Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:7 - ಪರಿಶುದ್ದ ಬೈಬಲ್‌

7 ಇನ್ನು ಕೆಲವು ಪಶುಗಳ ಕಾಲ್ಗೊರಸುಗಳು ಸೀಳಿರುತ್ತವೆ. ಆದರೆ ಅವು ಮೆಲಕು ಹಾಕುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಹಂದಿಗಳ ಗೊರಸುಗಳು ಸೀಳಿರುತ್ತವೆ. ಆದರೆ ಮೆಲಕು ಹಾಕುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹಂದಿಯ ಗೊರಸು ಸೀಳಿದೆ; ಆದರೂ ಅದು ಮೆಲಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹಂದಿಯ ಗೊರಸು ಸೀಳಿದೆ. ಆದರೂ ಅದು ಮೆಲುಕು ಹಾಕುವುದಿಲ್ಲ. ಆದ್ದರಿಂದ ಅದು ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹಂದಿಯ ಗೊರಸು ಸೀಳಿಯದೆ; ಆದರೂ ಅದು ಮೆಲಕು ಹಾಕುವದಿಲ್ಲವಾದದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹಂದಿಯ ಗೊರಸು ಸೀಳಿದ್ದರೂ ಅದು ಮೇವನ್ನು ಮೆಲುಕು ಹಾಕುವುದಿಲ್ಲ, ಅದು ನಿಮಗೆ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:7
11 ತಿಳಿವುಗಳ ಹೋಲಿಕೆ  

ಅವರು ತಮ್ಮ ವಿಶೇಷವಾದ ತೋಟದೊಳಗೆ ಪೂಜೆಮಾಡಲು ತಮ್ಮನ್ನು ಶುದ್ಧಮಾಡಿಕೊಳ್ಳುವಂತೆ ಸ್ನಾನಮಾಡುವರು. ತಮ್ಮ ವಿಶೇಷ ತೋಟದೊಳಗೆ ಹೋಗಲು ಒಬ್ಬರನ್ನೊಬ್ಬನು ಹಿಂಬಾಲಿಸುವರು. ಅಲ್ಲಿ ಅವರ ವಿಗ್ರಹಗಳನ್ನು ಪೂಜಿಸುವರು. ಆದರೆ ಯೆಹೋವನು ಅವರೆಲ್ಲರನ್ನು ನಾಶಮಾಡುವನು. “ಆ ಜನರು ಹಂದಿ, ಇಲಿ ಮತ್ತು ಇತರ ಅಶುದ್ಧ ಪ್ರಾಣಿಗಳ ಮಾಂಸವನ್ನು ತಿನ್ನುತ್ತಾರೆ. ಆದರೆ ಅವರೆಲ್ಲರೂ ಒಟ್ಟಾಗಿ ನಾಶವಾಗುವರು.” ಇದು ಯೆಹೋವನು ಹೇಳಿದ ಮಾತುಗಳು.


ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.


ಅವರು ಸತ್ತವರಿಂದ ಸಂದೇಶ ಪಡೆಯಲು ಸಮಾಧಿಗಳ ನಡುವೆ ಕುಳಿತುಕೊಳ್ಳುವರು. ಅವರು ಹಂದಿ ಮಾಂಸವನ್ನು ತಿನ್ನುತ್ತಾರೆ. ಅವರು ತೆಗೆದುಕೊಳ್ಳುವ ಭಕ್ಷ್ಯಗಳು ಕೊಳೆತ ಮಾಂಸದಿಂದ ಮಲಿನವಾಗಿವೆ.


ನೀವು ಹಂದಿಗಳನ್ನು ತಿನ್ನಬಾರದು. ಅವುಗಳ ಗೊರಸುಗಳು ಸೀಳಿವೆ; ಆದರೆ ಅವುಗಳು ಮೆಲುಕು ಹಾಕುವುದಿಲ್ಲ. ಆದ್ದರಿಂದ ಹಂದಿಯು ನಿಮಗೆ ಶುದ್ಧ ಆಹಾರವಾಗುವುದಿಲ್ಲ; ಹಂದಿಯ ಹೆಣವನ್ನೂ ನೀವು ಮುಟ್ಟಬಾರದು.


ಆದ್ದರಿಂದ ಅವನು ಆ ದೇಶದ ನಿವಾಸಿಯೊಬ್ಬನ ಬಳಿ ಕೂಲಿಕೆಲಸಕ್ಕೆ ಸೇರಿಕೊಂಡನು. ಆ ಮನುಷ್ಯನು ಹಂದಿ ಮೇಯಿಸುವುದ್ಕಕಾಗಿ ಅವನನ್ನು ಹೊಲಕ್ಕೆ ಕಳುಹಿಸಿದನು.


ಆಗ ದೆವ್ವಗಳು ಆ ಮನುಷ್ಯನಿಂದ ಹೊರಬಂದು ಹಂದಿಗಳೊಳಗೆ ಸೇರಿಕೊಂಡವು. ಆ ಕೂಡಲೇ ಹಂದಿಗಳ ಗುಂಪು ಗುಡ್ಡದ ಕೆಳಗೆ ಓಡಿಹೋಗಿ ಸರೋವರದಲ್ಲಿ ಬಿದ್ದು ಮುಳುಗಿಹೋದವು.


“ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.


ಕಾಲ್ಗೊರಸು ಸೀಳಿರುವ ಮತ್ತು ಮೆಲಕು ಹಾಕುವ ಮಾಂಸವನ್ನು ತಿನ್ನಬಹುದು.


ಅವುಗಳ ಮಾಂಸವನ್ನು ತಿನ್ನಕೂಡದು. ಅವುಗಳ ಮೃತಶರೀರಗಳನ್ನು ಸಹ ಮುಟ್ಟಬಾರದು. ಅವು ನಿಮಗೆ ಅಶುದ್ಧ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು