Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:6 - ಪರಿಶುದ್ದ ಬೈಬಲ್‌

6 ನಾಲಿಗೆಯು ಬೆಂಕಿಯ ಕಿಡಿಯಂತೆ ನಮ್ಮ ದೇಹದ ಭಾಗಗಳಲ್ಲಿ ಅದು ಕೆಟ್ಟ ಲೋಕದಂತಿದೆ. ಹೇಗೆಂದರೆ, ನಾಲಿಗೆಯು ನಮ್ಮ ದೇಹದಲ್ಲೆಲ್ಲಾ ಕೆಟ್ಟತನವನ್ನು ಹರಡುತ್ತದೆ. ನಮ್ಮ ಜೀವಿತದ ಮೇಲೆಲ್ಲಾ ಪ್ರಭಾವ ಬೀರುವ ಬೆಂಕಿಯನ್ನು ಅದು ನರಕದಿಂದ ಪಡೆದು ಹೊತ್ತಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಎಷ್ಟು ಕೊಂಚ ಕಿಚ್ಚು ಎಷ್ಟು ದೊಡ್ಡ ಕಾಡನ್ನು ಉರಿಸುತ್ತದೆ ನೋಡಿರಿ. ನಾಲಿಗೆಯೂ ಕಿಚ್ಚೇ. ನಾಲಿಗೆಯು ಅಧರ್ಮಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಟ್ಟದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕದಿಂದ ಬೆಂಕಿಹತ್ತಿಸಿಕೊಳ್ಳುತ್ತಾ ಪ್ರಪಂಚವೆಂಬ ಚಕ್ರಕ್ಕೆ ಬೆಂಕಿಹಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತಸೆಚ್ ಜಿಬಿಲ್‌ಬಿ ಆಗ್ ಹೊವ್ನ್ ಹಾಯ್, ಜಿಬಿಲ್ ಎಕ್ ಬರ್‍ಯಾ ವಾಟೆನ್ ಚಲಿನಸಲ್ಲ್ಯಾ ಜಗಾಚ್ಯಾ ಸಾರ್ಕೆ ಅಮ್ಚ್ಯಾ ಆಂಗಾಚ್ಯಾ ಮದ್ದಿ ಥವಲ್ಲಿ ಹಾಯ್, ತಿ ಸಗ್ಳ್ಯಾ ಆಂಗಾಕುಚ್ ಹಾಳ್ ಘಾಲ್ತಾ ಅನಿ ನರಕ್ ಮನ್ತಲ್ಯಾ ಆಗಿತ್ ಅಪ್ನಿಚ್ ಪೆಟುನ್ಗೆತ್ ಸಗ್ಳ್ಯಾ ಜಿವನಾಕ್ ಆಗ್ ಲಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:6
62 ತಿಳಿವುಗಳ ಹೋಲಿಕೆ  

ನೀಚನು ಕೆಟ್ಟಕಾರ್ಯಗಳನ್ನು ಆಲೋಚಿಸಿಕೊಳ್ಳುವನು. ಅವನ ಮಾತುಗಳು ಬೆಂಕಿಯಂತೆ ನಾಶಕರ.


ಒಬ್ಬ ವ್ಯಕ್ತಿಯ ಅಂತರಂಗದೊಳಕ್ಕೆ ಹೋಗಿ ಅವನನ್ನು ಅಶುದ್ಧನನ್ನಾಗಿ ಮಾಡುವಂಥದ್ದು ಯಾವುದೂ ಇಲ್ಲ. ಒಬ್ಬ ವ್ಯಕ್ತಿಯ ಒಳಗಿಂದ ಬಂದ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ” ಎಂದು ಹೇಳಿದನು.


ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು.


‘ತಂದೆಯಾದ ಅಬ್ರಹಾಮನೇ, ನನ್ನ ಮೇಲೆ ಕರುಣೆತೋರು! ಲಾಜರನನ್ನು ನನ್ನ ಬಳಿಗೆ ಕಳುಹಿಸು. ಅವನು ತನ್ನ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ನಾನು ಈ ಬೆಂಕಿಯಲ್ಲಿ ಯಾತನೆಪಡುತ್ತಿದ್ದೇನೆ!’ ಎಂದು ಬೇಡಿಕೊಂಡನು.


ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಸಹೋದರರಲ್ಲಿ ಜಗಳ ಬಿತ್ತುವ ವ್ಯಕ್ತಿ.


ಅವರ ನಾಲಿಗೆಗಳು ಸರ್ಪಗಳಂತಿವೆ. ಅವರ ನಾಲಿಗೆಯ ಕೆಳಗೆ ಹಾವಿನ ವಿಷವಿದೆ.


ಅವರು ನನ್ನ ಬಗ್ಗೆ ಕಡುಸುಳ್ಳುಗಳನ್ನು ಹೇಳಿದ್ದಾರೆ. ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ. ಅವರ ಮಾತುಗಳು ವಿಷಬಾಣಗಳಂತಿವೆ.


ನಾನು ಬಂದಾಗ, ದಿಯೊತ್ರೇಫನು ಮಾಡುತ್ತಿರುವುದರ ಬಗ್ಗೆ ತಿಳಿಸುತ್ತೇನೆ. ಅವನು ನಮ್ಮನ್ನು ಕುರಿತು ಸುಳ್ಳನ್ನೂ ಕೆಟ್ಟ ಸಂಗತಿಗಳನ್ನೂ ಹೇಳುತ್ತಾನೆ. ಆದರೆ ಅಷ್ಟೇ ಅಲ್ಲ! ಕ್ರಿಸ್ತನ ಸೇವೆಮಾಡುತ್ತಿರುವ ಆ ಸಹೋದರರಿಗೆ ಸಹಾಯಮಾಡಲು ಅವನು ಒಪ್ಪುವುದಿಲ್ಲ. ಅಲ್ಲದೆ ಆ ಸಹೋದರರಿಗೆ ಸಹಾಯ ಮಾಡಲಿಚ್ಛಿಸುವ ಜನರನ್ನೂ ಅವನು ತಡೆಯುತ್ತಾನೆ. ಆ ಜನರು ಸಭೆಯನ್ನು ಬಿಟ್ಟುಹೋಗುವಂತೆ ಅವನು ಮಾಡುತ್ತಾನೆ.


ನಿಮ್ಮನ್ನು ತನ್ನವರನ್ನಾಗಿ ಮಾಡಿಕೊಂಡಿರುವ ಯೇಸುವಿನ ಶ್ರೇಷ್ಠವಾದ ಹೆಸರಿಗೆ ವಿರುದ್ಧವಾಗಿ ಕೆಟ್ಟಮಾತುಗಳನ್ನು ಆಡುವವರು ಶ್ರೀಮಂತರೇ.


ಈ ಯೆಹೂದ್ಯರು ಕೆಲವು ಮಂದಿ ಸುಳ್ಳುಸಾಕ್ಷಿಗಳನ್ನು ಕರೆದುಕೊಂಡು ಬಂದು, “ಈ ಮನುಷ್ಯನು ಈ ಪವಿತ್ರಸ್ಥಳದ (ದೇವಾಲಯದ) ವಿರುದ್ಧವಾಗಿಯೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧವಾಗಿಯೂ ಕೆಟ್ಟಸಂಗತಿಗಳನ್ನು ಯಾವಾಗಲೂ ಹೇಳುತ್ತಾನೆ.


ಪೇತ್ರನು, “ಅನನೀಯನೇ, ನಿನ್ನ ಹೃದಯವನ್ನು ಆಳಲು ನೀನು ಸೈತಾನನಿಗೆ ಒಪ್ಪಿಸಿಕೊಟ್ಟದ್ದೇಕೆ? ನೀನು ಸುಳ್ಳು ಹೇಳಿ, ಪವಿತ್ರಾತ್ಮನನ್ನು ಮೋಸಪಡಿಸಲು ಪ್ರಯತ್ನಿಸಿದೆ. ನೀನು ನಿನ್ನ ಜಮೀನನ್ನು ಮಾರಿದೆ, ಆದರೆ ಬಂದ ಹಣದಲ್ಲಿ ಒಂದು ಭಾಗವನ್ನು ನೀನು ನಿನಗೋಸ್ಕರ ಇಟ್ಟುಕೊಂಡದ್ದೇಕೆ?


ಜನರು ಹೀಗೆ ಮಾತಾಡುತ್ತಿದ್ದುದನ್ನು ಕೇಳಿಸಿಕೊಂಡ ಫರಿಸಾಯರು, “ಯೇಸು ಬೆಲ್ಜೆಬೂಲನ ಶಕ್ತಿಯ ಮೂಲಕ ಜನರನ್ನು ದೆವ್ವಗಳಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದರು.


ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.


ಇಸ್ರೇಲರು, “ದಾವೀದನಲ್ಲಿ ನಾವು ಹತ್ತುಪಾಲನ್ನು ಹೊಂದಿದ್ದೇವೆ. ಆದ್ದರಿಂದ ದಾವೀದನ ಮೇಲೆ ನಿಮಗಿಂತಲೂ ನಮಗೆ ಹೆಚ್ಚಿನ ಹಕ್ಕಿದೆ. ಆದರೆ ನೀವು ನಮ್ಮನ್ನು ಕಡೆಗಣಿಸಿದ್ದೇಕೆ? ರಾಜನನ್ನು ಹಿಂದಕ್ಕೆ ಕರೆತರಲು ಮಾತಾನಾಡಿದವರಲ್ಲಿ ನಾವೇ ಮೊದಲಿಗರು” ಎಂದು ಉತ್ತರಿಸಿದರು. ಆದರೆ ಯೆಹೂದದ ಜನರು ಇಸ್ರೇಲರಿಗೆ ಕಟುವಾಗಿ ಉತ್ತರಿಸಿದರು. ಯೆಹೂದ ಜನರ ಮಾತುಗಳು ಇಸ್ರೇಲರ ಮಾತುಗಳಿಗಿಂತ ಹೆಚ್ಚು ಕಟುವಾಗಿದ್ದವು.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ದೀಪದ ಬೆಳಕು ಇನ್ನೆಂದಿಗೂ ನಿನ್ನಲ್ಲಿ ಪ್ರಕಾಶಿಸುವುದಿಲ್ಲ. ವಧೂವರರ ಧ್ವನಿಯು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ. ನಿನ್ನ ವರ್ತಕರು ಪ್ರಪಂಚದ ಮಹಾಪುರುಷರಾಗಿದ್ದರು. ನಿನ್ನ ಮಾಟದಿಂದ ಎಲ್ಲಾ ಜನಾಂಗಗಳೂ ಮರುಳಾದರು.


ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ಅಂತಿಮ ದಿನಗಳಲ್ಲಿ ಏನು ಸಂಭವಿಸುತ್ತದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಜನರು ನಿಮ್ಮನ್ನು ನೋಡಿ ಕುಚೋದ್ಯ ಮಾಡುವರು. ಅವರು ತಮ್ಮ ಇಚ್ಛೆಗನುಸಾರವಾದ ಕೆಟ್ಟಕಾರ್ಯಗಳನ್ನೇ ಮಾಡುತ್ತಾ ಜೀವಿಸುತ್ತಾರೆ.


ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ.


ಅಲ್ಲದೆ, ನಿಮ್ಮ ಸಭೆಯ ಕೆಲವು ಜನರೇ ದುರ್ಬೋಧಕರಾಗಿ ಯೇಸುವಿನ ಶಿಷ್ಯರಲ್ಲಿ ಕೆಲವರನ್ನು ಸತ್ಯದಿಂದ ದೂರಕ್ಕೆ ನಡೆಸುವರು.


ಅದಕ್ಕಾಗಿ ಯೆಹೋವನು ಹೀಗೆ ಹೇಳುತ್ತಾನೆ: ‘ಹನನ್ಯನೇ, ನಾನು ನಿನ್ನನ್ನು ಶೀಘ್ರದಲ್ಲಿ ಈ ಜಗತ್ತಿನಿಂದ ತೆಗೆದುಬಿಡುತ್ತೇನೆ. ನೀನು ಈ ವರ್ಷ ಮರಣಹೊಂದುವೆ. ಏಕೆಂದರೆ ನೀನು ಜನರನ್ನು ಯೆಹೋವನ ವಿರುದ್ಧ ತಿರುಗುವಂತೆ ಮಾಡಿದೆ.’”


ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.


ಇಗೋ, ಯೆಹೋವನ ನಾಮವು ಬಹುದೂರದಿಂದ ಬರುವದು. ಆತನ ಕೋಪವು ದಟ್ಟವಾದ ಹೊಗೆಯೊಂದಿಗೆ ಇರುವ ಬೆಂಕಿಯೋಪಾದಿಯಲ್ಲಿರುವದು. ಯೆಹೋವನ ಬಾಯಿ ಕೋಪದಿಂದಲೂ ನಾಲಿಗೆಯು ಸುಡುವ ಬೆಂಕಿಯಂತೆಯೂ ಇರುವದು.


ಬಿಳಾಮನ ಸಲಹೆಯನ್ನು ಅನುಸರಿಸಿ, ಯೆಹೋವನಿಗೆ ವಿರೋಧವಾಗಿ ಇಸ್ರೇಲರು ಪಾಪಮಾಡುವಂತೆ ಮಾಡಿ ಪೆಗೋರದ ಬಾಳನ ಸಂಗತಿಗೆ ಕಾರಣರಾದವರು ಇವರೇ ಅಲ್ಲವೇ? ಅದರ ಫಲವಾಗಿ ಭಯಂಕರವಾದ ಕಾಯಿಲೆಯು ಜನರಿಗೆ ಬಂದಿತು.


ಅಬೀಯನ ಸೈನ್ಯವು ಇಸ್ರೇಲಿನ ಸೈನ್ಯದ ಮೇಲೆ ಮಹಾಜಯವನ್ನು ಗಳಿಸಿತು. ಯಾರೊಬ್ಬಾಮನ ಐದು ಲಕ್ಷ ಪಳಗಿದ ಸೈನಿಕರು ಕೊಲ್ಲಲ್ಪಟ್ಟರು.


ಅಬ್ಷಾಲೋಮನು, “ನಾವೇನು ಮಾಡಬೇಕೆಂಬುದನ್ನು ದಯವಿಟ್ಟು ನಮಗೆ ತಿಳಿಸು” ಎಂದು ಅಹೀತೋಫೆಲನನ್ನು ಕೇಳಿದನು.


“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.


ಅವನು ದೂಷಿಸಲು ಪ್ರಾರಂಭಿಸಿ ಯೆಹೋವನ ನಾಮದ ಬಗ್ಗೆ ಕೆಟ್ಟಮಾತುಗಳನ್ನು ಹೇಳತೊಡಗಿದನು. ಆದ್ದರಿಂದ ಜನರು ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. (ಆ ಮನುಷ್ಯನ ತಾಯಿಯ ಹೆಸರು ಶೆಲೋಮೀತ್. ಅವಳು ದಾನ್ ಕುಲದವನಾದ ದಿಬ್ರೀಯನ ಮಗಳು.)


ಮೋವಾಬ್ ಸ್ತ್ರೀಯರು ತಮ್ಮ ಸುಳ್ಳುದೇವರಿಗೆ ಮಾಡಿದ ಔತಣಯಜ್ಞಗಳಿಗೆ ಅವರನ್ನು ಆಮಂತ್ರಿಸಿದರು. ಆದ್ದರಿಂದ ಇಸ್ರೇಲರು ಅವರ ಯಜ್ಞಗಳ ಆಹಾರವನ್ನು ತಿಂದರು ಮತ್ತು ಅವರ ದೇವರನ್ನು ಪೂಜಿಸಿದರು. ಈ ರೀತಿ ಇಸ್ರೇಲರು ಸುಳ್ಳುದೇವರಾದ ಪೆಗೋರ್ ಬಾಳನ ಭಕ್ತರಾದರು. ಹೀಗಾಗಿ ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡನು.


ಆಗ ಅವು ನಿನ್ನನ್ನು ಬೇರೆ ಹೆಂಗಸರಿಂದ ತಪ್ಪಿಸಿ ಕಾಪಾಡುತ್ತವೆ; ನಿನ್ನನ್ನು ಪಾಪಕ್ಕೆ ನಡೆಸುವಂಥ ಅವರ ಸವಿ ಮಾತುಗಳಿಂದ ತಪ್ಪಿಸಿ ಕಾಪಾಡುತ್ತವೆ.


“ಆದರೆ ನೀವು ನಿಮ್ಮ ದಾರಿಯಲ್ಲಿಯೇ ಜೀವಿಸಬೇಕೆಂದಿದ್ದೀರಿ, ನೀವು ನಿಮ್ಮ ಬೆಂಕಿಗಳನ್ನೂ ದೀವಟಿಗೆಗಳನ್ನೂ ಹಚ್ಚುತ್ತೀರಿ, ನಿಮಗೆ ಇಷ್ಟಬಂದ ರೀತಿಯಲ್ಲಿ ಜೀವಿಸುತ್ತೀರಿ. ಆದ್ದರಿಂದ ನೀವು ಶಿಕ್ಷಿಸಲ್ಪಡುವಿರಿ. ನಿಮ್ಮ ಬೆಂಕಿಯಲ್ಲಿಯೂ ದೀವಟಿಗೆಗಳಲ್ಲಿಯೂ ನೀವೇ ಬಿದ್ದು ಸುಟ್ಟುಹೋಗುವಿರಿ. ಇದನ್ನು ನಾನೇ ನೆರವೇರಿಸುವೆನು.”


ಜನರು ಎಲ್ಲಾ ವಿಧವಾದ ಕಾಡುಮೃಗ, ಪಕ್ಷಿ, ಸರ್ಪ, ಮೀನುಗಳನ್ನು ಹತೋಟಿಗೆ ತರುತ್ತಾರೆ. ಜನರು ಈಗಾಗಲೇ ಇವುಗಳನ್ನು ಹತೋಟಿಗೆ ತಂದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು