Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:13 - ಪರಿಶುದ್ದ ಬೈಬಲ್‌

13 ನಿಮ್ಮಲ್ಲಿ ತೊಂದರೆಗೆ ಒಳಗಾಗಿರುವವನು ಪ್ರಾರ್ಥಿಸಬೇಕು. ನಿಮ್ಮಲ್ಲಿ ಸಂತೋಷದಿಂದಿರುವವನು ಹಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮಲ್ಲಿ ಬಾಧೆಪಡುವವನು ಇದ್ದಾನೋ? ಅವನು ದೇವರನ್ನು ಪ್ರಾರ್ಥಿಸಲಿ. ನಿಮ್ಮಲ್ಲಿ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆ ಹಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷ ಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತುಮ್ಚ್ಯಾತ್ಲೊ ಕೊನ್‌ಬಿ ತರಾಸಾತ್ ರ್‍ಹಾಲ್ಯಾರ್? ತೆನಿ ಮಾಗ್ನಿ ಕರುಚೆ. ತುಮ್ಚ್ಯಾತ್ಲೆ ಕೊನ್ ಕುಶಿನ್ ಹಾಯ್, ತೆನಿ ಸುತ್ತಿಚಿ ಗಿತಾ ಗಾವುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:13
34 ತಿಳಿವುಗಳ ಹೋಲಿಕೆ  

ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿರಿ. ನಿಮ್ಮ ಹೃದಯಗಳಲ್ಲಿ ಪ್ರಭುವಿಗೆ ವಾದ್ಯ ನುಡಿಸುತ್ತಾ ಹಾಡಿರಿ.


“ನಾನು ದೊಡ್ಡ ಆಪತ್ತಿನಲ್ಲಿದ್ದೆನು. ಸಹಾಯಕ್ಕಾಗಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಉತ್ತರ ದಯಪಾಲಿಸಿದನು. ನಾನು ಆಳವಾದ ಸಮಾಧಿಯೊಳಗಿದ್ದೆನು. ನಾನು ನಿನಗೆ ಮೊರೆಯಿಟ್ಟಾಗ, ಯೆಹೋವನೇ, ನೀನು ನನ್ನ ಸ್ವರವನ್ನು ಕೇಳಿದೆ.


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


“ನನ್ನ ಆತ್ಮಕ್ಕೆ ಯಾವ ನಿರೀಕ್ಷೆಯೂ ಇರಲಿಲ್ಲ. ಆಗ ನಾನು ಯೆಹೋವನನ್ನು ಸ್ಮರಿಸಿದೆನು. ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದೆನು. ನೀನು ನಿನ್ನ ಪವಿತ್ರ ಆಲಯದಿಂದ ನನ್ನ ಪ್ರಾರ್ಥನೆಯನ್ನು ಕೇಳಿದೆ.


“ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.


ಜನರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸನ್ನಿಧಿಯಲ್ಲಿ ಹೊಸ ಹಾಡನ್ನು ಹಾಡಿದರು. ಈ ಲೋಕದಿಂದ ಬಿಡುಗಡೆ ಹೊಂದಿದ್ದ 1,44,000 ಜನರು ಮಾತ್ರ ಈ ಹಾಡನ್ನು ಕಲಿಯಲು ಶಕ್ತರಾಗಿದ್ದರು. ಈ ಹಾಡನ್ನು ಬೇರೆ ಯಾರೂ ಕಲಿಯಲಾಗುತ್ತಿರಲಿಲ್ಲ.


ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.


ಆಗ ಶಿಷ್ಯರೆಲ್ಲರೂ ಪಸ್ಕಹಬ್ಬದ ಹಾಡನ್ನು ಹಾಡಿದರು. ಬಳಿಕ ಅವರು ಆಲಿವ್ ಗುಡ್ಡಕ್ಕೆ ಹೋದರು.


ಅವರು ಕುಡಿಯುವಾಗ ತಮ್ಮ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸುತ್ತಿದ್ದರು.


ನಾನು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿ ನನ್ನನ್ನು ಬಿಡಿಸಿದನು.


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


ಅವರು ಗಟ್ಟಿಯಾದ ಧ್ವನಿಯಲ್ಲಿ, “ಸಿಂಹಾಸನದ ಮೇಲೆ ಕುಳಿತುಕೊಳ್ಳುವ ನಮ್ಮ ಪ್ರಭುವಿಗೆ ಮತ್ತು ಕುರಿಮರಿಯಾದಾತನಿಗೆ ಜಯವು ಲಭಿಸಿತು” ಎಂದು ಕೂಗಿದರು.


ಆದ್ದರಿಂದ ಸಹೋದರ ಸಹೋದರಿಯರೇ, ನೀವು ಮಾಡತಕ್ಕದ್ದೇನು? ನೀವು ಸಭೆಸೇರಿದಾಗ, ಒಬ್ಬನು ಹಾಡುತ್ತಾನೆ; ಒಬ್ಬನು ಉಪದೇಶ ಮಾಡುತ್ತಾನೆ; ಒಬ್ಬನು ದೇವರಿಂದ ಹೊಸ ಸತ್ಯವನ್ನು ತಿಳಿಸುತ್ತಾನೆ; ಒಬ್ಬನು ಪರಭಾಷೆಯಲ್ಲಿ ಮಾತಾಡುತ್ತಾನೆ; ಒಬ್ಬನು ಆ ಪರಭಾಷೆಯನ್ನು ಅನುವಾದಿಸುತ್ತಾನೆ. ಸಭೆಯು ದೃಢವಾಗಿ ಬೆಳೆಯಬೇಕೆಂಬುದೇ ಇವುಗಳ ಉದ್ದೇಶವಾಗಿರಬೇಕು.


ಬಳಿಕ ಆ ದುಷ್ಕರ್ಮಿಯು ಆತನಿಗೆ, “ಯೇಸುವೇ ನೀನು ನಿನ್ನ ರಾಜ್ಯವನ್ನು ಸ್ಥಾಪಿಸುವಾಗ ನನ್ನನ್ನು ನೆನಸಿಕೊ!” ಎಂದು ಹೇಳಿದನು.


ಬೇರೆ ದೇಶಗಳವರು ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತಾರೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರನ್ನು ನಿತ್ಯಕಾಲಕ್ಕೂ ಸ್ಮರಿಸುವೆವು.


ಯೆಹೋವನಿಗೆ ಗಾನಮಾಡಿರಿ; ಆತನನ್ನು ಸಂಕೀರ್ತಿಸಿರಿ. ಆತನ ಮಹತ್ಕಾರ್ಯಗಳ ಕುರಿತು ಕೊಂಡಾಡಿರಿ.


ಆತನಿಗೆ ಕೃತಜ್ಞತಾಸುತ್ತಿ ಮಾಡೋಣ. ಸ್ತುತಿಗೀತೆಗಳೊಡನೆ ಆನಂದಘೋಷ ಮಾಡೋಣ.


ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಆತನು ತನ್ನ ಆಲಯದಲ್ಲಿ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಗೆ ಕಿವಿಗೊಟ್ಟನು.


ಆಗ ಅವನು ದೇವರಿಗೆ ಪ್ರಾರ್ಥಿಸಲು ಆತನು ಅವನ ಪ್ರಾರ್ಥನೆಗೆ ಉತ್ತರಕೊಡುವನು. ಅವನು ಆನಂದ ಧ್ವನಿಗೈದು ದೇವರನ್ನು ಆರಾಧಿಸುವನು; ಆತನ ಮುಂದೆ ನೀತಿವಂತನಾಗಿ ಜೀವಿಸುವನು.


ಯೆಹೋವನಿಗೆ ಗಾನ ಮಾಡಿರಿ, ಆತನಿಗೆ ಸ್ತುತಿಗೀತೆ ಹಾಡಿರಿ. ಆತನ ಅದ್ಭುತಕಾರ್ಯಗಳನ್ನು ಧ್ಯಾನಿಸಿರಿ.


ನನ್ನ ಸೇವಕರ ಹೃದಯಗಳಲ್ಲಿ ಒಳ್ಳೆಯತನವಿದೆ. ಆದ್ದರಿಂದ ಅವರು ಸಂತೋಷವಾಗಿದ್ದಾರೆ. ದುಷ್ಟಜನರಾದ ನೀವಾದರೋ ಹೃದಯದ ಬೇನೆಯಿಂದಾಗಿ ಅಳುವಿರಿ. ನಿಮ್ಮ ಆತ್ಮವು ಕುಂದಿಹೋಗುವದು; ನೀವು ದುಃಖಕ್ರಾಂತರಾಗುವಿರಿ.


ಆದ್ದರಿಂದ ನಾನೇನು ಮಾಡಬೇಕು? ನಾನು ನನ್ನ ಆತ್ಮದಿಂದಲೂ ಮನಸ್ಸಿನಿಂದಲೂ ಪ್ರಾರ್ಥಿಸುವೆನು; ನನ್ನ ಜೀವಾತ್ಮದೊಂದಿಗೂ ಮನಸ್ಸಿನೊಂದಿಗೂ ಹಾಡುವೆನು.


ಸಹೋದರ ಸಹೋದರಿಯರೇ, ಪ್ರಭುವಿನ ಸಂದೇಶವನ್ನು ತಿಳಿಸಿದ ಪ್ರವಾದಿಗಳು ನಿಮಗೆ ಮಾದರಿಯಾಗಿರಲಿ. ಅವರು ಅನೇಕ ರೀತಿಯಲ್ಲಿ ಸಂಕಟವನ್ನು ಅನುಭವಿಸಿದರೂ ತಾಳ್ಮೆಯಿಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು