Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:46 - ಪರಿಶುದ್ದ ಬೈಬಲ್‌

46 ಆ ವ್ಯಕ್ತಿಯು ತನಗೆ ರೋಗವಿರುವ ಕಾಲವೆಲ್ಲಾ ಅಶುದ್ಧನಾಗಿರುವನು. ಆ ವ್ಯಕ್ತಿಯು ಅಶುದ್ಧನಾಗಿದ್ದಾನೆ. ಅವನು ಒಂಟಿಯಾಗಿ ವಾಸಿಸಬೇಕು. ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸ ಪಾಳೆಯದ ಹೊರಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಆ ವ್ಯಾಧಿ ಅವನಲ್ಲಿ ಇರುವಷ್ಟು ದಿನಗಳೂ ಅವನು ಅಶುದ್ಧನಾಗಿರುವನು. ಅವನು ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:46
22 ತಿಳಿವುಗಳ ಹೋಲಿಕೆ  

ನಗರದ ಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು, “ನಾವು ಸಾಯುವುದನ್ನೇ ಕಾಯುತ್ತಾ ಕುಳಿತಿರುವುದೇಕೆ?


ರಾಜನಾದ ಅಜರ್ಯನು ಕುಷ್ಠರೋಗ ಪೀಡಿತನಾಗುವಂತೆ ಯೆಹೋವನು ಮಾಡಿದನು. ಅವನು ಸಾಯುವವರೆಗೂ ಕುಷ್ಠರೋಗಿಯಾಗಿಯೇ ಇದ್ದನು. ಅಜರ್ಯನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸುತ್ತಿದ್ದನು. ರಾಜನ ಮಗನಾದ ಯೋತಾಮನು ರಾಜನ ಅರಮನೆಯನ್ನು ನೋಡಿಕೊಳ್ಳುತ್ತಿದ್ದನು ಮತ್ತು ಜನರನ್ನು ಪಾಲಿಸುತ್ತಿದ್ದನು.


ಅರಸನಾದ ಉಜ್ಜೀಯನು ಕುಷ್ಠರೋಗಿಯಾದುದರಿಂದ ಅವನು ಯೆಹೋವನ ಆಲಯವನ್ನು ಪ್ರವೇಶಿಸಲಾಗಲಿಲ್ಲ. ಅವನು ದೂರದಲ್ಲಿದ್ದ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಿದನು. ಅವನ ಮಗನಾದ ಯೋತಾಮನು ಪ್ರಜಾಪಾಲನೆ ಮಾಡಿದನು.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.


ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.


ಈ ಪತ್ರದ ಮೂಲಕ ನಿಮಗೆ ತಿಳಿಸಿರುವ ಮಾತುಗಳಿಗೆ ಯಾವನಾದರೂ ವಿಧೇಯನಾಗದಿದ್ದರೆ, ಅವನು ಯಾರೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಅವನ ಸಹವಾಸಮಾಡಬೇಡಿ. ಆಗ ಅವನಿಗೆ ನಾಚಿಕೆ ಆಗಬಹುದು.


ಸಹೋದರ ಸಹೋದರಿಯರೇ, ಕೆಲಸ ಮಾಡದ ವಿಶ್ವಾಸಿಯಿಂದ ನೀವು ದೂರವಿರಬೇಕೆಂದು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಧಿಕಾರದಿಂದ ನಿಮಗೆ ಆಜ್ಞಾಪಿಸುತ್ತಿದ್ದೇವೆ. ನಾವು ನೀಡಿದ ಉಪದೇಶವನ್ನು ಅವರು ಅನುಸರಿಸುವುದಿಲ್ಲ.


ಆ ಮನುಷ್ಯನ ಪಾಪಸ್ವಭಾವವು ನಾಶವಾಗುವುದಕ್ಕಾಗಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಿರಿ. ಆಗ ಪ್ರಭುವಿನ ದಿನದಂದು ಅವನ ಜೀವಾತ್ಮವು ರಕ್ಷಣೆಹೊಂದಲು ಸಾಧ್ಯವಾಗುವುದು.


ಅಲ್ಲಿ ಆತನು ಒಂದು ಗ್ರಾಮಕ್ಕೆ ಬಂದನು. ಅಲ್ಲಿ ಹತ್ತು ಜನರು ಆತನನ್ನು ಭೇಟಿಯಾದರು. ಅವರು ಯೇಸುವಿನ ಸಮೀಪಕ್ಕೆ ಬರಲಿಲ್ಲ. ಏಕೆಂದರೆ ಅವರೆಲ್ಲರೂ ಕುಷ್ಠರೋಗಿಗಳಾಗಿದ್ದರು.


ಜೆರುಸಲೇಮ್ ಮಹಾಪಾಪ ಮಾಡಿತು. ಜೆರುಸಲೇಮ್ ಭಯಂಕರ ಪಾಪ ಮಾಡಿದ್ದಕ್ಕಾಗಿ ಅವಳು ಹಾಳುಬಿದ್ದ ನಗರವಾದಳು. ಜನರು ಅವಳನ್ನು ಹೀನೈಸುವಂತಾಗಿದೆ. ಮೊದಲು ಅವಳನ್ನು ಗೌರವಿಸುತ್ತಿದ್ದ ಎಲ್ಲ ಜನ ಈಗ ಅವಳನ್ನು ತಿರಸ್ಕರಿಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆ ದೇಹವನ್ನು ನೋಡಿದರು. ಜೆರುಸಲೇಮ್ ನರಳಾಡುತ್ತಿದ್ದಾಳೆ. ಅವಳು ನಾಚಿಕೆಯಿಂದ ತನ್ನ ಮುಖವನ್ನು ತಗ್ಗಿಸಿಕೊಂಡಿದ್ದಾಳೆ.


ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.


ಕೆಲವರು ತಮ್ಮನ್ನು ಶುದ್ಧರೆಂದು ಯೋಚಿಸುವರು. ಆದರೆ ಅವರು ತಮ್ಮ ಹೊಲಸಿನಿಂದ ಶುದ್ಧೀಕರಿಸಲ್ಪಟ್ಟಿಲ್ಲ.


“ಕೆಲವು ಬಟ್ಟೆಗಳಲ್ಲಿ ಬೂಷ್ಟು ಇರಬಹುದು. ಅದು ನಾರಿನ ಬಟ್ಟೆಯಾಗಲಿ ಉಣ್ಣೆ ಬಟ್ಟೆಯಾಗಲಿ ಆಗಿರಬಹುದು. ಅದು ಹೆಣೆದ ಅಥವಾ ಹೊಲಿದ ಬಟ್ಟೆಯಾಗಿರಬಹುದು. ಚರ್ಮದಿಂದ ಮಾಡಿದ ವಸ್ತುವಿನ ಮೇಲೂ ಬೂಷ್ಟು ಇರಬಹುದು.


ಯಾಜಕನು ಪಾಳೆಯದ ಹೊರಗೆ ಹೋಗಿ ಆ ವ್ಯಕ್ತಿಯ ಚರ್ಮರೋಗ ವಾಸಿಯಾಗಿದೆಯೋ ಇಲ್ಲವೋ ಎಂದು ನೋಡಬೇಕು.


“ಈ ದಿನದಲ್ಲಿ ಯಾವನಾದರೂ ಉಪವಾಸ ಮಾಡದಿದ್ದರೆ ಅವನನ್ನು ಅವನ ಕುಲದಿಂದ ತೆಗೆದುಹಾಕಬೇಕು.


ಯೋವಾಬನು ಮತ್ತು ಅವನ ವಂಶದವರು ಇದಕ್ಕೆ ಜವಾಬ್ದಾರರು. ಅವನ ವಂಶದವರನ್ನು ಇದಕ್ಕಾಗಿ ದೂಷಿಸಬೇಕು. ಯೋವಾಬನ ವಂಶಕ್ಕೆ ಅನೇಕ ಕಷ್ಟಗಳು ಬರಲಿ. ಅವನ ವಂಶದವರಲ್ಲಿ ಕುಷ್ಠರೋಗಿಗಳು, ಊರುಗೋಲು ಬಳಸುವವರು. ಕತ್ತಿಯಿಂದ ಸಾಯುವವರು, ಭಿಕ್ಷೆ ಬೇಡುವವರು ಇದ್ದೇ ಇರಲಿ” ಎಂದು ಹೇಳಿದನು.


“ತೊಲಗಿಹೋಗಿ! ತೊಲಗಿಹೋಗಿ! ನಮ್ಮನ್ನು ಮುಟ್ಟಬೇಡಿ” ಎಂದು ಜನರು ಕೂಗಿಕೊಂಡರು. ಆ ಜನರು ಅಲೆದಾಡುತ್ತಿದ್ದರು. ಅವರಿಗೆ ಸ್ಥಳವಿರಲಿಲ್ಲ. ಬೇರೆ ಜನಾಂಗಗಳ ಜನರು, “ಅವರು ನಮ್ಮೊಂದಿಗೆ ವಾಸಿಸುವುದು ನಮಗೆ ಬೇಕಿಲ್ಲ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು