Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:3 - ಪರಿಶುದ್ದ ಬೈಬಲ್‌

3 ಮತ್ತು ನೀವು ಕೇಳಿಕೊಂಡಾಗ ನಿಮಗೆ ಅವು ಸಿಗಲಿಲ್ಲ. ಏಕೆಂದರೆ ನಿಮ್ಮ ಉದ್ದೇಶವು ಸರಿಯಾಗಿರಲಿಲ್ಲ. ನೀವು ಅವುಗಳನ್ನು ಕೇವಲ ನಿಮ್ಮ ಸ್ವಂತ ಸುಖಕ್ಕಾಗಿ ಕೇಳಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬೇಡಿಕೊಂಡರೂ ನಿಮಗದು ದೊರಕುವುದಿಲ್ಲ. ಏಕೆಂದರೆ, ನಿಮ್ಮ ಬೇಡಿಕೆ ದುರುದ್ದೇಶದಿಂದ ಕೂಡಿರುತ್ತದೆ. ಭೋಗಾಭಿಲಾಶೆಗಳ ಈಡೇರಿಕೆ ನಿಮ್ಮ ಗುರಿಯಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂಬ ದುರಭಿಪ್ರಾಯಪಟ್ಟು ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ಬೇಡಿದರೂ ಬೇಡಿದ್ದನ್ನು ಪಡೆದುಕೊಳ್ಳುವುದಿಲ್ಲ. ಏಕೆಂದರೆ, ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂದು ದುರುದ್ದೇಶಕ್ಕಾಗಿ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮಿ ಮಾಗ್ತ್ಯಾಸಿ, ಖರೆ ತುಮ್ಕಾ ಗಾವಿನಾ. ಕಶ್ಯಾಕ್ ಮಟ್ಲ್ಯಾರ್ ಬುರ್ಶ್ಯಾ ಆಸೆನ್ ಅನಿ ತುಮ್ಚ್ಯಾ ಸ್ವತಾಚ್ಯಾ ಸುಖಾಚ್ಯಾ ಫಾಯ್ದ್ಯಾಸಾಟ್ನಿ ತುಮಿ ಮಾಗ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:3
25 ತಿಳಿವುಗಳ ಹೋಲಿಕೆ  

ನಾವು ಯಾವ ಸಂದೇಹಗಳೂ ಇಲ್ಲದೆ ದೇವರ ಬಳಿಗೆ ಬರಲು ಸಾಧ್ಯವಿದೆ. ಇದರ ಅರ್ಥವೇನೆಂದರೆ (ದೇವರ ಚಿತ್ತಕ್ಕನುಸಾರವಾಗಿ) ನಮಗೆ ಬೇಕಾದವುಗಳಿಗಾಗಿ ದೇವರನ್ನು ಕೇಳಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆ.


ಮತ್ತು ನಾವು ಕೇಳಿಕೊಳ್ಳುವವುಗಳನ್ನು ದೇವರು ನಮಗೆ ನೀಡುತ್ತಾನೆ. ನಾವು ಆತನಿಗೆ ವಿಧೇಯರಾಗಿರುವುದರಿಂದ ಮತ್ತು ಆತನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡುವುದರಿಂದ ಅವುಗಳನ್ನು ಆತನಿಂದ ಪಡೆದುಕೊಳ್ಳುತ್ತೇವೆ.


ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಎಲ್ಲಿಂದ ಬರುತ್ತವೆಯೆಂಬುದು ನಿಮಗೆ ತಿಳಿದಿದೆಯೋ? ನಿಮ್ಮ ಸ್ವಾರ್ಥಪರ ಆಸೆಗಳಿಂದ ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಬರುತ್ತವೆ. ಅವು ನಿಮ್ಮ ಅಂತರಂಗದಲ್ಲಿ ಯುದ್ಧ ಮಾಡುತ್ತಿವೆ.


ನೀವು ಯೆಹೋವನಿಗೆ ಪ್ರಾರ್ಥಿಸಬಹುದು. ಆದರೆ ಆತನು ನಿಮಗೆ ಉತ್ತರಕೊಡುವದಿಲ್ಲ. ನಿಮ್ಮ ಕೆಟ್ಟ ಪಾಪಗಳ ನಿಮಿತ್ತ ತನ್ನ ಮುಖವನ್ನು ಮರೆಮಾಡಿಕೊಳ್ಳುತ್ತಾನೆ.”


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ಬಡವರಿಗೆ ಸಹಾಯಮಾಡದವನು ತಾನೇ ಕೊರತೆಯಲ್ಲಿರುವಾಗ ಯಾರೂ ಅವನಿಗೆ ಸಹಾಯ ಮಾಡುವುದಿಲ್ಲ.


“ಅಲ್ಲದೆ ಆ ಕೆಟ್ಟವರು ದೇವರನ್ನು ಸಹಾಯಕ್ಕಾಗಿ ಕೇಳಿಕೊಂಡರೂ ಆತನು ಅವರಿಗೆ ಉತ್ತರಿಸುವುದಿಲ್ಲ. ಯಾಕೆಂದರೆ ಅವರು ದುಷ್ಟರೂ ದುರಾಭಿಮಾನಿಗಳೂ ಆಗಿದ್ದಾರೆ.


ಆತನು ಹೇಳಿದ್ದೇನೆಂದರೆ, “ನಾನು ಅವರನ್ನು ಕರೆದರೂ ಅವರು ನನಗೆ ಕಿವಿಗೊಡಲಿಲ್ಲ. ಆದ್ದರಿಂದ ಈಗ ಅವರು ನನ್ನನ್ನು ಕರೆದರೂ ನಾನು ಅವರಿಗೆ ಉತ್ತರಕೊಡುವುದಿಲ್ಲ.


“ಆಗ ಕಿರಿಮಗನು ತನಗೆ ದೊರೆತ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿದನು. ಅಲ್ಲಿ ಅವನು ಪಟಿಂಗನಾಗಿ ಬದುಕಿ ತನ್ನ ಹಣವನ್ನೆಲ್ಲಾ ಹಾಳುಮಾಡಿಕೊಂಡನು.


ಯೇಸು, “ನೀವು ಏನು ಕೇಳುತ್ತಿದ್ದೀರಿ ಎಂಬುದು ನಿಮಗೆ ತಿಳಿದಿಲ್ಲ. ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ಕುಡಿಯಲು ನಿಮಗೆ ಸಾಧ್ಯವೇ? ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವು ಹೊಂದಲು ಸಾಧ್ಯವೇ?” ಎಂದನು.


ಯೇಸು ಅವಳ ಮಕ್ಕಳಿಗೆ, “ನೀವು ಏನು ಕೇಳಿಕೊಳ್ಳುತ್ತಿದ್ದೀರೆಂಬುದೇ ನಿಮಗೆ ಗೊತ್ತಿಲ. ನಾನು ಅನುಭವಿಸಬೇಕಾಗಿರುವ ಸಂಕಟವನ್ನು ಅನುಭವಿಸಲು ನಿಮಗೆ ಸಾಧ್ಯವೋ?” ಎಂದು ಕೇಳಿದನು. ಅದಕ್ಕೆ ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಕೊಟ್ಟರು.


“ಯೆರೆಮೀಯನೇ, ಈ ಯೆಹೂದದ ಜನರಿಗಾಗಿ ಬೇಡಿಕೊಳ್ಳಬೇಡ. ಅವರಿಗಾಗಿ ಮೊರೆಯಿಡಬೇಡ. ಅವರಿಗಾಗಿ ಪ್ರಾರ್ಥನೆ ಮಾಡಿದರೂ ನಾನು ಕೇಳುವದಿಲ್ಲ. ಆ ಜನರು ತೊಂದರೆಯನ್ನು ಅನುಭವಿಸುವರು. ಆಗ ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಕೇಳುವದಿಲ್ಲ.


ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ.


“ಇವೆಲ್ಲಾ ನಿಮಗೆ ಸಂಭವಿಸುವಾಗ ನೀವು ಸಹಾಯಕ್ಕಾಗಿ ನನ್ನನ್ನು ಕೇಳುವಿರಿ; ಆದರೆ ನಾನು ನಿಮಗೆ ಸಹಾಯ ಮಾಡುವುದಿಲ್ಲ. ನೀವು ನನಗಾಗಿ ಹುಡುಕುವಿರಿ. ಆದರೆ ನಾನು ನಿಮಗೆ ಸಿಕ್ಕುವುದಿಲ್ಲ.


ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


ನನ್ನ ಶತ್ರುಗಳು ಸಹಾಯಕ್ಕಾಗಿ ಕೂಗಿಕೊಂಡರು. ಆದರೆ ಅವರನ್ನು ರಕ್ಷಿಸಲು ಯಾರೂ ಇರಲಿಲ್ಲ. ಅವರು ಯೆಹೋವನನ್ನೂ ಕೂಗಿಕೊಂಡರು; ಆದರೆ ಆತನೂ ಅವರಿಗೆ ಉತ್ತರಿಸಲಿಲ್ಲ.


ಯೆಹೋವನು ಹೇಳುತ್ತಾನೆ, “ನಾನು ಶೀಘ್ರವಾಗಿ ಯೆಹೂದದ ಜನರಿಗೆ ಏನಾದರೊಂದು ಭಯಂಕರ ಅನಾಹುತ ಸಂಭವಿಸುವಂತೆ ಮಾಡುತ್ತೇನೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಅವರು ಪಶ್ಚಾತ್ತಾಪಪಡುವರು. ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಅವರ ಮೊರೆಯನ್ನು ಕೇಳುವದಿಲ್ಲ.


ಆದರೆ ನಿನ್ನ ಕಿರಿಯ ಮಗನು ನಿನ್ನ ಎಲ್ಲ ಹಣವನ್ನು ಸೂಳೆಯರಿಗೆ ಖರ್ಚುಮಾಡಿ ಮನೆಗೆ ಹಿಂತಿರುಗಿ ಬಂದಾಗ ನೀನು ಅವನಿಗಾಗಿ ಕೊಬ್ಬಿದ ಕರುವನ್ನು ಕೊಯ್ಸಿದ್ದಿ!’ ಅಂದನು.


ಆದ್ದರಿಂದ ದೇವರು ಅವನಿಗೆ, “ನೀನು ನಿನಗಾಗಿ ಹೆಚ್ಚು ಆಯಸ್ಸನ್ನೂ ಕೇಳಲಿಲ್ಲ, ಶ್ರೀಮಂತಿಕೆಯನ್ನೂ ಕೇಳಲಿಲ್ಲ, ನಿನ್ನ ಶತ್ರುಗಳಿಗೆ ಮರಣವನ್ನು ದಯಪಾಲಿಸೆಂದೂ ಕೇಳಲಿಲ್ಲ, ನೀನು ನ್ಯಾಯವಾದ ತೀರ್ಪು ನೀಡಲು ವಿವೇಕವನ್ನು ಕೇಳಿದೆ.


ಹೌದು, ಎಡಬಿಡದೆ ಬೇಡಿಕೊಳ್ಳುವವನಿಗೆ ದೊರೆಯುವುದು. ಎಡಬಿಡದೆ ಹುಡುಕುವವನು ಕಂಡುಕೊಳ್ಳುವನು. ಒಬ್ಬನು ಎಡಬಿಡದೆ ತಟ್ಟುತ್ತಿದ್ದರೆ, ಅವನಿಗೆ ಬಾಗಿಲು ತೆರೆಯಲ್ಪಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು