Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:14 - ಪರಿಶುದ್ದ ಬೈಬಲ್‌

14 “ಒಬ್ಬನು ಪಕ್ಷಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಾಗ ಆ ಪಕ್ಷಿಯು ಬೆಳೆವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿ ಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಿರಲಿ, ಅಥವಾ ಮರಿ ಪಾರಿವಾಳ ಆಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿಗಳಾಗಿದ್ದರೆ, ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯನ್ನಾಗಲಿ ಇಲ್ಲವೆ ಪಾರಿವಾಳದ ಮರಿಯನ್ನಾಗಲಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:14
10 ತಿಳಿವುಗಳ ಹೋಲಿಕೆ  

“ಎರಡು ಪಾರಿವಾಳಗಳನ್ನು ಅಥವಾ ಎರಡು ಬೆಳವಕ್ಕಿಗಳನ್ನು ಯಜ್ಞವಾಗಿ ಸಮರ್ಪಿಸಬೇಕು” ಎಂದು ಸಹ ಪ್ರಭುವಿನ ಧರ್ಮಶಾಸ್ತ್ರವು ಹೇಳುತ್ತದೆ. ಆದ್ದರಿಂದ ಯೋಸೇಫನು ಮತ್ತು ಮರಿಯಳು ಜೆರುಸಲೇಮಿಗೆ ಹೋದರು.


“ಅವನು ಕುರಿಮರಿಯನ್ನು ಕೊಡುವುದಕ್ಕೆ ಶಕ್ತನಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಅವುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವನ್ನಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಸಮರ್ಪಿಸಬೇಕು.


ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.


ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.


ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ದೇವರು ಅಬ್ರಾಮನಿಗೆ, “ನಾವು ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ. ಮೂರು ವರ್ಷದ ಒಂದು ಹಸುವನ್ನೂ ಮೂರು ವರ್ಷದ ಒಂದು ಆಡನ್ನೂ ಮತ್ತು ಮೂರು ವರ್ಷದ ಒಂದು ಟಗರನ್ನೂ ತೆಗೆದುಕೊಂಡು ಬಾ. ಇದಲ್ಲದೆ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳವನ್ನೂ ತೆಗೆದುಕೊಂಡು ಬಾ” ಎಂದು ಹೇಳಿದನು.


ಯೇಸು ದೇವಾಲಯದ ಒಳಕ್ಕೆ ಹೋದನು. ಅಲ್ಲಿ ಮಾರುತ್ತಿದ್ದ ಮತ್ತು ಕೊಂಡುಕೊಳ್ಳುತ್ತಿದ್ದ ಜನರನ್ನೆಲ್ಲಾ ಆತನು ಹೊರಗೆ ಓಡಿಸಿಬಿಟ್ಟನು; ನಾಣ್ಯ ವಿನಿಮಯ ಮಾಡುತ್ತಿದ್ದವರ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.


ತರುವಾಯ ಯಾಜಕನು ಎರಡನೆಯ ಪಕ್ಷಿಯನ್ನು ಸರ್ವಾಂಗಹೋಮದ ವಿಧಿಗಳಿಗನುಸಾರವಾಗಿ ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಅವನನ್ನು ಕ್ಷಮಿಸುವನು.


“ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅವನು ಶಕ್ತನಾಗಿಲ್ಲದಿದ್ದರೆ, ಆಗ ಅವನು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ತರಬೇಕು. ಇದು ಅವನ ಪಾಪಪರಿಹಾರಕ ಯಜ್ಞವಾಗಿರುವುದು. ಅವನು ಹಿಟ್ಟಿಗೆ ಎಣ್ಣೆಯನ್ನು ಹಾಕಬಾರದು. ಅವನು ಅದರ ಮೇಲೆ ಸುಗಂಧ ಧೂಪವನ್ನು ಇಡಬಾರದು, ಯಾಕೆಂದರೆ ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು