Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:1 - ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನಗುಡಾರದೊಳಗಿಂದ ಅವನ ಸಂಗಡ ಮಾತಾಡಿದನು. ಯೆಹೋವನು ಹೀಗೆ ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆಯನ್ನು ಕರೆದು, ದೇವದರ್ಶನದ ಗುಡಾರದಿಂದ ಅವನ ಸಂಗಡ ಮಾತಾಡಿ, ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತಾಡಿ ಹೀಗಂದನು - ನೀನು ಇಸ್ರಾಯೇಲ್ಯರಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಯನ್ನು ಕರೆದು, ದೇವದರ್ಶನದ ಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:1
19 ತಿಳಿವುಗಳ ಹೋಲಿಕೆ  

ಆಗ ಮೋಶೆ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋದನು. ಮೋಶೆಯು ಬೆಟ್ಟದ ಮೇಲೆ ಇದ್ದಾಗ ಯೆಹೋವನು ಅವನಿಗೆ, “ಯಾಕೋಬನ ಮಹಾ ಕುಟುಂಬವಾದ ಇಸ್ರೇಲರಿಗೆ ಈ ಸಂಗತಿಗಳನ್ನು ಹೇಳು:


ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು.


“ನೀನು ಪ್ರತಿದಿನ ಈ ಸರ್ವಾಂಗಹೋಮವನ್ನು ಸಮರ್ಪಣೆಯಾಗಿ ಅರ್ಪಿಸಬೇಕು. ದೇವದರ್ಶನಗುಡಾರದ ದ್ವಾರದಲ್ಲಿ ಯೆಹೋವನ ಮುಂದೆ ಇದನ್ನು ಮಾಡು. ನೀನು ಸಮರ್ಪಣೆಯನ್ನು ಮಾಡುವಾಗ ಯೆಹೋವನಾದ ನಾನು ಅಲ್ಲಿ ನಿನ್ನನ್ನು ಸಂಧಿಸಿ ನಿನ್ನೊಡನೆ ಮಾತಾಡುವೆನು.


ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು.


ಮೋಶೆ ಯೆಹೋವನ ಸಂಗಡ ಮಾತಾಡಲು ದೇವದರ್ಶನಗುಡಾರದೊಳಗೆ ಹೋದಾಗ, ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯ ಹೊದಿಕೆಯ ಮೇಲಿದ್ದ ಎರಡು ಕೆರೂಬಿಗಳ ಮಧ್ಯದಿಂದ ಯೆಹೋವನ ಸ್ವರವು ಮೋಶೆಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.


ಹೀಗೆ ಪವಿತ್ರಗುಡಾರವಾದ ದೇವದರ್ಶನ ಗುಡಾರದ ಕೆಲಸವೆಲ್ಲವೂ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರೇಲರು ಪ್ರತಿಯೊಂದನ್ನೂ ಮಾಡಿದರು.


ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ಸ್ವಲ್ಪದೂರ ತೆಗೆದುಕೊಂಡು ಹೋಗುತ್ತಿದ್ದನು. ಮೋಶೆಯು ಅದನ್ನು, “ದೇವದರ್ಶನದ ಗುಡಾರ” ಎಂದು ಕರೆದನು. ಯೆಹೋವನಿಂದ ಉತ್ತರವನ್ನು ಕೇಳಬೇಕೆಂದು ಬಯಸುವ ವ್ಯಕ್ತಿಯು ಪಾಳೆಯದ ಹೊರಗಿದ್ದ ದೇವದರ್ಶನ ಗುಡಾರಕ್ಕೆ ಹೋಗುತ್ತಿದ್ದನು.


ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಬಳಿಯಲ್ಲಿರು. ನಾನು ನನ್ನ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದಿದ್ದೇನೆ. ಈ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ನೀನು ಜನರಿಗೆ ಬೋಧಿಸಬೇಕು. ನಾನು ಈ ಕಲ್ಲಿನ ಹಲಗೆಗಳನ್ನು ನಿನಗೆ ಕೊಡುವೆನು” ಎಂದು ಹೇಳಿದನು.


ಯೆಹೋವನು ಮೋಶೆಗೆ ಆ ನಿಯಮಗಳನ್ನು ಸೀನಾಯಿ ಬೆಟ್ಟದಲ್ಲಿ ಕೊಟ್ಟನು. ಇಸ್ರೇಲರು ಯೆಹೋವನಿಗೆ ತಮ್ಮ ಯಜ್ಞಗಳನ್ನು ಅರ್ಪಿಸಬೇಕೆಂದು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸಿದ ದಿನದಲ್ಲಿ ಯೆಹೋವನು ಆ ನಿಯಮಗಳನ್ನು ಕೊಟ್ಟನು.


ಆರೋನನು ಸರ್ವಾಂಗಹೋಮಕ್ಕಾಗಿ ಪಶುವನ್ನು ತರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಅರ್ಪಿಸಿದನು.


ಮೋಶೆಯು ಪೊದೆಯನ್ನು ನೋಡಲು ಬರುತ್ತಿರುವುದನ್ನು ಯೆಹೋವನು ನೋಡಿದನು. ದೇವರು ಆ ಪೊದೆಯೊಳಗಿಂದ, “ಮೋಶೆ, ಮೋಶೆ!” ಎಂದು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.


ಪವಿತ್ರಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಯಜ್ಞವೇದಿಕೆಯನ್ನು ಇರಿಸಿದನು. ಅವನು ಯೆಹೋವನಿಗಾಗಿ ಆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.


ಯೆಹೋವನು ದೇವದರ್ಶನಗುಡಾರದೊಳಗೆ ಮೋಶೆಯೊಡನೆ ಮಾತಾಡಿದನು. ಆಗ ದೇವದರ್ಶನಗುಡಾರವು ಸೀನಾಯಿ ಮರುಭೂಮಿಯಲ್ಲಿತ್ತು. ಇಸ್ರೇಲರು ಈಜಿಪ್ಟನ್ನು ಬಿಟ್ಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇದು ನಡೆಯಿತು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಕಡಿದ ಕಲ್ಲುಗಳಿಂದ ಯಜ್ಞವೇದಿಕೆಯನ್ನು ಕಟ್ಟಬಾರದು. ಆ ಯಜ್ಞವೇದಿಕೆಯ ಮೇಲೆ ನಿಮ್ಮ ದೇವರಾದ ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಿರಿ.


ಅಹಾಜನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಅರ್ಪಿಸಿದನು; ಪಾನನೈವೇದ್ಯವನ್ನು ಸುರಿಸಿದನು; ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದನು.


ಹೀಗೆ ಒಟ್ಟು ಎಪ್ಪತ್ತು ಹೋರಿಗಳನ್ನೂ ನೂರು ಟಗರುಗಳನ್ನೂ ಇನ್ನೂರು ಕುರಿಗಳನ್ನೂ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು