Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:29 - ಪರಿಶುದ್ದ ಬೈಬಲ್‌

29 “ಒಬ್ಬ ಗಂಡಸಿನ ಅಥವಾ ಹೆಂಗಸಿನ ತಲೆಯ ನೆತ್ತಿಯಲ್ಲಿ ಅಥವಾ ಗಡ್ಡದಲ್ಲಿ ಸೋಂಕು ತಗಲಿ ಕಲೆ ಉಂಟಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಹೆಂಗಸಿನ ತಲೆಯಲ್ಲಿ ಆಗಲಿ, ಗಂಡಸಿನ ತಲೆಯಲ್ಲಿ ಆಗಲಿ ಅಥವಾ ಗಡ್ಡದ ಮೇಲೆ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಹೆಂಗಸಿನ ತಲೆಯಲ್ಲಾಗಲಿ ಗಂಡಸಿನ ತಲೆಯಲ್ಲಿ ಅಥವಾ ಗಡ್ಡದಲ್ಲಾಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಿ ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹೆಂಗಸಿನ ತಲೆಯಲ್ಲಿ ಆಗಲಿ ಗಂಡಸಿನ ತಲೆಯಲ್ಲಿ ಅಥವಾ ಗಡ್ಡದಲ್ಲಿ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಒಬ್ಬ ಪುರುಷನಿಗಾಗಲಿ ಇಲ್ಲವೆ ಸ್ತ್ರೀಗಾಗಲಿ ವ್ಯಾಧಿಯು ತಲೆಯ ಮೇಲಾಗಲಿ, ಗಡ್ಡದ ಮೇಲಾಗಲಿ ಕಲೆ ಇದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:29
19 ತಿಳಿವುಗಳ ಹೋಲಿಕೆ  

ಆದರೆ ನಿನ್ನ ಕಣ್ಣು ಕೆಟ್ಟಿದ್ದರೆ, ನಿನ್ನ ಶರೀರವೆಲ್ಲ ಕತ್ತಲೆಯಿಂದ (ಪಾಪದಿಂದ) ತುಂಬಿರುವುದು. ನಿನ್ನಲ್ಲಿರುವ ಒಂದೇ ಬೆಳಕು ನಿಜವಾಗಿಯೂ ಕತ್ತಲಾದರೆ, ಆಗ ನೀನು ಕಗ್ಗತ್ತಲಲ್ಲಿರುವೆ.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ತಲೆ ಅಂದರೆ ಹಿರಿಯರು ಮತ್ತು ಪ್ರಮುಖರು. ಬಾಲವೆಂದರೆ ಸುಳ್ಳುಪ್ರವಾದಿಗಳು.


ಆ ಜನರು ಒಳ್ಳೆಯವುಗಳನ್ನು ಕೆಟ್ಟವುಗಳೆಂದೂ ಕೆಟ್ಟವುಗಳನ್ನು ಒಳ್ಳೆಯವುಗಳೆಂದೂ ಹೇಳುತ್ತಾರೆ. ಅವರು ಬೆಳಕನ್ನು ಕತ್ತಲೆಯೆಂದೂ ಕತ್ತಲೆಯನ್ನು ಬೆಳಕೆಂದೂ ಅನ್ನುತ್ತಾರೆ. ಅವರು ಸಿಹಿಯನ್ನು ಕಹಿಯೆಂದೂ ಕಹಿಯನ್ನು ಸಿಹಿಯೆಂದೂ ಹೇಳುವರು.


ನಾನು ನಿಮ್ಮನ್ನು ಯಾಕೆ ಶಿಕ್ಷಿಸುತ್ತಲೇ ಇರಬೇಕು? ನಾನು ನಿಮ್ಮನ್ನು ಶಿಕ್ಷಿಸಿದೆನು, ಆದರೆ ನೀವು ಬದಲಾಗಲಿಲ್ಲ. ನೀವು ನನಗೆ ವಿರುದ್ಧವಾಗಿ ಏಳುತ್ತಲೇ ಇದ್ದೀರಿ. ಈಗ ಪ್ರತಿಯೊಂದು ತಲೆಯೂ ಪ್ರತಿಯೊಂದು ಹೃದಯವೂ ರೋಗಕ್ಕೆ ಬಲಿಯಾಗಿದೆ.


ದೇವರು ಹೀಗೆನ್ನುತ್ತಾನೆ: “ಆ ದುಷ್ಟರಿಗೆ ಖಂಡಿತವಾಗಿ ಸತ್ಯವು ತಿಳಿದಿದೆ! ಆದರೆ ಅವರು ನನ್ನಲ್ಲಿ ಪ್ರಾರ್ಥಿಸುತ್ತಿಲ್ಲ. ಆಹಾರ ತಿನ್ನುವಂತೆ ಅವರು ನನ್ನ ಜನರನ್ನು ನಾಶಮಾಡಲು ಸಿದ್ಧರಾಗಿದ್ದಾರೆ.”


ತಮ್ಮ ಸಂಕಟಗಳ ಕುರಿತು ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಮೊರೆಯಿಡುವದಾದರೆ,


ಬಳಿಕ ರಾಜನು ಈಗ ತಾನೇನು ಮಾಡಬೇಕೆಂದು ತನ್ನ ಸಲಹೆಗಾರರನ್ನು ಕೇಳಿದನು. ಅವರು ತಮ್ಮ ಸಲಹೆಯನ್ನು ಅವನಿಗೆ ನೀಡಿದರು. ಯಾರೊಬ್ಬಾಮನು ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ನೀವು ಆರಾಧಿಸಲು ಜೆರುಸಲೇಮಿಗೆ ಹೋಗಲೇಬಾರದು. ಇಸ್ರೇಲರೇ, ನಿಮ್ಮನ್ನು ಈಜಿಪ್ಟಿನಿಂದ ಹೊರತಂದ ದೇವರುಗಳು ಇಲ್ಲಿವೆ” ಎಂದು ಹೇಳಿದನು.


ಈ ಕಾರ್ಯಗಳಲ್ಲಿ ಯಾವುದಾದರೊಂದು ಸಂಭವಿಸಿದಾಗ, ಒಬ್ಬ ಮನುಷ್ಯನು ಮಾತ್ರ ತನ್ನ ಪಾಪಕ್ಕಾಗಿ ಕ್ಷಮೆಯನ್ನು ಯಾಚಿಸಿ ಈ ಆಲಯದ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದರೆ,


ಆದರೆ ಹೊಳೆಯುವ ಮಚ್ಚೆಯು ಚರ್ಮದ ಮೇಲೆ ಉಂಟಾದ ಊತವಾಗಿದೆ. ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅದು ಕೇವಲ ಸುಟ್ಟಗಾಯದಿಂದ ಉಂಟಾದ ಮಚ್ಚೆಯಾಗಿದೆ.


ಯಾಜಕನು ಆ ಕಲೆಯನ್ನು ನೋಡಬೇಕು. ಸೋಂಕಿನ ಕಲೆಯು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರಲ್ಲಿರುವ ರೋಮವು ತೆಳ್ಳಗಾಗಿಯೂ ಹಳದಿಯಾಗಿಯೂ ಇದ್ದರೆ, ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ತಲೆಯ ಅಥವಾ ಗಡ್ಡದ ಕೆಟ್ಟ ಚರ್ಮರೋಗವಾಗಿದೆ.


ಇದನ್ನು ಕೇಳಿದೊಡನೆ ನನ್ನ ಮನಸ್ಸಿನ ದುಃಖವನ್ನು ತೋರಿಸುವಂತೆ ನನ್ನ ಬಟ್ಟೆಯನ್ನು ಹರಿದು ಹಾಕಿದೆನು. ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕೆದರಿಕೊಂಡು ದಿಗ್ಭ್ರಮೆಗೊಂಡವನಾಗಿಯೂ ಬೇಸರಗೊಂಡವನಾಗಿಯೂ ಕುಳಿತುಕೊಂಡೆನು.


“ನರಪುತ್ರನೇ, ಈ ಕಾರ್ಯಗಳನ್ನು ಮುತ್ತಿಗೆಯ ಕಾಲ ಮುಗಿಯಿತೆಂದು ಸೂಚಿಸುವ ಅವಧಿಯ ನಂತರ ಮಾಡಬೇಕು. ನೀನು ಕ್ಷೌರಕನ ಹರಿತವಾದ ಕ್ಷೌರಕತ್ತಿಯನ್ನು ತೆಗೆದುಕೊಳ್ಳಬೇಕು. ನಿನ್ನ ತಲೆಯ ಕೂದಲನ್ನೂ ಗಡ್ಡವನ್ನೂ ಬೋಳಿಸು. ಕೂದಲನ್ನು ತ್ರಾಸಿನಲ್ಲಿ ಹಾಕಿ ಅದನ್ನು ತೂಕ ಮಾಡು. ಆ ಕೂದಲುಗಳನ್ನು ಮೂರು ಪಾಲಾಗಿ ಮಾಡು. ಅದರ ಒಂದು ಪಾಲನ್ನು ನೀನು ಚಿತ್ರಿಸಿದ್ದ ಇಟ್ಟಿಗೆಯ ಮೇಲೆ ಹಾಕು. ಆ ನಗರದ ಮೇಲೆ ಕೂದಲನ್ನು ಸುಟ್ಟುಬಿಡು. ಇದು, ಜನರಲ್ಲಿ ಕೆಲವು ಮಂದಿ ನಗರದಲ್ಲಿ ಸಾಯುವರು ಎಂಬುದಕ್ಕೆ ಗುರುತಾಗಿದೆ. ನೀನು ಕೂದಲಲ್ಲಿ ಮೂರನೆ ಒಂದು ಭಾಗವನ್ನು ತೆಗೆದುಕೊಂಡು ಅದನ್ನು ಪಟ್ಟಣದ ಹೊರಗೆ ಸುತ್ತಲೆಲ್ಲಾ ನಿನ್ನ ಕ್ಷೌರಕತ್ತಿಯಿಂದ ಕತ್ತರಿಸು. ಕೆಲವು ಜನರು ಪಟ್ಟಣದ ಹೊರಗೆ ಸಾಯುತ್ತಾರೆ ಎಂಬುದನ್ನು ಇದು ಸೂಚಿಸುತ್ತದೆ. ಬಳಿಕ ನಿನ್ನ ಕೂದಲಿನ ಉಳಿದ ಮೂರನೆಯ ಒಂದು ಭಾಗವನ್ನು ಗಾಳಿಯಲ್ಲಿ ತೂರಿಬಿಡು. ಗಾಳಿಯು ಅದನ್ನು ಬಹುದೂರದವರೆಗೆ ಬಡಿದುಕೊಂಡು ಹೋಗಲಿ. ಇದೇ ರೀತಿಯಲ್ಲಿ ನಾನು ಖಡ್ಗವನ್ನು ಇರಿದು ಅವರನ್ನು ಬಹುದೂರದ ದೇಶಗಳಿಗೆ ಅಟ್ಟಿಸಿ ಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು