Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:2 - ಪರಿಶುದ್ದ ಬೈಬಲ್‌

2 ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್, ಅಮಿ ಸಗ್ಳಿ ಲೊಕಾ ಲೈಂದಾ ಚುಕುನ್ ಪಡ್ತಾವ್, ಬೊಲ್ನ್ಯಾತ್ ಸಮಾ ಹೊತ್ತೊ ಸಗ್ಳ್ಯಾ ಬರ್ಯಾ ಗುನಾನಿ ಭರುನ್ ರ್‍ಹಾತಾ ಅನಿ ಅಪ್ನಾಚ್ಯಾ ಅಂಗಾಕ್ ಹತೊಟಿತ್ ಥವ್ನ್ ಘೆತಲೊ ಬಳ್‌ಬಿ ತೆಕಾ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:2
29 ತಿಳಿವುಗಳ ಹೋಲಿಕೆ  

ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ “ಭಕ್ತಿ”ಗೆ ಬೆಲೆಯಿಲ್ಲ.


ಎಚ್ಚರಿಕೆಯಿಂದ ಮಾತಾಡುವವನು ತನ್ನ ಜೀವವನ್ನು ಕಾಪಾಡಿಕೊಳ್ಳುವನು. ಯೋಚಿಸದೆ ಮಾತಾಡುವವನು ನಾಶವಾಗುವನು.


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಈ ಜೀವಿತದಲ್ಲಿ ಸಂತೋಷಿಸುತ್ತಾ ಸುದಿನಗಳನ್ನು ನೋಡಲು ಅಪೇಕ್ಷಿಸುವವನು ಕೆಟ್ಟ ಮಾತುಗಳನ್ನಾಡದಿರಲಿ; ಸುಳ್ಳನ್ನು ನುಡಿಯದಿರಲಿ.


ನಿಮ್ಮ ಮಾತುಗಳಿಂದಲೇ ನಿಮಗೆ ನೀತಿವಂತರೆಂದಾಗಲಿ ಅಪರಾಧಿಗಳೆಂದಾಗಲಿ ತೀರ್ಪು ನೀಡಲಾಗುವುದು” ಎಂದನು.


ಹಾಗಾದರೆ ಕೆಟ್ಟದ್ದನ್ನು ಮಾತಾಡದಂತೆ ನಾಲಿಗೆಯನ್ನು ಕಾದುಕೊಳ್ಳಿರಿ. ಸುಳ್ಳಾಡದಂತೆ ತುಟಿಗಳನ್ನು ಇಟ್ಟುಕೊಳ್ಳಿರಿ.


ಯಾವನಾದರೂ, “ನನ್ನ ಹೃದಯವನ್ನು ಶುದ್ಧೀಕರಿಸಿರುವೆ. ನಾನು ಪಾಪರಹಿತನಾಗಿರುವೆ” ಎಂದು ಹೇಳಲು ಸಾಧ್ಯವೇ?


ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಪಾಪವಿಲ್ಲದ ಒಬ್ಬನೂ ಇಲ್ಲ. ಇಲ್ಲವೇ ಇಲ್ಲ!


ತಾಳ್ಮೆಯು ತನ್ನ ಕಾರ್ಯವನ್ನು ಪೂರೈಸಲಿ. ಆಗ ನೀವು ನಿಷ್ಕಳಂಕರೂ ಮತ್ತು ಪರಿಪೂರ್ಣರೂ ಆಗುವಿರಿ ಮತ್ತು ನಿಮಗೆ ಬೇಕಾದುದೆಲ್ಲವೂ ದೊರೆಯುವುದು.


“ನಿನ್ನ ಜನರು ನಿನ್ನ ವಿರುದ್ಧ ಪಾಪ ಮಾಡುತ್ತಾರೆ. ಪ್ರತಿಯೊಬ್ಬ ವ್ಯಕ್ತಿಯೂ ಪಾಪಮಾಡುತ್ತಾನೆಂಬುದು ನನಗೆ ತಿಳಿದಿದೆ. ನಿನ್ನ ಜನರ ಬಗ್ಗೆ ನೀನು ಕೋಪದಿಂದಿರುವೆ. ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಮಾಡುವೆ. ಅವರ ಶತ್ರುಗಳು ಅವರನ್ನು ಸೆರೆಯಾಳುಗಳನ್ನಾಗಿ ಕೆಲವು ದೂರದೇಶಗಳಿಗೆ ಸಾಗಿಸುವರು.


ಒಬ್ಬನು ದೇವರ ಎಲ್ಲಾ ಆಜ್ಞೆಗಳನ್ನು ಅನುಸರಿಸುತ್ತಿರಬಹುದು. ಆದರೆ ಅವನು ಒಂದು ಆಜ್ಞೆಗೆ ಅವಿಧೇಯನಾದರೆ ಅವನು ಧರ್ಮಶಾಸ್ತ್ರದ ಎಲ್ಲಾ ಆಜ್ಞೆಗಳನ್ನು ಮೀರಿದನೆಂಬ ಅಪರಾಧಕ್ಕೆ ಗುರಿಯಾಗುವನು.


ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. ನಮ್ಮ ಸುಕಾರ್ಯಗಳೆಲ್ಲಾ ಹಳೇ ಕೊಳಕು ಬಟ್ಟೆಯಂತಿವೆ. ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡುಹೋಗಿವೆ.


ನಾನು ಗುದ್ದುವುದು ನನ್ನ ಸ್ವಂತ ದೇಹವನ್ನೇ. ಇತರ ಜನರಿಗೆ ಬೋಧಿಸಿದ ಮೇಲೆ ಸ್ವತಃ ನಾನೇ ತಿರಸ್ಕೃತನಾಗದಂತೆ ಅದನ್ನು ನನ್ನ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.


ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ.


ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ.


ಆದರೆ ಇದು ಸತ್ಯವಲ್ಲ. ಏಕೆಂದರೆ ಸಮಸ್ತವೂ ಪಾಪಕ್ಕೆ ಒಳಗಾಗಿದೆ ಎಂದು ಪವಿತ್ರ ಗ್ರಂಥ ಪ್ರಕಟಿಸುತ್ತದೆ. ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವವರಿಗೆ ಅವರ ನಂಬಿಕೆಯ ಆಧಾರದ ಮೇಲೆ ವಾಗ್ದಾನದ ಫಲವು ದೊರೆಯಬೇಕೆಂದೇ ಪವಿತ್ರ ಗ್ರಂಥವು ಹೀಗೆ ಪ್ರಕಟಿಸಿದೆ.


ಹೀಗಿರಲಾಗಿ, ನಾನು ಈ ನಿಯಮವನ್ನು ಕಲಿತುಕೊಂಡಿದ್ದೇನೆ: ನಾನು ಒಳ್ಳೆಯದನ್ನು ಮಾಡಲಿಚ್ಛಿಸುವಾಗ, ಕೆಟ್ಟದ್ದು ನನ್ನೊಳಗೇ ಇರುತ್ತದೆ.


“ಜನರು ನಿನಗೆ ವಿರುದ್ಧವಾಗಿ ಪಾಪಮಾಡಬಹುದು; ಪಾಪಮಾಡದೆ ಇರುವವನು ಯಾವನೂ ಇಲ್ಲ. ಆಗ ನೀನು ಅವರ ಮೇಲೆ ಉರಿಗೊಂಡು ಅವರನ್ನು ಶಿಕ್ಷಿಸಲು ನೀನು ವೈರಿಗಳನ್ನು ಅವರ ಮೇಲೆ ಕಳುಹಿಸಿ ಅವರನ್ನು ಸೆರೆಹಿಡಿದು ದೂರದೇಶಕ್ಕೆ ಒಯ್ಯಲ್ಪಡುವಂತೆ ಮಾಡಿದಾಗ


ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.


ನಮ್ಮ ಶರೀರಭಾವವು ದೇವರಾತ್ಮನಿಗೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತದೆ. ದೇವರಾತ್ಮನು ನಮ್ಮ ಶರೀರಭಾವಕ್ಕೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತಾನೆ. ಆದ್ದರಿಂದ ನೀವು ನಿಜವಾಗಿಯೂ ಬಯಸುವಂಥವುಗಳನ್ನು ಮಾಡಲಾಗದಂತೆ ಅವು ಒಂದಕ್ಕೊಂದು ಹೋರಾಡುತ್ತವೆ.


“ನಾನು ಜಾಗರೂಕನಾಗಿ ಮಾತಾಡುವೆ. ನನ್ನ ನಾಲಿಗೆ ನನ್ನನ್ನು ಪಾಪಕ್ಕೆ ಸಿಕ್ಕಿಸದಂತೆ ನೋಡಿಕೊಳ್ಳುವೆ. ದುಷ್ಟರ ಮಧ್ಯದಲ್ಲಿ ಬಾಯಿಮುಚ್ಚಿಕೊಂಡಿರುವೆ” ಅಂದುಕೊಂಡೆನು.


ಅತಿಯಾಗಿ ಮಾತಾಡುವವನು ತನ್ನನ್ನೇ ತೊಂದರೆಗೆ ಸಿಕ್ಕಿಸಿಕೊಳ್ಳುತ್ತಾನೆ. ವಿವೇಕಿಯು ಮೌನವಾಗಿರಲು ಕಲಿತುಕೊಳ್ಳುತ್ತಾನೆ.


ಎಚ್ಚರಿಕೆಯಿಂದ ಮಾತಾಡುವವನು ತೊಂದರೆಯಿಂದ ಪಾರಾಗುವನು.


ನೀವು ಹಾವುಗಳು! ನೀವು ದುಷ್ಟರು! ಒಳ್ಳೆಯದನ್ನು ನೀವು ಹೇಗೆ ಹೇಳುವಿರಿ? ನಿಮ್ಮ ಹೃದಯದಲ್ಲಿ ತುಂಬಿರುವುದನ್ನೇ ನಿಮ್ಮ ಬಾಯಿ ಮಾತಾಡುತ್ತದೆ.


ಯಾಜಕನು ಆ ಕಲೆಗಳನ್ನು ಪರೀಕ್ಷಿಸಬೇಕು. ಆ ವ್ಯಕ್ತಿಯ ಚರ್ಮದ ಮೇಲಿರುವ ಕಲೆಗಳು ಬರೀ ಮೊಬ್ಬಾದ ಬಿಳೀ ಬಣ್ಣದವುಗಳಾಗಿದ್ದರೆ, ಆಗ ರೋಗವು ಕೇವಲ ಚರ್ಮದಲ್ಲಿ ಹುಟ್ಟಿದ ಚಿಬ್ಬಾಗಿದೆ. ಆ ವ್ಯಕ್ತಿಯು ಶುದ್ಧನಾಗಿದ್ದಾನೆ.


ನೀನು ದೇವರ ಮೇಲೆ ಕೋಪಗೊಂಡು ನಿನ್ನ ಬಾಯಿಂದ ಅಂತಹ ಮಾತುಗಳನ್ನು ಸುರಿಸುತ್ತಿರುವೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು