Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 12:3 - ಪರಿಶುದ್ದ ಬೈಬಲ್‌

3 ಎಂಟನೆಯ ದಿನದಲ್ಲಿ ಆ ಗಂಡುಮಗುವಿಗೆ ಸುನ್ನತಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎಂಟನೆಯ ದಿನ ಆ ಮಗುವಿಗೆ ಸುನ್ನತಿ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎಂಟನೆಯ ದಿನದಲ್ಲಿ ಮಗುವಿಗೆ ಸುನ್ನತಿ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 12:3
15 ತಿಳಿವುಗಳ ಹೋಲಿಕೆ  

ಮಗುವಿಗೆ ಎಂಟು ದಿನವಾದಾಗ ಸುನ್ನತಿ ಆಯಿತು ಮತ್ತು ಆತನಿಗೆ “ಯೇಸು” ಎಂದು ಹೆಸರಿಡಲಾಯಿತು. ಮರಿಯಳ ಗರ್ಭದಲ್ಲಿ ಮಗುವು ಬೆಳೆಯುವುದಕ್ಕೆ ಪ್ರಾರಂಭಿಸುವ ಮೊದಲೇ ದೇವದೂತನು ಈ ಹೆಸರನ್ನೇ ಕೊಡಬೇಕೆಂದು ಸೂಚಿಸಿದ್ದನು.


ಮಗುವಿಗೆ ಎಂಟು ದಿನವಾದಾಗ ಅವರು ಸುನ್ನತಿ ಮಾಡಿಸುವುದಕ್ಕಾಗಿ ಬಂದರು. ಅವರು ಆ ಮಗುವಿಗೆ “ಜಕರೀಯ” ಎಂಬ ಹೆಸರು ಇಡಬೇಕೆಂದಿದ್ದರು. ಏಕೆಂದರೆ ಅದು ಮಗುವಿನ ತಂದೆಯ ಹೆಸರಾಗಿತ್ತು.


ಕ್ರಿಸ್ತನಲ್ಲಿ ನೀವು ಬೇರೊಂದು ಸುನ್ನತಿಯನ್ನು ಪಡೆದಿರುವಿರಿ. ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ. ಅಂದರೆ ನಿಮ್ಮ ಪಾಪಾಧೀನಸ್ವಭಾವದಿಂದ ನಿಮಗೆ ಬಿಡುಗಡೆಯಾಯಿತು. ಇದುವೇ ಕ್ರಿಸ್ತನು ಮಾಡುವ ಸುನ್ನತಿ.


ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು. ನಾನು ಇಸ್ರೇಲ್ ವಂಶದವನು ಮತ್ತು ಬೆನ್ಯಾಮೀನನ ಕುಲದವನು. ನಾನು ಇಬ್ರಿಯನು ಮತ್ತು ನನ್ನ ತಂದೆತಾಯಿಗಳು ಸಹ ಇಬ್ರಿಯರು. ನಾನು ಮೋಶೆಯ ಧರ್ಮಶಾಸ್ತ್ರವನ್ನು ಮುಖ್ಯವಾದದ್ದೆಂದು ಪರಿಗಣಿಸಿ ಫರಿಸಾಯನಾದೆನು;


ಮತ್ತೆ ನಾನು ಪ್ರತಿಯೊಬ್ಬನನ್ನೂ ಎಚ್ಚರಿಸುತ್ತೇನೆ. ನೀವು ಸುನ್ನತಿ ಮಾಡಿಸಿಕೊಂಡರೆ, ಧರ್ಮಶಾಸ್ತ್ರವನ್ನೆಲ್ಲಾ ಅನುಸರಿಸಬೇಕು.


ನಾನು ಹೇಳುತ್ತಿರುವುದೇನೆಂದರೆ, ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದನು. ಆದ್ದರಿಂದ ನಾನೂರಮೂವತ್ತು ವರ್ಷಗಳಾದ ನಂತರ ಬಂದ ಧರ್ಮಶಾಸ್ತ್ರವು ಅಬ್ರಹಾಮನಿಗೆ ದೇವರು ಮಾಡಿದ ವಾಗ್ದಾನವನ್ನು ರದ್ದುಪಡಿಸುವುದೂ ಇಲ್ಲ ಬದಲಾಯಿಸುವುದೂ ಇಲ್ಲ.


ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.


ನೀವು ಮತ್ತು ನಿಮ್ಮ ಸಂತತಿಯವರು ತನಗೆ ವಿಧೇಯರಾಗುವಂತೆ ನಮ್ಮ ದೇವರಾದ ಯೆಹೋವನು ಮಾಡುತ್ತಾನೆ. ಆಗ ನೀವು ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದ ಪ್ರೀತಿಸುವಿರಿ ಮತ್ತು ಜೀವಿಸುವಿರಿ.


ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು.


ಮಾತ್ರವಲ್ಲದೆ, ನಿಮ್ಮ ಕುರಿದನಗಳಲ್ಲಿ ಚೊಚ್ಚಲಾದವುಗಳನ್ನು ನನಗೆ ಅರ್ಪಿಸಬೇಕು. ಚೊಚ್ಚಲಾದವುಗಳು ತನ್ನ ತಾಯಿಯೊಂದಿಗೆ ಏಳು ದಿನಗಳಿರಲಿ. ಬಳಿಕ, ಎಂಟನೆಯ ದಿನದಲ್ಲಿ ನೀವು ಅದನ್ನು ನನಗೆ ಅರ್ಪಿಸಬೇಕು.


ಆಮೇಲೆ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗಲು ಮೂವತ್ತುಮೂರು ದಿನಗಳು ಹಿಡಿಯುವುದು. ಆಕೆ ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ಆಕೆಯ ಶುದ್ಧೀಕರಣ ಪೂರ್ತಿಯಾಗುವವರೆಗೆ ಆಕೆ ಪವಿತ್ರಸ್ಥಳವನ್ನು ಪ್ರವೇಶಿಸಬಾರದು.


ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಅವನು ಅಶುದ್ಧನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು