Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:19 - ಪರಿಶುದ್ದ ಬೈಬಲ್‌

19 ಆದರೆ ಆರೋನನು ಮೋಶೆಗೆ, “ನೋಡು ಈ ದಿನ ಇವರು ಯೆಹೋವನ ಸನ್ನಿಧಿಗೆ ಪಾಪಪರಿಹಾರಕ ಮತ್ತು ಸರ್ವಾಂಗಹೋಮಗಳನ್ನು ತಂದಿದ್ದರೂ ನನಗೆ ಈ ಆಪತ್ತು ಸಂಭವಿಸಿತು. ಹೀಗಿರುವಾಗ ನಾನು ಪಾಪಪರಿಹಾರಕ ಸಮರ್ಪಣೆಯ ಪಶುವಿನ ಮಾಂಸವನ್ನು ಈ ದಿನದಲ್ಲಿ ತಿಂದಿದ್ದರೆ ಯೆಹೋವನಿಗೆ ಒಳ್ಳೆಯದಾಗಿ ತೋರುತ್ತಿತ್ತೋ? ಇಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಕ್ಕೆ ಆರೋನನು ಮೋಶೆಗೆ, “ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಯಜ್ಞವನ್ನು ಮತ್ತು ಸರ್ವಾಂಗಹೋಮವನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋರುತ್ತಿತ್ತೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದಕ್ಕೆ ಆರೋನನು ಮೋಶೆಗೆ, “ಇವರು ಈ ದಿನ ಸರ್ವೇಶ್ವರನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಬಲಿಯನ್ನು ಹಾಗು ದಹನ ಬಲಿಯನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಲ್ಲಿ ನಾನು ದೋಷಪರಿಹಾರಕ ಬಲಿಮಾಂಸವನ್ನು ಈ ದಿನ ಊಟಮಾಡಿದ್ದರೆ ಅದು ಸರ್ವೇಶ್ವರನಿಗೆ ಸರಿದೋರುತ್ತಿತ್ತೆ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದಕ್ಕೆ ಆರೋನನು ಮೋಶೆಗೆ - ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನಿಗೆ ಒಳ್ಳೇದಾಗಿ ತೋಚುತ್ತಿತ್ತೋ ಎಂದು ಉತ್ತರಕೊಡಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಆರೋನನು ಮೋಶೆಗೆ, “ಈ ದಿನ ಅವರು ಪಾಪಪರಿಹಾರ ಬಲಿಯನ್ನು ಮತ್ತು ಅದರ ದಹನಬಲಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದ್ದರು. ಆದರೆ ಈ ದುಃಖ ಘಟನೆಗಳು ನನಗೆ ಸಂಭವಿಸಿದೆ. ಹೀಗಿರುವಲ್ಲಿ ಇಂದು ನಾನು ಆ ಪಾಪ ಪರಿಹಾರದ ಬಲಿದ್ರವ್ಯವನ್ನು ಊಟಮಾಡಿದ್ದರೆ, ಯೆಹೋವ ದೇವರು ಸಂತೋಷಪಡುತ್ತಿದ್ದರೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:19
17 ತಿಳಿವುಗಳ ಹೋಲಿಕೆ  

ನಂತರ ಆರೋನನು ಸರ್ವಾಂಗಹೋಮದ ಪಶುವನ್ನು ವಧಿಸಿದನು. ಆರೋನನ ಪುತ್ರರು ಅದರ ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನು ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು.


ಆದ್ದರಿಂದ ಆರೋನನು ಯಜ್ಞವೇದಿಕೆಯ ಬಳಿಗೆ ಹೋದನು. ಅವನು ತನಗೋಸ್ಕರ ಪಾಪಪರಿಹಾರಕ ಯಜ್ಞವಾಗಿ ಎಳೆ ಹೋರಿಯನ್ನು ವಧಿಸಿದನು.


ನೀವು ಅತ್ತು ಗೋಳಾಡಿ ಯೆಹೋವನ ವೇದಿಕೆಯನ್ನು ಕಣ್ಣೀರಿನಿಂದ ತೋಯಿಸಿದರೂ ಪ್ರಯೋಜನವಿಲ್ಲ. ಯೆಹೋವನು ನಿಮ್ಮ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ. ನಿಮ್ಮ ಕಾಣಿಕೆಗಳನ್ನು ಆತನು ಮೆಚ್ಚುವವನಲ್ಲ.


ನೀವು ಆ ಮೇಜಿನಿಂದ ಆಹಾರವನ್ನು ತೆಗೆದುಕೊಳ್ಳುವದಿಲ್ಲ. ನೀವು ಆಹಾರವನ್ನು ಮೂಸಿನೋಡಿ ಅದನ್ನು ತಿನ್ನಲು ನಿರಾಕರಿಸುತ್ತೀರಿ. ಅದು ಚೆನ್ನಾಗಿಲ್ಲ ಎಂದು ಹೇಳುತ್ತೀರಿ. ಆದರೆ ಅದು ನಿಜವಲ್ಲ. ಆ ಮೇಲೆ, ನೀವು ರೋಗಪೀಡಿತವಾದ ಕುಂಟಾದ ಮತ್ತು ಕಳುವು ಮಾಡಿದ ಪಶುಗಳನ್ನು ನನಗರ್ಪಿಸುತ್ತೀರಿ. ಆದರೆ ಅಂಥಾ ಪಶುಗಳನ್ನು ನಿಮ್ಮಿಂದ ನಾನು ಸ್ವೀಕರಿಸುವದಿಲ್ಲ.


“ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.


ಇಸ್ರೇಲರು ಯೆಹೋವನಿಗೆ ದ್ರಾಕ್ಷಾರಸದ ಸಮರ್ಪಣೆ ಮಾಡುವದಿಲ್ಲ. ಆತನಿಗೆ ಯಜ್ಞವನ್ನರ್ಪಿಸುವದಿಲ್ಲ. ಅವರ ಯಜ್ಞಗಳು ಸಮಾಧಿಗಳಲ್ಲಿ ಉಣ್ಣುವ ಆಹಾರದಂತಿರುವದು. ಅದನ್ನು ಯಾವನಾದರೂ ಉಂಡಲ್ಲಿ ಅವನು ಅಶುದ್ಧನಾಗುವನು. ಅವರ ರೊಟ್ಟಿಯು ದೇವರ ಆಲಯದೊಳಗೆ ಇಡಲ್ಪಡುವದಿಲ್ಲ. ಅವರೇ ಅದನ್ನು ತಿನ್ನಬೇಕು.


ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ಪವಿತ್ರಾತ್ಮನು ಆ ಎರಡು ಪ್ರತ್ಯೇಕವಾದ ಕೊಠಡಿಗಳ ಮೂಲಕ ನಮಗೆ ತಿಳಿಸುವುದೇನೆಂದರೆ, ಮೊದಲನೆ ಕೊಠಡಿಯು ಅಲ್ಲಿ ಇರುವವರೆಗೂ ಮಹಾ ಪವಿತ್ರಸ್ಥಳಕ್ಕೆ ಹೋಗುವ ಮಾರ್ಗವು ತೆರೆಯಲೇ ಇಲ್ಲ.


ಆತನು ಬೇರೆ ಯಾಜಕರಂತಲ್ಲ. ಅವರಾದರೋ ಪ್ರತಿ ದಿನವೂ ಯಜ್ಞಗಳನ್ನು ಅರ್ಪಿಸಬೇಕು. ಅವರು ತಮ್ಮ ಸ್ವಂತ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಿದ ನಂತರ ಬೇರೆಯವರ ಪಾಪಗಳಿಗಾಗಿ ಅರ್ಪಿಸಬೇಕು. ಆದರೆ ಕ್ರಿಸ್ತನು ಹಾಗೆ ಮಾಡಬೇಕಾಗಿಲ್ಲ. ಆತನು ತನ್ನನ್ನೇ ಯಜ್ಞವಾಗಿ ಅರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಯೆಹೋವನು ಹೇಳುವುದೇನೆಂದರೆ, “ಈ ಯಜ್ಞಗಳನ್ನೆಲ್ಲ ನೀವು ನನಗೆ ಕೊಡುತ್ತಲೇ ಇರುವುದೇಕೆ? ನಿಮ್ಮ ಆಡುಗಳ ಯಜ್ಞಗಳೂ, ಹೋರಿಗಳ, ಕುರಿಗಳ, ಆಡುಗಳ ಕೊಬ್ಬೂ ನನಗೆ ಬೇಕಿಲ್ಲ. ಅವುಗಳ ರಕ್ತಕ್ಕೆ ನಾನು ಪ್ರಸನ್ನನಾಗುವುದಿಲ್ಲ.


ನಾನು ದುಃಖದಲ್ಲಿರುವಾಗ ಆ ಆಹಾರವನ್ನು ಊಟಮಾಡಲಿಲ್ಲ. ಈ ಬೆಳೆಯನ್ನು ಶೇಖರಿಸುವಾಗ ನಾನು ಅಶುದ್ಧನಾಗಿರಲಿಲ್ಲ. ಸತ್ತವರಿಗಾಗಿ ಈ ಆಹಾರವನ್ನು ಅರ್ಪಿಸಲಿಲ್ಲ. ನನ್ನ ದೇವರಾದ ಯೆಹೋವನೇ, ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗಿದ್ದೇನೆ. ನೀನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ನಾನು ಮಾಡಿದ್ದೇನೆ.


ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ.


ಮೋಶೆ ಆ ಮಾತನ್ನು ಕೇಳಿ ಒಪ್ಪಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು