Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:6 - ಪರಿಶುದ್ದ ಬೈಬಲ್‌

6 ಏಳು ದಿನಗಳ ನಂತರ ಯಾಜಕನು ಮತ್ತೆ ಅವನನ್ನು ನೋಡಬೇಕು. ಮಚ್ಚೆಯು ಮೊಬ್ಬಾಗಿ ಚರ್ಮದಲ್ಲಿ ಹರಡದೆ ಇದ್ದರೆ, ಆಗ ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು. ಯಾಕೆಂದರೆ ಮಚ್ಚೆಯು ಕೇವಲ ಗುಳ್ಳೆಯಾಗಿದೆ. ಆ ವ್ಯಕ್ತಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ತಿರುಗಿ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಏಳು ದಿನಗಳಾದ ಮೇಲೆ ಯಾಜಕನು ಪುನಃ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಏಳು ದಿನಗಳಾದ ಮೇಲೆ ಯಾಜಕನು ಮತ್ತೆ, ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಕೇವಲ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಏಳು ದಿನಗಳಾದ ಮೇಲೆ ಯಾಜಕನು ತಿರಿಗಿ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾಜಕನು ಅವನನ್ನು ಏಳನೆಯ ದಿನದಲ್ಲಿ ಪರೀಕ್ಷಿಸಬೇಕು. ಆಗ ವ್ಯಾಧಿಯು ಸ್ವಲ್ಪ ಕಪ್ಪಾಗಿದ್ದು, ಚರ್ಮದಲ್ಲೆಲ್ಲಾ ಹರಡಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:6
23 ತಿಳಿವುಗಳ ಹೋಲಿಕೆ  

ಯಾವನಾದರೂ ಆ ಸತ್ತ ಕ್ರಿಮಿಕೀಟಗಳಲ್ಲಿ ಒಂದನ್ನು ಎತ್ತಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದ ತನಕ ಅಶುದ್ಧನಾಗಿರುವನು.


“ಬಳಿಕ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸರ್ವಾಂಗಕ್ಷೌರ ಮಾಡಿಕೊಂಡು ಸ್ನಾನ ಮಾಡಬೇಕು. ಆಗ ಅವನು ಶುದ್ಧನಾಗುವನು. ಬಳಿಕ ಆ ವ್ಯಕ್ತಿ ಪಾಳೆಯದೊಳಗೆ ಹೋಗಬಹುದು. ಆದರೆ ಅವನು ತನ್ನ ಡೇರೆಯಿಂದ ಏಳು ದಿನಗಳವರೆಗೆ ಹೊರಗೆ ಇರಬೇಕು.


ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.


ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.


ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯನ್ನು ನಿಮ್ಮ ಸಮುದಾಯಕ್ಕೆ ಸೇರಿಸಿಕೊಳ್ಳಿರಿ. ಅವನ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ಅವನೊಂದಿಗೆ ವಾಗ್ವಾದ ಮಾಡಬೇಡಿ.


ಮೃದುವಾಗಿರುವ ಆತನು ಹುಲ್ಲಿನ ಕಡ್ಡಿಯನ್ನೂ ತುಂಡುಮಾಡುವದಿಲ್ಲ. ಕಿಡಿ ಬೆಂಕಿಯನ್ನೂ ಆತನು ಆರಿಸನು. ಆತನು ನೀತಿಯಿಂದ ನ್ಯಾಯವಿಚಾರಣೆಮಾಡಿ ಸತ್ಯವನ್ನು ಕಂಡುಕೊಳ್ಳುವನು.


ಯಾವನಾದರೂ, “ನನ್ನ ಹೃದಯವನ್ನು ಶುದ್ಧೀಕರಿಸಿರುವೆ. ನಾನು ಪಾಪರಹಿತನಾಗಿರುವೆ” ಎಂದು ಹೇಳಲು ಸಾಧ್ಯವೇ?


ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.


ಆಗ ಪರಲೋಕದಿಂದಲೇ ನೀನು ಅವರ ಪ್ರಾರ್ಥನೆಗಳನ್ನು ಆಲಿಸಿ ಅವರಿಗೆ ಸಹಾಯ ಮಾಡು.


ಈ ಕಾರ್ಯಗಳಲ್ಲಿ ಯಾವುದಾದರೊಂದು ಸಂಭವಿಸಿದಾಗ, ಒಬ್ಬ ಮನುಷ್ಯನು ಮಾತ್ರ ತನ್ನ ಪಾಪಕ್ಕಾಗಿ ಕ್ಷಮೆಯನ್ನು ಯಾಚಿಸಿ ಈ ಆಲಯದ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದರೆ,


ನೀವು ದ್ರೋಹಿಗಳೇ, ನೀವು ಆತನ ಮಕ್ಕಳಲ್ಲ. ನಿಮ್ಮ ಪಾಪಗಳು ಆತನನ್ನು ಮಲಿನ ಮಾಡುವವು. ನೀವು ಡೊಂಕಾದ ಸುಳ್ಳುಗಾರರು.


“ಒಬ್ಬ ಮನುಷ್ಯನ ಮೇಲೆ ಊತವಾಗಲಿ ಗುಳ್ಳೆಯಾಗಲಿ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಮಚ್ಚೆಯು ಕುಷ್ಠರೋಗದಂತೆ ಕಂಡುಬಂದರೆ, ಅವನನ್ನು ಯಾಜಕನಾದ ಆರೋನನ ಬಳಿಗೆ ಅಥವಾ ಯಾಜಕರಾದ ಅವನ ಪುತ್ರರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.


ಈ ಪ್ರಾಣಿಯ ಮಾಂಸವನ್ನು ತಿನ್ನುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸತ್ತ ಪ್ರಾಣಿಯನ್ನು ಎತ್ತುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಯಾವನಾದರೂ ಅವುಗಳ ಹೆಣಗಳನ್ನು ಎತ್ತಿದರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಆ ಪ್ರಾಣಿಗಳು ನಿಮಗೆ ಅಶುದ್ಧವಾಗಿವೆ.


ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬದಲಾಗದೆ ಚರ್ಮದ ಮೇಲೆ ಹರಡಲಿಲ್ಲವೆಂದು ಯಾಜಕನು ಕಂಡರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳವರೆಗೆ ಇತರ ಜನರಿಂದ ಪ್ರತ್ಯೇಕಿಸಬೇಕು.


“ಆದರೆ ಆ ವ್ಯಕ್ತಿಯ ಗುಳ್ಳೆಯು ಚರ್ಮದ ಮೇಲೆ ಹೆಚ್ಚಾಗಿ ಹರಡಿದರೆ, ಆ ವ್ಯಕ್ತಿಯು ಯಾಜಕನ ಬಳಿಗೆ ಮತ್ತೆ ಬರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು