“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.