Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:33 - ಪರಿಶುದ್ದ ಬೈಬಲ್‌

33 ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೊಂದು ಸತ್ತು ಮಣ್ಣಿನ ಬೋಗುಣಿಗೆ ಬಿದ್ದರೆ, ಆಗ ಆ ಬೋಗುಣಿಯಲ್ಲಿ ಇರುವುದೆಲ್ಲಾ ಅಶುದ್ಧವಾಗುವುದು. ಆ ಬೋಗುಣಿಯನ್ನು ನೀವು ಒಡೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು. ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವದೆಲ್ಲಾ ಅಶುದ್ಧವಾಗಿರುವದು. ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಪ್ರತಿಯೊಂದು ಮಣ್ಣಿನ ಪಾತ್ರೆಯಲ್ಲಿ ಅವುಗಳಲ್ಲಿ ಯಾವುದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವುದು ಮತ್ತು ನೀವು ಅದನ್ನು ಒಡೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:33
11 ತಿಳಿವುಗಳ ಹೋಲಿಕೆ  

“ಸ್ರಾವವುಳ್ಳ ವ್ಯಕ್ತಿ ಮಣ್ಣಿನ ಮಡಿಕೆಯನ್ನು ಮುಟ್ಟಿದರೆ, ಆ ಮಡಿಕೆಯನ್ನು ಒಡೆದುಹಾಕಬೇಕು. ಸ್ರಾವವುಳ್ಳ ವ್ಯಕ್ತಿ ಮರದ ಬಟ್ಟಲನ್ನು ಮುಟ್ಟಿದರೆ, ಆ ವಸ್ತುವನ್ನು ನೀರಿನಲ್ಲಿ ತೊಳೆಯಬೇಕು.


ಪಾಪಪರಿಹಾರಕ ಯಜ್ಞವನ್ನು ಮಣ್ಣಿನ ಮಡಕೆಯಲ್ಲಿ ಬೇಯಿಸಿದರೆ, ಆ ಮಡಕೆಯನ್ನು ಒಡೆದುಹಾಕಬೇಕು. ಪಾಪಪರಿಹಾರಕ ಯಜ್ಞವನ್ನು ತಾಮ್ರದ ಪಾತ್ರೆಯಲ್ಲಿ ಬೇಯಿಸಿದರೆ, ಆ ಪಾತ್ರೆಯನ್ನು ಉಜ್ಜಿ ನೀರಿನಲ್ಲಿ ತೊಳೆಯಬೇಕು.


ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.


ಮೋವಾಬಿನ ಪ್ರತಿಯೊಂದು ಮಾಳಿಗೆಯ ಮೇಲೂ ಸಾರ್ವಜನಿಕ ಚೌಕಗಳಲ್ಲಿಯೂ ಜನ ಸತ್ತವರಿಗಾಗಿ ಶೋಕಿಸುತ್ತಿದ್ದಾರೆ. ಮೋವಾಬನ್ನು ನಾನು ಬರಿದಾದ ಪಾತ್ರೆಯಂತೆ ಮಾಡಿರುವುದರಿಂದ ದುಃಖ ವ್ಯಾಪಿಸಿದೆ.” ಇದು ಯೆಹೋವನ ನುಡಿ.


ಆ ವ್ಯಕ್ತಿಯು ಆ ಮನೆಯನ್ನು ಕೆಡವಿಹಾಕಿಸಬೇಕು. ಅವರು ಅದರ ಎಲ್ಲಾ ಕಲ್ಲುಗಳನ್ನು, ಮಣ್ಣನ್ನು ಮತ್ತು ಮರದ ತುಂಡುಗಳನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ಸತ್ತ ಪ್ರಾಣಿಯ ಯಾವುದೇ ಭಾಗ ಯಾವುದೇ ವಸ್ತುವಿನ ಮೇಲೆ ಬಿದ್ದರೂ ಆ ವಸ್ತು ಅಶುದ್ಧವಾಗಿದೆ. ಅದು ಮಣ್ಣಿನ ಒಲೆಯಾಗಿದ್ದರೂ ಮಡಿಕೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಆ ವಸ್ತುಗಳು ಇನ್ನೆಂದಿಗೂ ಶುದ್ಧವಾಗಿರುವುದಿಲ್ಲ. ಅವು ನಿಮಗೆ ಯಾವಾಗಲೂ ಅಶುದ್ಧವಾಗಿರುವವು.


ಅಶುದ್ಧವಾದ ಮಣ್ಣಿನ ಬೋಗುಣಿಯಿಂದ ನೀರು ಯಾವುದೇ ಆಹಾರಕ್ಕೆ ತಾಗಿದರೆ, ಆ ಆಹಾರವು ಅಶುದ್ಧವಾಗುವುದು. ಅಶುದ್ಧವಾದ ಬೋಗುಣಿಯಲ್ಲಿ ಯಾವುದೇ ಪಾನದ್ರವ್ಯವಿದ್ದರೂ ಅದು ಅಶುದ್ಧವಾಗುವುದು.


ಶ್ರೇಷ್ಠವಾದ ಗೋಧಿಹಿಟ್ಟಿಗೆ ಎಣ್ಣೆಯನ್ನು ಬೆರೆಸಿ ಕಬ್ಬಿಣದ ಹಂಚಿನ ಮೇಲೆ ರೊಟ್ಟಿ ಸುಟ್ಟು ಅದನ್ನು ಒಳಗೆ ತರಬೇಕು. ನೀವು ಈ ಸಮರ್ಪಣೆಯನ್ನು ತುಂಡುತುಂಡಾಗಿ ಮುರಿದು ಸಮರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಮತ್ತು ಮುಚ್ಚಳವಿಲ್ಲದಿರುವ ಪ್ರತಿಯೊಂದು ಪಾತ್ರೆಯೂ ಅಶುದ್ಧವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು