಮಾಡಿದ್ದಾಳೆ.


ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”


“ಈ ಇಬ್ಬರು ಗಂಡುಮಕ್ಕಳಲ್ಲಿ ತಂದೆಗೆ ಯಾರು ವಿಧೇಯರಾದರು?” ಆಗ ಯೆಹೂದ್ಯ ನಾಯಕರು, “ಮೊದಲನೆಯ ಮಗ” ಎಂದು ಉತ್ತರಕೊಟ್ಟರು. ಯೇಸು ಅವರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸುಂಕವಸೂಲಿಗಾರರನ್ನು ಮತ್ತು ವೇಶ್ಯೆಯರನ್ನು ಕೆಟ್ಟಜನರೆಂದು ನೀವು ಅಂದುಕೊಂಡಿದ್ದೀರಿ. ಆದರೆ ಅವರು ನಿಮಗಿಂತ ಮುಂಚೆಯೇ ದೇವರ ರಾಜ್ಯಕ್ಕೆ ಪ್ರವೇಶಿಸುತ್ತಾರೆ.


ಸಲ್ಮೋನನು ಬೋವಜನ ತಂದೆ. (ಬೋವಜನ ತಾಯಿ ರಹಾಬಳು.) ಬೋವಜನು ಓಬೇದನ ತಂದೆ. (ಓಬೇದನ ತಾಯಿ ರೂತಳು.) ಓಬೇದನು ಇಷಯನ ತಂದೆ.


ಆದ್ದರಿಂದ ಅವನ ನಂಬಿಕೆ ಮತ್ತು ಅವನ ಕ್ರಿಯೆ ಒಟ್ಟಿಗೆ ಕಾರ್ಯ ಮಾಡಿದವು. ಅವನ ನಂಬಿಕೆಯು ಅವನ ಕ್ರಿಯೆಗಳಿಂದಲೇ ಪರಿಪೂರ್ಣಗೊಂಡಿತು.


ಆದರೆ ಯಾವನಾದರೂ, “ನಿನ್ನಲ್ಲಿ ನಂಬಿಕೆಯಿದೆ; ನನ್ನಲಿ ಕ್ರಿಯೆಗಳಿವೆ” ಎಂದು ವಾದಿಸಬಹುದು. ಅದಕ್ಕೆ ನನ್ನ ಉತ್ತರವೇನೆಂದರೆ ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ತೋರಿಸಲಾರೆ. ನಾನಾದರೊ ನನ್ನ ಒಳ್ಳೆಯ ಕಾರ್ಯಗಳ ಮೂಲಕ ನನ್ನ ನಂಬಿಕೆಯನ್ನು ನಿನಗೆ ತೋರಿಸುವೆ ಎಂದು ಹೇಳಬಹುದು.


ಆದರೆ ಅವಳು ನಿಜವಾಗಿ ಆ ಗೂಢಚಾರರನ್ನು ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಒಟ್ಟಿದ ಹುಲ್ಲಿನಲ್ಲಿ ಅವರನ್ನು ಅಡಗಿಸಿಟ್ಟಿದ್ದಳು.


ಆಕೆ ಅವರಿಗೆ, “ನೀವು ಪಶ್ಚಿಮದಿಕ್ಕಿನ ಕಡೆಗೆ ಹೋಗಿ ಬೆಟ್ಟಗಳಲ್ಲಿ ಅಡಗಿಕೊಳ್ಳಿರಿ; ಆಗ ರಾಜಭಟರು ನಿಮ್ಮನ್ನು ಕಂಡುಹಿಡಿಯಲಾರರು; ಅಲ್ಲಿ ಮೂರು ದಿನಗಳವರೆಗೆ ಅಡಗಿಕೊಂಡಿದ್ದು ರಾಜಭಟರು ಹಿಂದಿರುಗಿದ ಮೇಲೆ ನೀವು ನಿಮ್ಮ ಸ್ಥಳಕ್ಕೆ ಹೋಗಬಹುದು” ಎಂದು ಹೇಳಿದಳು.


ಯಾಸೋನನು ಇವರನ್ನು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದಾನೆ. ಇವರೆಲ್ಲರೂ ಸೀಸರನ ಕಾನೂನುಗಳನ್ನು ಉಲ್ಲಂಘಿಸುತ್ತಾರೆ ಮತ್ತು ‘ಯೇಸು’ ಎಂಬ ಮತ್ತೊಬ್ಬ ರಾಜನಿರುವನೆಂದು ಹೇಳುತ್ತಾರೆ” ಎಂದು ಕೂಗಿ ಹೇಳಿದರು.


ಹೀಗಿರಲು ಒಬ್ಬನು ತನ್ನ ಕ್ರಿಯೆಗಳಿಂದ ನೀತಿವಂತನಾಗುತ್ತಾನೆ ಎಂಬುದು ಸ್ಪಷ್ಟವಾಗಿದೆ. ಒಬ್ಬನು ಕೇವಲ ನಂಬಿಕೆಯೊಂದರಿಂದಲೇ ನೀತಿವಂತನಾಗಲು ಸಾಧ್ಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು