Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:2 - ಪರಿಶುದ್ದ ಬೈಬಲ್‌

2 ಆದ್ದರಿಂದ ಯೆಹೋವನಿಂದ ಬೆಂಕಿ ಹೊರಟುಬಂದು ಅವರಿಬ್ಬರನ್ನು ನಾಶಮಾಡಿತು. ಅವರು ಯೆಹೋವನ ಸನ್ನಿಧಿಯಲ್ಲಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಸರ್ವೇಶ್ವರನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು. ಅವರು ಸರ್ವೇಶ್ವರನ ಸನ್ನಿಧಿಯಲ್ಲೇ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನ ಸನ್ನಿಧಿಯಲ್ಲಿ ಸಮರ್ಪಿಸಲಾಗಿ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟುಬಂದು ಅವರನ್ನು ದಹಿಸಿಬಿಟ್ಟಿತು. ಅವರು ಯೆಹೋವ ದೇವರ ಮುಂದೆ ಮರಣಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:2
25 ತಿಳಿವುಗಳ ಹೋಲಿಕೆ  

ಆದರೆ ನಾದಾಬ್ ಮತ್ತು ಅಬೀಹೂ ಸತ್ತರು. ಯೆಹೋವನು ತಿಳಿಸದ ಹೊಸ ಬೆಂಕಿಯಿಂದ ಧೂಪವನ್ನು ಯೆಹೋವನ ಮುಂದೆ ಅರ್ಪಿಸಿದ್ದರಿಂದ ಅವರು ಸತ್ತರು.


ಅಲ್ಲದೆ ಯೆಹೋವನಿಂದ ಬೆಂಕಿಯು ಹೊರಟುಬಂದು ಧೂಪವನ್ನು ಅರ್ಪಿಸುತ್ತಿದ್ದ ಇನ್ನೂರೈವತ್ತು ಮಂದಿಯನ್ನು ದಹಿಸಿಬಿಟ್ಟಿತು.


ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಕೊಂದನು. ಉಜ್ಜನು ದೇವರಿಗೆ ಗೌರವವನ್ನು ತೋರಿಸದೆ ಪವಿತ್ರ ಪೆಟ್ಟಿಗೆಯನ್ನು ಸ್ಪರ್ಶಿಸಿದನು. ದೇವರ ಪವಿತ್ರ ಪಟ್ಟಿಗೆಯ ಹತ್ತಿರದಲ್ಲೇ ಉಜ್ಜನು ಸತ್ತನು.


ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.


ತಕ್ಷಣವೇ ಸಫೈರಳು ಅವನ ಪಾದಗಳ ಮುಂದೆ ಬಿದ್ದು ಸತ್ತುಹೋದಳು. ಆ ಯೌವನಸ್ಥರು ಒಳಗೆ ಬಂದು ನೋಡಿದಾಗ ಆಕೆ ಸತ್ತುಹೋಗಿದ್ದಳು. ಅವರು ಆಕೆಯನ್ನು ಹೊತ್ತುಕೊಂಡು ಹೋಗಿ, ಆಕೆಯ ಗಂಡನ ಪಕ್ಕದಲ್ಲಿ ಹೂಳಿಟ್ಟರು.


ಅನನೀಯನು ಇದನ್ನು ಕೇಳಿದ ಕೂಡಲೇ ಕೆಳಗೆ ಬಿದ್ದು ಸತ್ತುಹೋದನು. ಕೆಲವು ಯೌವನಸ್ಥರು ಬಂದು ಅವನ ದೇಹವನ್ನು ಬಟ್ಟೆಯಲ್ಲಿ ಸುತ್ತಿದರು. ಅವರು ಅದನ್ನು ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು. ಇದರ ಬಗ್ಗೆ ಕೇಳಿದ ಪ್ರತಿಯೊಬ್ಬರೂ ಭಯಭ್ರಾಂತರಾದರು.


ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.


ನಾದಾಬ್ ಮತ್ತು ಅಬೀಹೂ ತಮ್ಮ ತಂದೆ ಸಾಯುವ ಮೊದಲೇ ತೀರಿಹೋದರು. ಅವರಿಗೆ ಮಕ್ಕಳಿರಲಿಲ್ಲ. ಅವರ ಬದಲಿಗೆ ಎಲ್ಲಾಜಾರ್ ಮತ್ತು ಈತಾಮಾರ್ ಯಾಜಕರಾಗಿ ಸೇವೆಮಾಡಿದರು.


ಕಳೆದ ಸಲ, ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಹೇಗೆ ತೆಗೆದುಕೊಂಡು ಹೋಗಬೇಕೆಂದು ಯೆಹೋವನಲ್ಲಿ ವಿಚಾರಿಸಲಿಲ್ಲ. ಲೇವಿಯರಾದ ನೀವು ಅದನ್ನು ಹೊರಲಿಲ್ಲ. ಆದ್ದರಿಂದಲೇ ನಮ್ಮ ದೇವರಾದ ಯೆಹೋವನು ನಮ್ಮನ್ನು ಶಿಕ್ಷಿಸಿದನು” ಎಂದು ಹೇಳಿದನು.


ಆದರೆ ಯೆಹೋವನು ಅವನ ಮೇಲೆ ಕೋಪಗೊಂಡು ಆ ಪವಿತ್ರವಾದ ಪೆಟ್ಟಿಗೆಯನ್ನು ಮುಟ್ಟಿದ್ದಕ್ಕೆ ಅವನನ್ನು ಅಲ್ಲಿಯೇ ಸಾಯಿಸಿದನು.


ಎಲೀಯನು ಸೇನಾಧಿಪತಿಗೆ ಮತ್ತು ಅವನ ಐವತ್ತು ಮಂದಿ ಜನರಿಗೆ, “ನಾನು ದೇವಮನುಷ್ಯನಾಗಿದ್ದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಜನರನ್ನೂ ನಾಶಗೊಳಿಸಲಿ!” ಎಂದು ಹೇಳಿದನು. ಆಗ ಪರಲೋಕದಿಂದ ದೇವರ ಬೆಂಕಿಯು ಇಳಿದು ಬಂದು ಸೇನಾಧಿಪತಿಯನ್ನೂ ಅವನ ಐವತ್ತು ಜನರನ್ನೂ ನಾಶಗೊಳಿಸಿತು.


ಎಲೀಯನು ಐವತ್ತು ಮಂದಿಯ ಸೇನಾಧಿಪತಿಗೆ, “ನಾನು ಒಬ್ಬ ದೇವಮನುಷ್ಯನಾಗಿರುವದಾದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಸೈನಿಕರನ್ನೂ ನಾಶಗೊಳಿಸಲಿ!” ಎಂದು ಉತ್ತರಿಸಿದನು. ಆಗ ಬೆಂಕಿಯು ಪರಲೋಕದಿಂದ ಬಂದು ಆ ಸೇನಾಧಿಪತಿಯನ್ನು ಮತ್ತು ಅವನ ಐವತ್ತು ಮಂದಿ ಸೈನಿಕರನ್ನು ನಾಶಗೊಳಿಸಿತು.


ಆದರೆ ಯಾಜಕರಿಲ್ಲದ ಕಾರಣ ಬೇತ್‌ಷೆಮೆಷಿನ ಜನರು ಪವಿತ್ರ ಪೆಟ್ಟಿಗೆಯನ್ನು ಹಣಿಕಿ ನೋಡಿದ್ದರಿಂದ ಬೇತ್‌ಷೆಮೆಷಿನ ಎಪ್ಪತ್ತು ಜನರನ್ನು ಯೆಹೋವನು ಕೊಂದನು. ಯೆಹೋವನು ಕ್ರೂರವಾಗಿ ಶಿಕ್ಷಿಸಿದ್ದರಿಂದ ಬೇತ್‌ಷೆಮೆಷಿನ ಜನರು ಗೋಳಾಡಿ,


ಕೋರಹನೂ ಸೇರಿದಂತೆ ಆ ಕಾಯಿಲೆಯಿಂದ ಸತ್ತವರು ಹದಿನಾಲ್ಕು ಸಾವಿರದ ಏಳುನೂರು ಮಂದಿ.


ಆರೋನನ ಇಬ್ಬರು ಪುತ್ರರು ಯೆಹೋವನಿಗೆ ಆತನು ಆಜ್ಞಾಪಿಸದೇ ಇದ್ದ ಧೂಪವನ್ನು ಅರ್ಪಿಸುತ್ತಿದ್ದಾಗ ಸತ್ತರು. ಅದಾದ ನಂತರ ಯೆಹೋವನು ಮೋಶೆಯೊಡನೆ ಮಾತಾಡಿದನು.


ಮಿಶಾಯೇಲ ಮತ್ತು ಎಲ್ಸಾಫಾನ ಮೋಶೆಯ ಮಾತಿಗೆ ವಿಧೇಯರಾದರು. ಅವರು ನಾದಾಬ ಮತ್ತು ಅಬೀಹು ಎಂಬವರ ಮೃತಶರೀರಗಳನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋದರು. ನಾದಾಬ ಮತ್ತು ಅಬೀಹು ತೊಟ್ಟುಕೊಂಡಿದ್ದ ವಿಶೇಷವಾದ ಹೆಣೆದ ಅಂಗಿಗಳು ಇನ್ನೂ ಅವರ ಮೃತಶರೀರಗಳ ಮೇಲಿದ್ದವು.


ದೇವರು ಮೋಶೆಗೆ, “ನೀನು, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿಬಂದು ದೂರದಿಂದ ನನ್ನನ್ನು ಆರಾಧಿಸಬೇಕು.


ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಗಳನ್ನು, ಸೌದೆಯನ್ನು, ಕಲ್ಲುಗಳನ್ನು ಮತ್ತು ಯಜ್ಞವೇದಿಕೆಯ ಸುತ್ತಲಿನ ಮಣ್ಣನ್ನೆಲ್ಲ ದಹಿಸಿತು. ಆ ಹಳ್ಳದಲ್ಲಿದ್ದ ನೀರನ್ನೆಲ್ಲ ಬೆಂಕಿಯು ದಹಿಸಿ ಒಣಗಿಸಿತು.


ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಆಕಾಶದಿಂದ ಸಿಡಿಲೊಡೆದು ನಿನ್ನ ಕುರಿಗಳನ್ನೂ ಸೇವಕರುಗಳನ್ನೂ ಸಂಪೂರ್ಣವಾಗಿ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.


ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.


ಪ್ರವಾದಿಯು ಹೋಗಿ ರಸ್ತೆಯ ಮೇಲೆ ಬಿದ್ದಿರುವ ದೇಹವನ್ನು ಕಂಡನು. ಕತ್ತೆ ಮತ್ತು ಸಿಂಹವು ಆ ದೇಹದ ಹತ್ತಿರ ಇನ್ನೂ ನಿಂತಿದ್ದವು. ಸಿಂಹವು ಆ ದೇಹವನ್ನು ತಿಂದಿರಲಿಲ್ಲ ಮತ್ತು ಕತ್ತೆಗೆ ತೊಂದರೆಯನ್ನೂ ಮಾಡಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು