Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:34 - ಪರಿಶುದ್ದ ಬೈಬಲ್‌

34 “ನಾನು ನಿಮ್ಮ ಜನರಿಗೆ ಕಾನಾನ್ ದೇಶವನ್ನು ಕೊಡುತ್ತಿದ್ದೇನೆ. ನಿಮ್ಮ ಜನರು ಆ ದೇಶದಲ್ಲಿ ಪ್ರವೇಶಿಸಿ ನೆಲೆಸುವರು. ಆಗ ಯಾರ ಮನೆಯಲ್ಲಾದರೂ ಬೂಷ್ಟು ಉಂಟಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ನಿಮಗೆ ಸ್ವದೇಶವಾಗಿ ನಾನು ಕೊಡುವ ಕಾನಾನ್ ನಾಡಿಗೆ ನೀವು ಬಂದ ನಂತರ ಆ ನಾಡಿನ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಸೂಚಿಸುತ್ತೇನೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಿಮಗೆ ಸ್ವದೇಶವಾಗಿರುವದಕ್ಕೋಸ್ಕರ ನಾನು ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ನಾನು ನಿಮಗೆ ಸೊತ್ತಾಗಿ ಕೊಡುವ ಕಾನಾನ್ ದೇಶದೊಳಗೆ ನೀವು ಬಂದ ಬಳಿಕ ನಾನು ನಿಮಗೆ ಸೊತ್ತಾಗಿ ಕೊಡುವ ಮನೆಯಲ್ಲಿ ಬೂಜನ್ನು ಬರಮಾಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:34
28 ತಿಳಿವುಗಳ ಹೋಲಿಕೆ  

“ಮೋವಾಬ್ ಪ್ರಾಂತ್ಯದಲ್ಲಿರುವ ಅಬಾರೀಮ್ ಬೆಟ್ಟದ ಸಾಲಿಗೆ ಹೋಗಿ ಅಲ್ಲಿ ನೆಬೋ ಬೆಟ್ಟವನ್ನೇರು. ಇದು ಜೆರಿಕೊ ಕೋಟೆಗೆ ಎದುರಾಗಿ ಇದೆ. ಅಲ್ಲಿಂದ ನಾನು ಇಸ್ರೇಲರಿಗೆ ಕೊಡುವ ಕಾನಾನ್ ದೇಶವನ್ನು ನೀನು ನೋಡುವಿ.


ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.


ಯೆಹೋವನ ಸ್ವರವು ಪಟ್ಟಣದಲ್ಲಿ ಗಟ್ಟಿಯಾಗಿ ಕೇಳಿಸುತ್ತದೆ. “ಬುದ್ಧಿವಂತನು ಯೆಹೋವನ ನಾಮವನ್ನು ಗೌರವಿಸುವನು. ಆದ್ದರಿಂದ ಶಿಕ್ಷೆಯ ಬೆತ್ತದ ಕಡೆಗೆ ಲಕ್ಷ್ಯವಿಡು. ಆ ಬೆತ್ತವನ್ನು ಹಿಡುಕೊಂಡವನನ್ನೂ ಗೌರವಿಸು.


ನೋಡು, ಯೆಹೋವನು ಆಜ್ಞೆಯನ್ನು ಕೊಡುವನು. ಆಗ ಭವ್ಯಭವನಗಳು ಒಡೆದು ಚೂರುಚೂರಾಗಿ ಬೀಳುವವು. ಮತ್ತು ಸಣ್ಣ ಮನೆಗಳು ಚಿಂದಿಚಿಂದಿಯಾಗಿ ಚೂರಾಗುವವು.


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು.


ದುಷ್ಟರ ಮನೆಯ ಮೇಲೆ ಯೆಹೋವನ ಶಾಪವಿರುವುದು; ಆದರೆ ನೀತಿವಂತರ ಮನೆಯ ಮೇಲೆ ಆತನ ಆಶೀರ್ವಾದವಿರುವುದು.


ಯೆಹೋವನು ಜನರಿಗೆ ಸಾವನ್ನೂ ತರುವನು. ಅಂತೆಯೇ ಅವರಿಗೆ ಜೀವವನ್ನೂ ದಯಪಾಲಿಸುವನು. ಆತನು ಅವರಿಗೆ ಮರುಜೀವವನ್ನು ದಯಪಾಲಿಸಬಲ್ಲನು. ಯೆಹೋವನು ಜನರನ್ನು ಮರಣ ಸ್ಥಳವಾದ ಪಾತಾಳಕ್ಕೆ ತಳ್ಳುವನು.


ಯೆಹೋಶುವನು ತುಂಬಾ ಮುದುಕನಾದಾಗ ಯೆಹೋವನು ಅವನಿಗೆ, “ಯೆಹೋಶುವನೆ, ನೀನು ವೃದ್ಧನಾದೆ. ಆದರೆ ನೀನು ಇನ್ನೂ ಸ್ವಾಧೀನಪಡಿಸಿಕೊಳ್ಳಬೇಕಾದ ಪ್ರದೇಶ ಬಹಳಷ್ಟಿದೆ” ಅಂದನು.


ಅದರ ಮೇಲೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಬರೆಯಿರಿ. ನೀವು ನದಿಯನ್ನು ದಾಟಿದಾಗ ಈ ಕಾರ್ಯವನ್ನು ಮಾಡಬೇಕು. ಅನಂತರ, ಆತನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಸಮೃದ್ಧಿಯಾದ ದೇಶದೊಳಕ್ಕೆ ಹೋಗಿರಿ.


“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಬೇಗನೆ ಪ್ರವೇಶಿಸಲಿದ್ದೀರಿ. ಆ ದೇಶವನ್ನು ಸ್ವಾಧೀನಮಾಡಿಕೊಂಡು ಅಲ್ಲಿ ನೆಲೆಸುವಿರಿ.


“ಬೇರೆ ಜನಾಂಗಗಳು ವಾಸಿಸುವ ದೇಶವನ್ನು ನಿಮ್ಮ ದೇವರು ನಿಮಗೆ ಕೊಡುತ್ತಿದ್ದಾನೆ. ಆ ಜನಾಂಗಗಳನ್ನು ಆತನು ನಾಶಮಾಡುತ್ತಾನೆ. ಅವರು ವಾಸಿಸುತ್ತಿದ್ದ ಸ್ಥಳಗಳಲ್ಲಿ ನೀವು ವಾಸಿಸುವಿರಿ. ಅವರ ಮನೆಗಳನ್ನೂ ಪಟ್ಟಣಗಳನ್ನೂ ನೀವು ವಶಪಡಿಸಿಕೊಳ್ಳುವಿರಿ. ಅಂಥಾ ಸಮಯದಲ್ಲಿ


“ನಿಮಗೆ ಸಿಗುವ ಹೊಸ ದೇಶದಲ್ಲಿ ಈ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಆ ಕಟ್ಟಳೆಗಳನ್ನು ತಪ್ಪದೇ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ಈ ದೇಶವನ್ನು ನಿಮಗೆ ಕೊಡುತ್ತಿದ್ದಾನೆ.


ನಿಮ್ಮಿಂದ ಎಲ್ಲಾ ತರದ ಕಾಯಿಲೆಗಳನ್ನು ಯೆಹೋವನು ತೆಗೆದುಹಾಕುವನು. ಈಜಿಪ್ಟಿನಲ್ಲಿ ನಿಮ್ಮನ್ನು ಬಾಧಿಸುತ್ತಿದ್ದ ಭಯಂಕರ ಕಾಯಿಲೆಗಳು ನಿಮ್ಮನ್ನು ಬಾಧಿಸುವುದಿಲ್ಲ. ಆ ಕಾಯಿಲೆಗಳು ನಿಮ್ಮ ವೈರಿಗಳಿಗೆ ಉಂಟಾಗುವವು.


“ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು: ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ


ನಾವೇ ಯುದ್ಧ ಮಾಡುವ ಸೈನಿಕರಾಗಿ ನದಿಯನ್ನು ದಾಟಿ ಯೆಹೋವನ ಮುಂದೆ ಕಾನಾನ್ ದೇಶದೊಳಗೆ ಹೋಗುವೆವು. ಆದರೆ ನಮ್ಮ ಸ್ವಾಸ್ತ್ಯವಾದ ಭೂಮಿಯು ಜೋರ್ಡನ್ ನದಿಯ ಈಚೆಕಡೆಯಲ್ಲಿರುವುದು” ಎಂದರು.


“ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುತ್ತಿರುವ ದೇಶಕ್ಕೆ ನೀವು ಪ್ರವೇಶಿಸುವಿರಿ. ಆ ಸಮಯದಲ್ಲಿ ನೀವು ಭೂಮಿಗೆ ವಿಶ್ರಾಂತಿಯ ಸಮಯವಿರುವುದಕ್ಕೆ ಬಿಡಬೇಕು. ಇದು ಯೆಹೋವನನ್ನು ಸನ್ಮಾನಿಸುವುದಕ್ಕಾಗಿರುವ ವಿಶೇಷವಾದ ವಿಶ್ರಾಂತಿಯ ಸಮಯವಾಗಿರುವುದು.


“ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುವ ದೇಶದಲ್ಲಿ ನೀವು ನೆಲೆಸಿದ ನಂತರ ಅಲ್ಲಿ ಬೆಳೆಯನ್ನು ಕೊಯ್ಯುವಿರಿ. ಆ ಸಮಯದಲ್ಲಿ ನಿಮ್ಮ ಬೆಳೆಯ ಪ್ರಥಮ ಸಿವುಡನ್ನು ಯಾಜಕನ ಬಳಿಗೆ ತರಬೇಕು.


ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.


ಆದ್ದರಿಂದ ಹೋಗು, ನಿನ್ನ ಭೂಮಿಯಲ್ಲೆಲ್ಲಾ ತಿರುಗಾಡು. ಅದರ ಉದ್ದಗಲಗಳಲ್ಲೆಲ್ಲಾ ತಿರುಗಾಡು; ಯಾಕೆಂದರೆ ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನೆಂದರೆ;


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.’”


ಬಟ್ಟೆಯಲ್ಲಿ ಅಥವಾ ಮನೆಯಲ್ಲಿ ಕಾಣಿಸಿಕೊಳ್ಳುವ ಬೂಷ್ಟಿನ ಕುರಿತು ಅನುಸರಿಸಬೇಕಾದ ನಿಯಮಗಳು ಇವೇ.


ನೀವು ಅವರ ದೇಶವನ್ನು ಪಡೆಯುವಿರಿ ಎಂದು ನಾನು ನಿಮಗೆ ಹೇಳಿದ್ದೇನೆ. ನಾನು ಅವರ ದೇಶವನ್ನು ನಿಮಗೆ ಕೊಡುವೆ. ಅದು ನಿಮ್ಮ ದೇಶವಾಗಿರುವದು. ಅದು ಅನೇಕ ಒಳ್ಳೆ ಸಂಗತಿಗಳಿಂದ ತುಂಬಿದ ದೇಶವಾಗಿದೆ. ನಾನು ನಿಮ್ಮ ದೇವರಾಗಿರುವ ಯೆಹೋವನು! “ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿಕೊಂಡಿದ್ದೇನೆ. ನಾನು ನಿಮ್ಮನ್ನು ಇತರ ಜನರಿಂದ ಆರಿಸಿಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು