Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:23 - ಪರಿಶುದ್ದ ಬೈಬಲ್‌

23 ಆದರೆ ಹೊಳೆಯುವ ಮಚ್ಚೆಯು ತನ್ನ ಸ್ಥಳದಲ್ಲಿಯೇ ಇದ್ದು ಹರಡದಿದ್ದರೆ, ಆಗ ಅದು ಕೇವಲ ಹುಣ್ಣಿನ ಮಚ್ಚೆಯಾಗಿದೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಆ ಹೊಳಪಾದ ಕಲೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು, ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:23
13 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.


ಆದರೆ ಈಗ ನೀವು ಅವನನ್ನು ಕ್ಷಮಿಸಬೇಕು ಮತ್ತು ಸಂತೈಸಬೇಕು. ಆಗ ಅವನು ಅತೀವ ದುಃಖದಿಂದ ಸಂಪೂರ್ಣವಾಗಿ ಸೋತುಹೋಗಲು ಸಾಧ್ಯವಾಗುವುದಿಲ್ಲ.


“ಆತನು ಯಾರೋ ನನಗೆ ಗೊತ್ತೇ ಇಲ್ಲ ಎಂಬುದಾಗಿ ಕೋಳಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಲ ಹೇಳುವೆ” ಎಂದು ತನಗೆ ಯೇಸು ಹೇಳಿದ್ದ ಮಾತನ್ನು ಪೇತ್ರನು ನೆನಪು ಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.


ಯೆಹೂದನು ಆ ವಸ್ತುಗಳನ್ನು ಗುರುತಿಸಿ, “ಆಕೆ ಸರಿಯಾದದ್ದನ್ನೇ ಮಾಡಿದ್ದಾಳೆ. ನಾನೇ ತಪ್ಪು ಮಾಡಿದೆ. ನಾನು ಆಕೆಗೆ ಮಾತುಕೊಟ್ಟಂತೆ ನನ್ನ ಮಗನಾದ ಶೇಲಹನನ್ನು ಆಕೆಗೆ ಕೊಡಬೇಕಿತ್ತು” ಎಂದು ಹೇಳಿದನು. ಆದರೆ ಯೆಹೂದನು ಆಕೆಯೊಡನೆ ಮತ್ತೆ ಮಲಗಿಕೊಳ್ಳಲಿಲ್ಲ.


ಮಚ್ಚೆಯು ಚರ್ಮದಲ್ಲಿ ಹರಡಿದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಸೋಂಕುರೋಗವಾಗಿದೆ.


“ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದ ಸುಟ್ಟಗಾಯ ಉಂಟಾಗಬಹುದು. ಹಸಿಯಾದ ಚರ್ಮವು ಬೆಳ್ಳಗಾಗಿದ್ದರೆ, ಕೆಂಪುಬಿಳುಪು ಮಿಶ್ರವಾದ ಮಚ್ಚೆಯುಳ್ಳದ್ದಾಗಿದ್ದರೆ, ಯಾಜಕನು ಅದನ್ನು ಪರೀಕ್ಷಿಸಬೇಕು. ಆ ಬಿಳಿ ಕಲೆ ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಆ ಕಲೆಯಲ್ಲಿನ ರೋಮವು ಬೆಳ್ಳಗಾಗಿದ್ದರೆ, ಅದು ಕುಷ್ಠರೋಗವಾಗಿದೆ. ಆ ಕುಷ್ಠವು ಸುಟ್ಟಗಾಯದಲ್ಲಿ ಹುಟ್ಟಿದ್ದಾಗಿದೆ. ಆಗ ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.


ಆದರೆ ಯಾಜಕನು ಮಚ್ಚೆಯನ್ನು ನೋಡಲಾಗಿ ಹೊಳೆಯುವ ಮಚ್ಚೆಯಲ್ಲಿ ಬಿಳಿರೋಮವಿಲ್ಲದೆ ಮತ್ತು ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿಲ್ಲದೆ ಮೊಬ್ಬಾಗಿ ಹೋಗುತ್ತಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು