Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:7 - ಪರಿಶುದ್ದ ಬೈಬಲ್‌

7 ಆದರೆ ನೀವು ದೇವದರ್ಶನಗುಡಾರದ ಬಾಗಿಲನ್ನು ಸಹ ಬಿಟ್ಟುಹೋಗಬಾರದು. ಇಲ್ಲವಾದರೆ ನೀವು ಸಾಯುವಿರಿ! ಯಾಕೆಂದರೆ, ಯೆಹೋವನ ಅಭಿಷೇಕತೈಲವು ನಿಮ್ಮ ಮೇಲಿದೆ” ಎಂದು ಹೇಳಿದನು. ಆದ್ದರಿಂದ ಆರೋನ, ಎಲ್ಲಾಜಾರ್ ಮತ್ತು ಈತಾಮಾರ್ ಮೋಶೆಯ ಮಾತಿಗೆ ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ” ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರನ ಅಭಿಷೇಕತೈಲ ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು, ಹೋದರೆ ಸಾಯುವಿರಿ,” ಎಂದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ದೇವದರ್ಶನದ ಗುಡಾರದ ಬಾಗಲನ್ನು ಬಿಟ್ಟು ಹೋಗಬಾರದು; ಹೋದರೆ ಸತ್ತೀರಿ ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಮರಣ ಹೊಂದದಂತೆ ದೇವದರ್ಶನದ ಗುಡಾರದ ಬಾಗಿಲಿನಿಂದ ಹೊರಗೆ ಹೋಗಬಾರದು. ಏಕೆಂದರೆ ಯೆಹೋವ ದೇವರ ಅಭಿಷೇಕ ತೈಲವು ನಿಮ್ಮ ಮೇಲಿದೆ,” ಎಂದನು. ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:7
12 ತಿಳಿವುಗಳ ಹೋಲಿಕೆ  

ಪ್ರಧಾನಯಾಜಕನು ದೇವರ ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗೆ ಹೋದರೆ ಅಶುದ್ಧನಾಗುವನು. ಅಲ್ಲದೆ ಅವನಿಂದ ದೇವರ ಪರಿಶುದ್ಧಸ್ಥಳವು ಅಶುದ್ಧವಾಗುವುದು. ಅಭಿಷೇಕತೈಲವು ಪ್ರಧಾನಯಾಜಕನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಇದು ಅವನನ್ನು ಇತರ ಜನರಿಂದ ಪ್ರತ್ಯೇಕಗೊಳಿಸಿದೆ. ನಾನೇ ಯೆಹೋವನು!


ನಿಮ್ಮನ್ನು ಮತ್ತು ನಮ್ಮನ್ನು ಕ್ರಿಸ್ತನಲ್ಲಿ ದೃಢಗೊಳಿಸುವಾತನು ದೇವರೇ. ದೇವರು ತನ್ನ ವಿಶೇಷವಾದ ಆಶೀರ್ವಾದವನ್ನು ನಮಗೆ ಕೊಟ್ಟಿದ್ದಾನೆ.


ಮೋಶೆ ಸ್ವಲ್ಪ ಅಭಿಷೇಕತೈಲವನ್ನು ಮತ್ತು ವೇದಿಕೆಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮೇಲೆ ಮತ್ತು ಅವನ ಯಾಜಕವಸ್ತ್ರದ ಮೇಲೆ ಚಿಮಿಕಿಸಿದನು; ಆರೋನನ ಜೊತೆ ಇದ್ದ ಅವನ ಪುತ್ರರ ಮೇಲೆ ಮತ್ತು ಅವರ ಬಟ್ಟೆಗಳ ಮೇಲೆ ಚಿಮಿಕಿಸಿದನು. ಹೀಗೆ ಮೋಶೆಯು ಆರೋನನನ್ನೂ ಅವನ ಯಾಜಕವಸ್ತ್ರವನ್ನೂ ಅವನ ಪುತ್ರರನ್ನೂ ಅವರ ಯಾಜಕ ವಸ್ತ್ರಗಳನ್ನೂ ಪವಿತ್ರಗೊಳಿಸಿದನು.


ನಿನ್ನ ಸಹೋದರನಾದ ಆರೋನನಿಗೆ ಮತ್ತು ಅವನ ಗಂಡುಮಕ್ಕಳಿಗೆ ಬಟ್ಟೆಗಳನ್ನು ತೊಡಿಸು. ಬಳಿಕ ಅವರನ್ನು ಯಾಜಕರನ್ನಾಗಿ ಮಾಡಲು ವಿಶೇಷ ತೈಲದಿಂದ ಅಭಿಷೇಕಿಸು. ಇದು ಅವರನ್ನು ಪ್ರತಿಷ್ಠಿಸುವುದು ಮತ್ತು ಪವಿತ್ರರನ್ನಾಗಿ ಮಾಡುವುದು. ಅವರು ಯಾಜಕರಾಗಿ ನನ್ನ ಸೇವೆ ಮಾಡುವರು.


ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


ಯೇಸು ಅವನಿಗೆ, “ಸತ್ತಜನರೇ ತಮ್ಮವರಲ್ಲಿ ಸತ್ತುಹೋದವರ ಅಂತ್ಯಕ್ರಿಯೆ ಮಾಡಲಿ! ನೀನು ಹೋಗಿ ದೇವರ ರಾಜ್ಯದ ಬಗ್ಗೆ ತಿಳಿಸು” ಎಂದು ಹೇಳಿದನು.


ಬಳಿಕ ಮೋಶೆ ಸ್ವಲ್ಪ ಅಭಿಷೇಕತೈಲವನ್ನು ಆರೋನನ ತಲೆಗೆ ಹೊಯಿದು ಅವನನ್ನು ಪವಿತ್ರಗೊಳಿಸಿದನು.


“ಆರೋನನನ್ನು ಮತ್ತು ಅವನ ಪುತ್ರರನ್ನು ಈ ತೈಲದಿಂದ ಅಭಿಷೇಕಿಸು. ಅವರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾರೆಂದು ಇದು ತೋರಿಸುವುದು. ಆಗ ಅವರು ಅಭಿಷೇಕಿಸಲ್ಪಟ್ಟ ಯಾಜಕರಾಗಿ ನನ್ನ ಸೇವೆಮಾಡಬಹುದು.


ಬಳಿಕ ಯೆಹೋವನು ಆರೋನನಿಗೆ,


ಅಭಿಷೇಕತೈಲವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಸುರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು