Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:20 - ಪರಿಶುದ್ದ ಬೈಬಲ್‌

20 ಇದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ: ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ಸರಿಯಾದ ಮಾರ್ಗಕ್ಕೆ ನಡೆಸುವವನು ಆ ಪಾಪಿಯ ಆತ್ಮವನ್ನು ಮರಣದಿಂದ ಪಾರುಮಾಡಿದವನೂ ಅನೇಕ ಪಾಪಗಳಿಗೆ ಕ್ಷಮಾಪಣೆಯಾಗುವಂತೆ ಮಾಡಿದವನೂ ಆಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದನ್ನು ನೆನಪಿಗೆ ತಂದುಕೊಳ್ಳಿರಿ: ಪಾಪಿಯನ್ನು ದುರ್ಮಾರ್ಗದಿಂದ ಮರಳಿ ಸನ್ಮಾರ್ಗಕ್ಕೆ ತಂದವನು ತನ್ನ ಆತ್ಮವನ್ನು ನಿತ್ಯ ಮರಣದಿಂದ ತಪ್ಪಿಸಿ ತನ್ನ ಲೆಕ್ಕವಿಲ್ಲದ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದವನು ಅವನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ಆ ಪಾಪ ಮಾಡಿದವನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ, ಅವನ ಆತ್ಮವನ್ನು ಮರಣದಿಂದಲೂ ತಪ್ಪಿಸಿ, ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತುಮ್ಕಾ ಯಾದ್ ರ್‍ಹಾಂವ್ದಿತ್, ಎಕ್ ಪಾಪಿ ಮಾನ್ಸಾಕ್ ತೊ ಚುಕುನ್ ಗೆಲ್ಲ್ಯಾಕ್ನಾ ಪಾಟಿ ಹನ್ತಲೊ ತೆಚ್ಯಾ ಆತ್ಮ್ಯಾಕ್ ರಾಕ್ತಾ ಅನಿ ಲೈ ಪಾಪಾಂಚಿ ಮಾಪಿ ಘೆವ್ನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:20
18 ತಿಳಿವುಗಳ ಹೋಲಿಕೆ  

ನೀವು ಒಬ್ಬರನ್ನೊಬ್ಬರು ಎಡಬಿಡದೆ ಪ್ರೀತಿಸುವುದು ಬಹಳ ಮುಖ್ಯವಾದುದು. ಪ್ರೀತಿಯು ಅನೇಕ ಪಾಪಗಳನ್ನು ಅಡಗಿಸಿಬಿಡುತ್ತದೆ.


ದ್ವೇಷವು ವಾದವನ್ನು ಉಂಟುಮಾಡುತ್ತದೆ. ಆದರೆ ಪ್ರೀತಿಯು ಎಲ್ಲಾ ತಪ್ಪುಗಳನ್ನು ಕ್ಷಮಿಸುತ್ತದೆ.


ನಿನ್ನ ಜೀವನದಲ್ಲಿಯೂ ನಿನ್ನ ಬೋಧನೆಯಲ್ಲಿಯೂ ಎಚ್ಚರಿಕೆಯಿಂದಿರು. ಯೋಗ್ಯವಾದ ರೀತಿಯಲ್ಲಿ ಜೀವಿಸುತ್ತಾ ಬೋಧಿಸು. ಆಗ ನೀನು, ನಿನ್ನನ್ನೂ ನಿನ್ನ ಬೋಧನೆ ಕೇಳುವವರನ್ನೂ ರಕ್ಷಿಸುವೆ.


ನಾನು ನನ್ನ ಸ್ವಂತ ಜನರಲ್ಲಿ (ಯೆಹೂದ್ಯರಲ್ಲಿ) ಅಸೂಯೆಯನ್ನು ಉಂಟುಮಾಡಿ ಅವರಲ್ಲಿ ಕೆಲವರಾದರೂ ರಕ್ಷಣೆ ಹೊಂದುವಂತೆ ಮಾಡಬಲ್ಲೆನೆಂಬ ನಿರೀಕ್ಷೆ ನನಗಿದೆ.


ನೀತಿವಂತನ ಕಾರ್ಯಗಳು ಜೀವವುಳ್ಳ ಮರಗಳಂತಿವೆ. ಜ್ಞಾನಿಯು ಆತ್ಮಗಳನ್ನು ಗೆದ್ದುಕೊಳ್ಳುವನು.


ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಬ್ಬನು ಸತ್ಯದಿಂದ ದೂರವಾಗಿ ಅಲೆದಾಡುತ್ತಿದ್ದರೆ, ಮತ್ತೊಬ್ಬನು ಅವನಿಗೆ ಸಹಾಯಮಾಡಿ ಅವನನ್ನು ಸತ್ಯಕ್ಕೆ ನಡೆಸಬೇಕು.


ಈ ಆಸೆಗಳು ಅವನಿಂದ ಪಾಪವನ್ನು ಮಾಡಿಸುತ್ತದೆ. ನಂತರ ಪಾಪವು ಬೆಳೆದು ಸಾವನ್ನು ತರುತ್ತದೆ.


ಬಲಹೀನರಾದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಬಲಹೀನನಂತಾದೆನು. ಯಾವ ರೀತಿಯಲ್ಲಾದರೂ ರಕ್ಷಣಾ ಮಾರ್ಗಕ್ಕೆ ನಡೆಸಬೇಕೆಂದು ಯಾರ್ಯಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾದೆನು.


ದೇವರು ಜನರಿಗೆ ನ್ಯಾಯತೀರ್ಪು ಮಾಡುವ ದಿನದಲ್ಲಿ, ಹಣದಿಂದ ಯಾವ ಲಾಭವೂ ಇಲ್ಲ. ಆದರೆ ನೀತಿಯು ಜನರನ್ನು ಮರಣದಿಂದ ಕಾಪಾಡುತ್ತದೆ.


ಯಾವನ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಯಾವನ ದ್ರೋಹಗಳು ಅಳಿಸಲ್ಪಟ್ಟಿವೆಯೋ ಅವನೇ ಧನ್ಯನು.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.


ಅನ್ಯಾಯದ ಹಣವು ನಿಷ್ಪ್ರಯೋಜಕವಾಗಿದೆ. ನೀತಿಯ ಜೀವಿತವು ಮರಣದಿಂದ ರಕ್ಷಿಸಬಲ್ಲದು.


ಪೌಲನಾದ ನಾನು ನನ್ನ ಸ್ವಂತ ಕೈಗಳಿಂದ ಇದನ್ನು ಬರೆಯುತ್ತಿದ್ದೇನೆ. ಒನೇಸಿಮನು ನಿನಗೆ ಏನಾದರೂ ಕೊಡಬೇಕಾಗಿದ್ದರೆ ನಾನು ಅದನ್ನು ಕೊಡುತ್ತೇನೆ. ನಿನ್ನ ಆತ್ಮಿಕ ಜೀವಿತದ ವಿಷಯದಲ್ಲಿ ನೀನು ನಿನಗೆ ನನಗೆಷ್ಟು ಋಣಿಯಾಗಿರುವೆ ಎಂದು ನಾನೇನೂ ಹೇಳುವುದಿಲ್ಲ.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಪವಿತ್ರರೂ ಧನ್ಯರೂ ಆಗಿದ್ದಾರೆ. ಈ ಜನರ ಮೇಲೆ ಎರಡನೆ ಮರಣಕ್ಕೆ ಅಧಿಕಾರವಿಲ್ಲ. ಆ ಜನರು ದೇವರಿಗೆ ಮತ್ತು ಕ್ರಿಸ್ತನಿಗೆ ಯಾಜಕರಾಗಿರುತ್ತಾರೆ. ಅವರು ಆತನೊಂದಿಗೆ ಒಂದು ಸಾವಿರ ವರ್ಷ ಆಳುತ್ತಾರೆ.


ನಿನಗೆ ತಪ್ಪು ಮಾಡಿದವನನ್ನು ನೀನು ಕ್ಷಮಿಸಿದರೆ ನೀನು ಸ್ನೇಹಿತನಾಗುವಿ. ಆದರೆ ನೀನು ಆ ವಿಷಯವನ್ನು ಬೇರೆಯವರಿಗೆ ಮತ್ತೆ ಹೇಳಿದರೆ ನಿಮ್ಮ ಗೆಳೆತನವು ಒಡೆದು ಹೋಗುವುದು.


ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.


ಆದ್ದರಿಂದ ಎಲ್ಲಾ ನೀಚತನವನ್ನೂ ದುಷ್ಟತನವನ್ನೂ ನಿಮ್ಮ ಜೀವನದಿಂದ ದೂರತಳ್ಳಿರಿ. ನಿಮ್ಮ ಹೃದಯದಲ್ಲಿ ಬೇರೂರಿರುವ ದೇವರ ವಾಕ್ಯವನ್ನು ದೀನತೆಯಿಂದ ಒಪ್ಪಿಕೊಳ್ಳಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುತ್ತದೆ.


ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ಕಾಯಿಲೆಯಲ್ಲಿರುವವನನ್ನು ಗುಣಪಡಿಸುತ್ತದೆ. ಪ್ರಭುವು ಅವನನ್ನು ಗುಣಪಡಿಸುತ್ತಾನೆ. ಒಂದುವೇಳೆ, ಆ ವ್ಯಕ್ತಿಯು ಪಾಪ ಮಾಡಿದ್ದರೆ, ಪ್ರಭುವು ಅವನನ್ನು ಕ್ಷಮಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು