Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:9 - ಪರಿಶುದ್ದ ಬೈಬಲ್‌

9 ಆದರೆ ನೀವು ಒಬ್ಬನನ್ನು ಇನ್ನೊಬ್ಬನಿಗಿಂತ ಮುಖ್ಯನೆಂದು ಪರಿಗಣಿಸಿ ಪಕ್ಷಪಾತ ಮಾಡಿದರೆ ಪಾಪವನ್ನು ಮಾಡುವವರಾಗಿದ್ದೀರಿ. ದೇವರ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೋಷಿಗಳಾಗಿದ್ದೀರೆಂದು ಆ ರಾಜಾಜ್ಞೆಯು ನಿರೂಪಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದನ್ನು ಬಿಟ್ಟು ಪಕ್ಷಪಾತ ಮಾಡಿದರೆ ನೀವು ಪಾಪಮಾಡುತ್ತೀರಿ ಮತ್ತು ಧರ್ಮಶಾಸ್ತ್ರ ನಿಮ್ಮನ್ನು ಅಪರಾಧಿಗಳೆಂದು ನಿರ್ಣಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದನ್ನು ಬಿಟ್ಟು ಪಕ್ಷಪಾತ ತೋರಿಸುವವರಾಗಿದ್ದರೆ ನೀವು ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದಿಂದ ತೀರ್ಮಾನಿಸಲ್ಪಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದೀರಿ. ಮಾತ್ರವಲ್ಲದೆ ಮೋಶೆಯ ನಿಯಮದ ಪ್ರಕಾರ ಅಪರಾಧಿಗಳೆಂದು ನಿರ್ಣಯ ಹೊಂದುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ತುಮಿ ಭೆದ್-ಭಾವ್ ಕರ್ತ್ಯಾಸಿ ಹೊಲ್ಯಾರ್, ಪಾಪ್ ಕರ್ತ್ಯಾಸಿ ಅನಿ ಖಾಯ್ದ್ಯೊ ಮೊಡಲ್ಲ್ಯಾಂಚ್ಯಾ ಸಾರ್ಕೆ ಹೊವ್ನ್ ಚುಕಿದಾರ್ ಮನುನ್ ಘೆತ್ಯಾಶಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:9
13 ತಿಳಿವುಗಳ ಹೋಲಿಕೆ  

“ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲಿ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲಿ ಗಮನಿಸದೆ ಪಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ.


ಯೇಸುವಿನ ಈ ಮಾತನ್ನು ಕೇಳಿದ ಆ ಜನರು ಒಬ್ಬೊಬ್ಬರಾಗಿ ಅಲ್ಲಿಂದ ಹೊರಟುಹೋದರು. ಮೊದಲು ಹಿರಿಯರು, ನಂತರ ಇತರರು ಹೊರಟುಹೋದರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ಆ ಸ್ತ್ರೀ. ಆಕೆಯು ಆತನ ಮುಂದೆ ನಿಂತುಕೊಂಡಿದ್ದಳು.


ಪಾಪ ಮಾಡುವವನು ದೇವರ ಕಟ್ಟಳೆಗಳನ್ನು ಉಲ್ಲಂಘಿಸುವವನಾಗಿದ್ದಾನೆ. ಹೌದು, ಪಾಪಮಾಡುವುದಕ್ಕೂ ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ಜೀವಿಸುವುದಕ್ಕೂ ಯಾವ ವ್ಯತ್ಯಾಸವಿಲ್ಲ.


ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.


“ಸಹಾಯಕನು ಬಂದು ಪಾಪ, ನೀತಿ, ನ್ಯಾಯತೀರ್ಪು ಈ ವಿಷಯಗಳ ಬಗ್ಗೆ ಲೋಕಕ್ಕೆ ತಿಳಿಸಿಕೊಡುವನು.


ನನ್ನಲ್ಲಿ ಪಾಪವನ್ನು ತೋರಿಸಿಕೊಡುವವನು ನಿಮ್ಮಲ್ಲಿ ಯಾವನಾದರೂ ಇರುವನೇ? ನಾನು ಸತ್ಯವನ್ನು ಹೇಳಿದರೂ ನೀವೇಕೆ ನಂಬುವುದಿಲ್ಲ?


ಪ್ರಭುವು ಪ್ರತಿಯೊಬ್ಬರಿಗೂ ನ್ಯಾಯತೀರಿಸುತ್ತಾನೆ. ಭಕ್ತಿಹೀನರು ತನಗೆ ವಿರುದ್ಧವಾಗಿ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತನಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಆತನು ಬರುತ್ತಾನೆ.”


ನಾನು ಧರ್ಮಶಾಸ್ತ್ರಕ್ಕಾಗಿ ಜೀವಿಸುವುದನ್ನು ತೊರೆದುಬಿಟ್ಟೆನು. ನನ್ನನ್ನು ಧರ್ಮಶಾಸ್ತ್ರವೇ ಕೊಂದಿತು. ಈಗ ನಾನು ದೇವರಿಗಾಗಿ ಜೀವಿಸಬೇಕೆಂದು ಧರ್ಮಶಾಸ್ತ್ರದ ಪಾಲಿಗೆ ಸತ್ತುಹೋದೆನು. ನಾನು ಕ್ರಿಸ್ತನೊಂದಿಗೆ ಶಿಲುಬೆಗೇರಿಸಲ್ಪಟ್ಟೆನು.


ಒಂದುವೇಳೆ ನೀವೆಲ್ಲರೂ ಪ್ರವಾದನೆ ಮಾಡುತ್ತಿರುವಾಗ, ತಿಳುವಳಿಕೆಯಿಲ್ಲದ ಅಥವಾ ನಂಬಿಕೆಯಿಲ್ಲದ ವ್ಯಕ್ತಿಯು ಒಳಗೆ ಬಂದರೆ, ನಿಮ್ಮ ಪ್ರವಾದನೆಗಳು ಆ ವ್ಯಕ್ತಿಗೆ ಅವನ ಪಾಪವನ್ನು ತೋರಿಸಿಕೊಡುತ್ತವೆ ಮತ್ತು ನೀವು ಹೇಳುವ ವಿಷಯಗಳ ಆಧಾರದ ಮೇಲೆ ಅವನಿಗೆ ತೀರ್ಪಾಗುವುದು.


ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’


ಪೇತ್ರನು ಮಾತಾಡಲಾರಂಭಿಸಿ ಹೀಗೆಂದನು: “ದೇವರಿಗೆ ಎಲ್ಲರೂ ಒಂದೇ ಎಂಬುದು ನನಗೆ ಈಗ ಅರ್ಥವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು