ಯಾಕೋಬನು 3:17 - ಪರಿಶುದ್ದ ಬೈಬಲ್17 ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಖರೆ ವೈನಾ ಯೆಲ್ಲಿ ಬುದ್ವಂತ್ಕಿ; ಸಾದಿ, ಶಾಂತ್ಪಾನಾಚಿ, ಸೊಸುನ್ ಘೆತಲಿ, ನಾಜುಕ್ ಮನಾಚಿ, ದಯಾ ಅನಿ ಬರ್ಯಾ ಕಾಮಾಚ್ಯಾ ವರ್ತಿ ಠಿಕುನ್ ರಾತಲಿ, ತಿ ಭೆದ್ ಭಾವ್ ಕರಿನಾ ಅನಿ ಕುಸ್ಡೆಪಾನ್ ಕರಿನಾ. ಅಧ್ಯಾಯವನ್ನು ನೋಡಿ |
ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.
ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.