Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:14 - ಪರಿಶುದ್ದ ಬೈಬಲ್‌

14 ನೀವು ಸ್ವಾರ್ಥಿಗಳೂ ತೀಕ್ಷ್ಣವಾದ ಮತ್ಸರವನ್ನು ಹೃದಯದಲ್ಲಿ ಹೊಂದಿರುವವರೂ ಆಗಿದ್ದರೆ, ನೀವು ಕೊಚ್ಚಿಕೊಳ್ಳುವುದರಲ್ಲಿ ಅರ್ಥವೇ ಇಲ್ಲ. ಏಕೆಂದರೆ ಅದು ಕೇವಲ ಸುಳ್ಳಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ತೀಕ್ಷ್ಣವಾದ ಮತ್ಸರವೂ ಪಕ್ಷಭೇದವೂ ನಿಮ್ಮ ಹೃದಯದೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ಹೃದಯದೊಳಗೆ ಕಹಿಯಾದ ಹಗೆತನವನ್ನೂ ಸ್ವಾರ್ಥ ಉದ್ದೇಶವನ್ನು ಕೂಡಿಟ್ಟು ಕೊಂಡಿರುವಲ್ಲಿ, ನೀವು ಜ್ಞಾನದ ಕುರಿತು ಹೊಗಳಿಕೊಳ್ಳಬೇಡಿರಿ ಮತ್ತು ಸತ್ಯವನ್ನು ನಿರಾಕರಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ತುಮ್ಚ್ಯಾ ಮನಾತ್ನಿ ತುಮಿ ಬುರ್ಶಿ ಇರ್ಸ್ಯಾ, ಕುಸ್ಡೆಪಾನ್, ಸ್ವಾರ್ಥ್ ರಾಲ್ಯಾರ್, ತುಮ್ಚ್ಯಾ ಬುದ್ವಂತ್ಕಿಚ್ಯಾ ಮೊಟೆ ಪಾನಾಚ್ಯಾ ವಿಶಯಾತ್ ಬೊಲುನ್ ಖರ್ಯಾಚ್ಯಾ ವಿಶಯಾತ್ ಪಾಪ್ ಕರುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:14
42 ತಿಳಿವುಗಳ ಹೋಲಿಕೆ  

ಹೊಟ್ಟೆಕಿಚ್ಚು ಮತ್ತು ಸ್ವಾರ್ಥತೆಗಳು ಎಲ್ಲಿರುವವೋ ಅಲ್ಲಿ ಗಲಿಬಿಲಿಯೂ ಎಲ್ಲಾ ಬಗೆಯ ನೀಚತನಗಳೂ ಇರುತ್ತವೆ.


ಪ್ರೀತಿಯು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಅಸೂಯೆಪಡುವುದಿಲ್ಲ; ಹೊಗಳಿಕೊಳ್ಳುವುದಿಲ್ಲ; ಗರ್ವಪಡುವುದಿಲ್ಲ.


ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.


ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ.


ಹಗಲಿಗೆ ಸೇರಿದ ಜನರಂತೆ ಸರಿಯಾದ ರೀತಿಯಲ್ಲಿ ಜೀವಿಸೋಣ. ಕೆಟ್ಟದಾದ ಮತ್ತು ವ್ಯರ್ಥವಾದ ಔತಣಕೂಟಗಳನ್ನು ನಾವು ಏರ್ಪಡಿಸಕೂಡದು; ಕುಡಿದು ಮತ್ತರಾಗಕೂಡದು; ನಾವು ಲೈಂಗಿಕ ಪಾಪವನ್ನಾಗಲಿ ನಮ್ಮ ದೇಹದಿಂದ ಯಾವುದೇ ಬಗೆಯ ಪಾಪವನ್ನಾಗಲಿ ಮಾಡಕೂಡದು; ವಾಗ್ವಾದಗಳನ್ನಾಗಲಿ ಜಗಳಗಳನ್ನಾಗಲಿ ಎಬ್ಬಿಸಬಾರದು; ಅಲ್ಲದೆ ಹೊಟ್ಟೆಕಿಚ್ಚುಪಡಬಾರದು.


ಕಾರಣವೇನೆಂದರೆ, ನಾನು ಬಂದಾಗ ನನ್ನ ಅಪೇಕ್ಷೆಗೆ ತಕ್ಕಂತೆ ನೀವು ಇರುವುದಿಲ್ಲವೆಂಬ ಭಯ ನನಗಿದೆ. ನಿಮ್ಮ ಸಭೆಯಲ್ಲಿ ವಾದ, ಹೊಟ್ಟೆಕಿಚ್ಚು, ಕೋಪ, ಸ್ವಾರ್ಥಪರವಾದ ಹೋರಾಟ, ಕೆಟ್ಟಮಾತು, ಸುಳ್ಳುಸುದ್ದಿ, ಗರ್ವ ಮತ್ತು ಗಲಿಬಿಲಿ ಇರಬಹುದೆಂಬ ಭಯ ನನಗಿದೆ.


ಕೆಲವರು ತಮ್ಮಲ್ಲಿರುವ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಇನ್ನು ಕೆಲವರು ಸಹಾಯ ಮಾಡಬೇಕೆಂಬ ಉದ್ದೇಶದಿಂದಲೂ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ.


ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಬ್ಬನು ಸತ್ಯದಿಂದ ದೂರವಾಗಿ ಅಲೆದಾಡುತ್ತಿದ್ದರೆ, ಮತ್ತೊಬ್ಬನು ಅವನಿಗೆ ಸಹಾಯಮಾಡಿ ಅವನನ್ನು ಸತ್ಯಕ್ಕೆ ನಡೆಸಬೇಕು.


ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರೆಲ್ಲರೂ (ಸದ್ದುಕಾಯರು) ಬಹು ಅಸೂಯೆಗೊಂಡರು.


ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.


ಆದರೆ ನೀವು ನಿಮ್ಮ ವಿಷಯದಲ್ಲಿ ಇನ್ನೂ ಹೆಚ್ಚಳಪಡುತ್ತಿದ್ದೀರಿ. ನೀವು ದುಃಖಭರಿತರಾಗಿರಬೇಕಿತ್ತು. ಆ ಪಾಪ ಮಾಡಿದ ವ್ಯಕ್ತಿಯನ್ನು ನಿಮ್ಮ ಸಭೆಯಿಂದ ಹೊರಗೆ ಹಾಕಬೇಕಿತ್ತು.


ಆದರೆ ಉಳಿದ ಜನರು ಸ್ವಾರ್ಥಿಗಳಾಗಿದ್ದು, ಸತ್ಯವನ್ನು ಅನುಸರಿಸದೆ ದುಷ್ಟತ್ವವನ್ನು ಅನುಸರಿಸುವವರಾಗಿದ್ದಾರೆ. ಅವರ ಮೇಲೆ ದೇವರ ದಂಡನೆಯೂ ಕೋಪವೂ ಬರುತ್ತದೆ.


ಕೋಪವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ.


ಮನಶ್ಯಾಂತಿಯುಳ್ಳವನ ದೇಹವು ಆರೋಗ್ಯದಿಂದಿರುವುದು. ಹೊಟ್ಟೆಕಿಚ್ಚು ದೇಹಕ್ಕೆ ಕಾಯಿಲೆಯನ್ನು ಬರಮಾಡುವುದು.


ಆದರೆ ಯೇಹು ಇಸ್ರೇಲಿನ ದೇವರಾದ ಯೆಹೋವನ ನಿಯಮಗಳನ್ನು ಪೂರ್ಣಮನಸ್ಸಿನಿಂದಲೂ ಎಚ್ಚರಿಕೆಯಿಂದಲೂ ಪಾಲಿಸಲಿಲ್ಲ. ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ಮಾಡುವುದನ್ನು ನಿಲ್ಲಿಸಲೇ ಇಲ್ಲ.


ಸುನ್ನತಿ ಮಾಡಿಸಿಕೊಂಡಿರುವ ಅವರೇ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ಆದರೆ ನಿಮಗೂ ಸುನ್ನತಿ ಮಾಡಿಸಿ ಅದರ ಬಗ್ಗೆ ಹೆಚ್ಚಳಪಡಬೇಕೆಂಬುದೇ ಅವರ ಆಸೆ.


ನಾವು ಅಹಂಕಾರಿಗಳಾಗಬಾರದು, ಒಬ್ಬರನ್ನೊಬ್ಬರು ಕೆಣಕುವವರಾಗಬಾರದು, ಒಬ್ಬರಮೇಲೊಬ್ಬರು ಮತ್ಸರ ಉಳ್ಳವರಾಗಬಾರದು.


ಮತ್ಸರ, ಕುಡಿಕತನ ಮತ್ತು ಸ್ವೇಚ್ಫಾಚಾರದ ಕೂಟ, ಮೊದಲಾದವುಗಳೇ. ನಾನು ನಿಮ್ಮನ್ನು ಮೊದಲು ಎಚ್ಚರಿಸಿದಂತೆ ಈಗಲೂ ಎಚ್ಚರಿಸುತ್ತೇನೆ. ಇಂಥವುಗಳನ್ನು ಮಾಡುವ ಜನರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.


ನೀವು ಒಬ್ಬರನ್ನೊಬ್ಬರು ಕಚ್ಚಿ ಹರಿದುಹಾಕಿ ನುಂಗುವುದಾದರೆ ಒಬ್ಬರಿಂದೊಬ್ಬರು ನಾಶವಾಗುತ್ತೀರಿ. ಆದ್ದರಿಂದ ಎಚ್ಚರಿಕೆಯಿಂದಿರಿ!


ನೀವು ಅಹಂಕಾರಪಡುವುದು ಒಳ್ಳೆಯದಲ್ಲ. “ಒಂದಿಷ್ಟು ಹುಳಿಯು ಹಿಟ್ಟನ್ನೆಲ್ಲಾ ಉಬ್ಬಿಸುತ್ತದೆ” ಎಂಬ ನುಡಿಯು ನಿಮಗೆ ಗೊತ್ತೇ ಇದೆ.


“ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರದಲ್ಲಿ ನಂಬಿಕೆಯಿಟ್ಟು ದೇವರಿಗೆ ಸಮೀಪವಾಗಿರುವುದಾಗಿ ನೀನು ಹೆಮ್ಮೆಪಡುವೆ.


ಅವರಲ್ಲಿ ಪ್ರತಿಯೊಂದು ಬಗೆಯ ಪಾಪ, ದುಷ್ಟತನ, ಸ್ವಾರ್ಥ, ದ್ವೇಷ, ಹೊಟ್ಟೆಕಿಚ್ಚು, ಕೊಲೆ, ಹೊಡೆದಾಟ, ಸುಳ್ಳುನುಡಿ ಮತ್ತು ಕೆಟ್ಟ ಆಲೋಚನೆ ಇವುಗಳೆಲ್ಲಾ ತುಂಬಿಕೊಂಡಿವೆ. ಅವರು ಹರಟೆ ಹೊಡೆಯುತ್ತಾರೆ;


“ನಾನು ಫರಿಸಾಯನಾಗಿದ್ದಾಗ ನಜರೇತಿನ ಯೇಸುವಿನ ಹೆಸರಿಗೆ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಬೇಕೆಂದು ಆಲೋಚಿಸಿಕೊಂಡೆನು.


ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.


ಜನರು ನಿಮ್ಮನ್ನು ತಮ್ಮ ಸಭಾಮಂದಿರಗಳಿಂದ ಬಹಿಷ್ಕರಿಸುವರು. ಹೌದು, ನಿಮ್ಮನ್ನು ಕೊಂದರೆ ದೇವರ ಸೇವೆ ಮಾಡಿದಂತಾಗುವುದು ಎಂದು ಜನರು ಯೋಚಿಸುವ ಕಾಲ ಬರಲಿದೆ.


ಜನರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ಗೊತ್ತಿತ್ತು.


ಜನರು ವಸ್ತುಗಳನ್ನು ಕದ್ದುಕೊಂಡು ಇತರರನ್ನು ಗಾಯಗೊಳಿಸುತ್ತಿದ್ದಾರೆ. ಜನರು ಜಗಳ ಮಾಡುತ್ತಾ ಕಾದಾಡುತ್ತಿದ್ದಾರೆ. ಇಂಥಾ ಭಯಂಕರ ಸಂಗತಿಗಳನ್ನು ನೋಡುವಂತೆ ಯಾಕೆ ಮಾಡುವೆ.


ಆ ಸಮಯದಲ್ಲಿ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದಕ್ಕೆ ವೈರಿಗಳಿರುವದಿಲ್ಲ ಮತ್ತು ಎಫ್ರಾಯೀಮನಿಗೆ ಯೆಹೂದವು ತೊಂದರೆಯನ್ನು ಮಾಡುವದಿಲ್ಲ.


ಮೂಢನ ಕೋಪವು ಅವನನ್ನೇ ಕೊಲ್ಲುವುದು. ಮೂರ್ಖನ ಹೊಟ್ಟೆಕಿಚ್ಚು ಅವನನ್ನೇ ಕೊಲ್ಲುವುದು.


ಯೇಹು, “ನನ್ನ ಸಂಗಡ ಬಾ. ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೀನು ನೋಡುವಿಯಂತೆ” ಎಂದು ಹೇಳಿದನು. ಯೇಹುವಿನ ರಥದಲ್ಲಿ ಯೆಹೋನಾದಾಬನೂ ಹೋದನು.


ಯೋಸೇಫನ ಅಣ್ಣಂದಿರಿಗೆ ಅವನ ಮೇಲೆ ಹೊಟ್ಟೆಕಿಚ್ಚು ಹೆಚ್ಚಾಯಿತು. ಆದರೆ ಯೋಸೇಫನ ತಂದೆಯು ಆ ಕನಸುಗಳ ಬಗ್ಗೆ ಆಶ್ಚರ್ಯಚಕಿತನಾಗಿ ಆಲೋಚಿಸತೊಡಗಿದನು.


“ಈ ಪಿತೃಗಳು ಯೋಸೇಫನ (ಅವರು ತಮ್ಮ) ಮೇಲೆ ಹೊಟ್ಟೆಕಿಚ್ಚುಪಟ್ಟರು. ಅವರು ಯೋಸೇಫನನ್ನು ಈಜಿಪ್ಟಿನ ಜನರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಯೋಸೇಫನೊಂದಿಗೆ ಇದ್ದನು.


ಸುಳ್ಳುದೇವರುಗಳ ಆರಾಧನೆ, ಮಾಟಮಂತ್ರ, ದ್ವೇಷ, ಜಗಳ, ಹೊಟ್ಟೆಕಿಚ್ಚು, ಕಡುಕೋಪ, ಸ್ವಾರ್ಥ, ಸಿಟ್ಟು, ಕಕ್ಷಭೇದ,


ಎಲ್ಲಾ ಜನರು ರಕ್ಷಿಸಲ್ಪಡಬೇಕೆಂದು, ಸತ್ಯವನ್ನು ತಿಳಿದು ಕೊಳ್ಳಬೇಕೆಂದು ದೇವರು ಬಯಸುತ್ತಾನೆ.


ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮುಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ.


ತಾಮಾರಳಲ್ಲಿ ತನಗೆ ಹುಟ್ಟುವ ಮಕ್ಕಳು ತನ್ನವರಾಗುವುದಿಲ್ಲವೆಂದು ಅರಿತುಕೊಂಡು ಓನಾನನು ಆಕೆಯನ್ನು ಕೂಡಿದರೂ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು