Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:10 - ಪರಿಶುದ್ದ ಬೈಬಲ್‌

10 ಯಾಜಕನು ಆ ವ್ಯಕ್ತಿಯನ್ನು ನೋಡಬೇಕು. ಚರ್ಮದ ಮೇಲೆ ಬೆಳ್ಳಗಾದ ಊತವಿದ್ದರೆ, ರೋಮವು ಬೆಳ್ಳಗಾಗಿದ್ದರೆ ಮತ್ತು ಚರ್ಮವು ಊತದಿಂದ ಹಸಿಯಾಗಿ ಕಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಬಾವಿನಲ್ಲಿ ಮಾಂಸ ಕಾಣಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಜಕನು ಅವನನ್ನು ನೋಡುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿಹೋಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯಾಜಕನು ಅವನನ್ನು ಪರೀಕ್ಷಿಸಬೇಕು, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು, ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿ ಮಾಂಸವು ಇದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:10
12 ತಿಳಿವುಗಳ ಹೋಲಿಕೆ  

ಈಗ, ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ನಾಮಾನನ ರೋಗವು ಹಿಡಿದುಕೊಳ್ಳುವುದು. ನಿನಗೆ ಎಂದೆಂದಿಗೂ ಕುಷ್ಠರೋಗವಿರುವುದು!” ಎಂದು ಹೇಳಿದನು. ಗೇಹಜಿಯು ಎಲೀಷನನ್ನು ಬಿಟ್ಟುಹೋದಾಗ, ಗೇಹಜಿಯ ಚರ್ಮವು ಮಂಜುಗಡ್ಡೆಯಂತೆ ಬಿಳುಪಾಯಿತು! ಗೇಹಜಿಯು ಕುಷ್ಠರೋಗ ಪೀಡಿತನಾದನು.


ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.


ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು.


ಶಿಸ್ತನ್ನು ಇಷ್ಟಪಡುವವನು ಕಲಿಯಲು ಇಷ್ಟಪಡುತ್ತಾನೆ; ತಿದ್ದುಪಡಿಯನ್ನು ದ್ವೇಷಿಸುವವನು ಬುದ್ಧಿಹೀನ.


“ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದ ಸುಟ್ಟಗಾಯ ಉಂಟಾಗಬಹುದು. ಹಸಿಯಾದ ಚರ್ಮವು ಬೆಳ್ಳಗಾಗಿದ್ದರೆ, ಕೆಂಪುಬಿಳುಪು ಮಿಶ್ರವಾದ ಮಚ್ಚೆಯುಳ್ಳದ್ದಾಗಿದ್ದರೆ, ಯಾಜಕನು ಅದನ್ನು ಪರೀಕ್ಷಿಸಬೇಕು. ಆ ಬಿಳಿ ಕಲೆ ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಆ ಕಲೆಯಲ್ಲಿನ ರೋಮವು ಬೆಳ್ಳಗಾಗಿದ್ದರೆ, ಅದು ಕುಷ್ಠರೋಗವಾಗಿದೆ. ಆ ಕುಷ್ಠವು ಸುಟ್ಟಗಾಯದಲ್ಲಿ ಹುಟ್ಟಿದ್ದಾಗಿದೆ. ಆಗ ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.


“ಒಬ್ಬನಿಗೆ ಕುಷ್ಠವಿದ್ದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.


ಅದು ಬಹಳ ಕಾಲದಿಂದ ಅವನ ಚರ್ಮದಲ್ಲಿರುವ ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಯಾಜಕನು ಅವನನ್ನು ಪರೀಕ್ಷಿಸುವುದಕ್ಕಾಗಿ ಸ್ವಲ್ಪ ಸಮಯದವರೆಗೆ ಜನರಿಂದ ಪ್ರತ್ಯೇಕಿಸುವುದಿಲ್ಲ. ಯಾಕೆಂದರೆ ಆ ವ್ಯಕ್ತಿಯು ಈಗಾಗಲೇ ಅಶುದ್ಧನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು