Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:8 - ಪರಿಶುದ್ದ ಬೈಬಲ್‌

8 ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ದೆವಾಕ್ಡೆ ಜಗೊಳ್ ಯೆವಾ ಅನಿ ತೊ ಬಿ ತುಮ್ಚ್ಯಾಕ್ಡೆ ಯೆತಾ. ಪಾಪಿಯಾನು, ತುಮ್ಚಿ ಹಾತಾ ಧುವಾ. ಕುಸ್ಡ್ಯಾನು ತುಮ್ಚಿ ಮನಾ ನಿತಳ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:8
44 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಭಕ್ತರಿಗೆ ಸಮೀಪವಾಗಿದ್ದಾನೆ. ಆತನು ತನ್ನನ್ನು ಯಥಾರ್ಥವಾಗಿ ಕರೆಯುವ ಪ್ರತಿಯೊಬ್ಬರಿಗೂ ಸಮೀಪವಾಗಿದ್ದಾನೆ.


ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.


ನೀವು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಿಮ್ಮ ಪೂರ್ವಿಕರು ನನ್ನನ್ನು ಅನುಸರಿಸುವದನ್ನು ನಿಲ್ಲಿಸಿಬಿಟ್ಟಿದ್ದರು. ನೀವು ಹಿಂತಿರುಗಿ ನನ್ನ ಬಳಿಗೆ ಬಂದರೆ ನಾನು ನಿಮ್ಮ ಬಳಿಗೆ ಬರುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ. “ನಾವು ಹೇಗೆ ಹಿಂತಿರುಗಿ ಬರಬಹುದು?” ಎಂದು ನೀವು ಕೇಳುತ್ತೀರೋ?


ಆದ್ದರಿಂದ ನಿನ್ನ ಜನರಿಗೆ ನೀನು ಈ ವಿಷಯಗಳನ್ನು ತಿಳಿಸಬೇಕು. ಯೆಹೋವನು ಹೇಳುವುದೇನೆಂದರೆ, “ನನ್ನ ಬಳಿಗೆ ಹಿಂದಿರುಗಿರಿ. ಆಗ ನಾನು ನಿಮ್ಮ ಬಳಿಗೆ ಹಿಂದಿರುಗುವೆನು” ಇದು ಸರ್ವಶಕ್ತನಾದ ಯೆಹೋವನ ಮಾತುಗಳು.


ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.


ಕ್ರಿಸ್ತನಲ್ಲಿ ಈ ನಿರೀಕ್ಷೆಯನ್ನು ಹೊಂದಿರುವ ಪ್ರತಿಯೊಬ್ಬನೂ ಕ್ರಿಸ್ತನು ಶುದ್ಧನಾಗಿರುವಂತೆ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.


ದೇವರೇ, ನನ್ನಲ್ಲಿ ಶುದ್ಧ ಹೃದಯವನ್ನು ನಿರ್ಮಿಸು! ನನ್ನ ಆತ್ಮವನ್ನು ಮತ್ತೆ ಬಲಗೊಳಿಸಿ ನನ್ನನ್ನು ನೂತನಪಡಿಸು.


ಮೋಶೆಯ ಧರ್ಮಶಾಸ್ತ್ರವು ಯಾವುದನ್ನೂ ಸಿದ್ಧಿಗೆ ತರಲಿಲ್ಲ. ಈಗ ನಮಗೆ ಉತ್ತಮವಾದ ಒಂದು ನಿರೀಕ್ಷೆಯನ್ನು ಕೊಡಲಾಗಿದೆ. ಈ ನಿರೀಕ್ಷೆಯು ನಮ್ಮನ್ನು ದೇವರ ಬಳಿಗೆ ಕೊಂಡೊಯ್ಯಬಲ್ಲದು.


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


ನಿಮ್ಮ ದಂಗೆಕೋರತನದ ಮಾರ್ಗಗಳನ್ನೆಲ್ಲ ತೊರೆದುಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿರಿ. ಇಸ್ರೇಲ್ ಜನರೇ, ನೀವು ಮರಣವನ್ನು ಬರಮಾಡಿಕೊಳ್ಳುವುದೇಕೆ?


ನನಗಾದರೋ ದೇವರ ಸಮೀಪದಲ್ಲಿರುವುದೇ ಭಾಗ್ಯವಾಗಿದೆ. ನನ್ನ ಒಡೆಯನಾದ ಯೆಹೋವನನ್ನು ನನ್ನ ಆಶ್ರಯಸ್ಥಾನವನ್ನಾಗಿ ಮಾಡಿಕೊಂಡಿರುವೆ. ದೇವರೇ, ನಿನ್ನ ಎಲ್ಲಾ ಕಾರ್ಯಗಳ ಕುರಿತಾಗಿ ಹೇಳಲು ಬಂದಿರುವೆ.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.


ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು. ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು.


“ನಿಮಗೆ ಒಳ್ಳೆಯ ಫಲ ಬೇಕಾಗಿದ್ದರೆ ನೀವು ಒಳ್ಳೆಯ ಮರ ಹೊಂದಿರಬೇಕು. ನಿಮ್ಮ ಮರ ಒಳ್ಳೆಯದಾಗಿಲ್ಲದಿದ್ದರೆ ಅದು ಕೆಟ್ಟ ಫಲವನ್ನೇ ಬಿಡುವುದು. ಮರವನ್ನು ಅದರಲ್ಲಿ ಬಿಡುವ ಫಲದಿಂದಲೇ ತಿಳಿದುಕೊಳ್ಳಬಹುದು.


ಎಲ್ಲಾ ಸ್ಥಳಗಳಲ್ಲಿ ಪುರುಷರು ಪ್ರಾರ್ಥನೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ತಮ್ಮ ಕೈಗಳನ್ನು ಮೇಲೆತ್ತಿ ಪ್ರಾರ್ಥಿಸುವ ಅವರು ಪರಿಶುದ್ಧರಾಗಿರಬೇಕು. ಅವರು ವಾಗ್ವಾದ ಮಾಡುವವರೂ ಕೋಪಗೊಳ್ಳುವವರೂ ಆಗಿರಬಾರದು.


ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.


ಅವರು ದುಷ್ಕೃತ್ಯಗಳನ್ನು ಮಾಡಿಲ್ಲದವರೂ ಶುದ್ಧ ಹೃದಯವುಳ್ಳವರೂ ನನ್ನ ಹೆಸರಿನಲ್ಲಿ ಮೋಸ ಪ್ರಮಾಣ ಮಾಡದವರೂ ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು.


ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.


ನಾನು ನಿರಪರಾಧಿಯಾಗಿದ್ದರಿಂದ ಯೆಹೋವನು ನನಗೆ ಪ್ರತಿಫಲ ನೀಡಿದನು; ನಾನು ತಪ್ಪನ್ನು ಮಾಡಿಲ್ಲದ ಕಾರಣ ನನಗೆ ಒಳ್ಳೆಯದನ್ನು ಮಾಡಿದನು.


ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ ಸುತ್ತಲೂ ನಡೆಯಲು ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ.


ದೇವರ ದೃಷ್ಟಿಯಲ್ಲಿ ಅವರಿಗೂ ನಮಗೂ ಯಾವ ವ್ಯತ್ಯಾಸವಿಲ್ಲ. ಅವರು ನಂಬಿಕೊಂಡಾಗ, ದೇವರು ಅವರ ಹೃದಯಗಳನ್ನು ಶುದ್ಧೀಕರಿಸಿದನು.


ಅಬ್ರಹಾಮನು ಯೆಹೋವನ ಸಮೀಪಕ್ಕೆ ಬಂದು, “ಯೆಹೋವನೇ, ನೀನು ಕೆಟ್ಟವರನ್ನು ನಾಶಮಾಡುವಾಗ ನೀತಿವಂತರನ್ನು ಸಹ ನಾಶಮಾಡಬೇಕೆಂದಿರುವೆಯೋ?


ನಾನು ಯಾರೊಡನೆಯೂ ಕ್ರೂರವಾಗಿ ವರ್ತಿಸಲಿಲ್ಲ. ನನ್ನ ವಿಜ್ಞಾಪನೆಯು ನಿರ್ಮಲವಾಗಿತ್ತು.


“ನಮ್ಮ ಪೂರ್ವಿಕರಿಂದ ಬಂದ ಸಂಪ್ರದಾಯಗಳಿಗೆ ನಿನ್ನ ಶಿಷ್ಯರು ಏಕೆ ವಿಧೇಯರಾಗಿರುವುದಿಲ್ಲ? ನಿನ್ನ ಶಿಷ್ಯರು ಊಟ ಮಾಡುವುದಕ್ಕೆ ಮುಂಚೆ ಕೈ ತೊಳೆಯುವುದಿಲ್ಲವೇಕೆ?” ಎಂದು ಕೇಳಿದರು.


ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಒಂದು ಸಂದೇಶವನ್ನು ಕೊಡಲಾಗುವುದು. “ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. ಅದು ಮರಳುಗಾಡಿನಿಂದ ಬೀಸುವುದು. ಇದು ರೈತನು ತೂರಿ ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ.


ನಾನು ಹಿಮದಿಂದ ಸ್ನಾನಮಾಡಿದರೂ ಸಾಬೂನಿನಿಂದ ಕೈತೊಳೆದುಕೊಂಡರೂ


ಆದರೆ ಶತ್ರುವು ಬಾಬಿಲೋನಿನವರನ್ನು ಹಿಂದಟ್ಟಿಕೊಂಡು ಹೋಗುವನು. ಶತ್ರುವು ಅವನನ್ನು ಹಿಡಿದು ತನ್ನ ಕತ್ತಿಯಿಂದ ಕೊಲ್ಲುವನು.


ಹೀಗಿರಲು, ನನ್ನ ಹೃದಯವನ್ನು ನಾನೇಕೆ ನಿರ್ಮಲಗೊಳಿಸಿಕೊಳ್ಳಲಿ? ನನ್ನ ಕೈಗಳನ್ನು ನಾನೇಕೆ ಸ್ವಚ್ಛಗೊಳಿಸಿಕೊಳ್ಳಲಿ?


ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.


ಸೌಲನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ನಿರ್ಮಿಸಿದನು. ಯೆಹೋವನಿಗಾಗಿ ಆ ಯಜ್ಞವೇದಿಕೆಯನ್ನು ಸ್ವತಃ ಸೌಲನೇ ಕಟ್ಟಿದನು.


ನಿನಗೆ ಪೂರ್ಣವಾಗಿ ನಂಬಿಗಸ್ತರಾಗಿಲ್ಲದವರನ್ನು ದ್ವೇಷಿಸುವೆನು. ನಾನಾದರೋ ನಿನ್ನ ಉಪದೇಶಗಳನ್ನು ಪ್ರೀತಿಸುವೆನು.


ಆಗ ಅವರು ದಿನನಿತ್ಯ ನನ್ನನ್ನು ಆರಾಧಿಸಲು ಬರುವರು. ಜನರು ನನ್ನ ವಿಧಿಗಳನ್ನು ಕಲಿತುಕೊಳ್ಳಲು ಇಷ್ಟಪಡುವರು. ಆಗ ಅವರು ಸರಿಯಾಗಿ ಜೀವಿಸುವ ಜನಾಂಗವಾಗುವರು. ಅವರು ದೇವರ ಒಳ್ಳೆಯ ಆಜ್ಞೆಗಳನ್ನು ಬಿಡದೆ ಅನುಸರಿಸುವರು. ಅವರು ಪಕ್ಷಪಾತವಿಲ್ಲದೆ ನ್ಯಾಯತೀರಿಸಲು ನನ್ನನ್ನು ಕೇಳುವರು. ದೇವರ ನಿರ್ಧಾರವನ್ನು ಕೇಳಲು ಆತನ ಬಳಿಗೆ ಹೋಗಲು ಇಚ್ಛಿಸುವರು.


ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.


ನಾನು ನಿನ್ನನ್ನು ಕರೆದಾಗ, ನೀನು ಸಮೀಪಕ್ಕೆ ಬಂದು, “ಭಯಪಡದಿರು” ಎಂದು ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು